ಕೆಂಪು‌ಕಲ್ಲು ದರ ಇಳಿಕೆಗೆ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಬೇಕು; ಸಿಪಿಐಎಂ ಆಗ್ರಹ

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಹವಾಲು ಸಭೆ ನಡೆಸಿ, ಕೆಂಪು ಕಲ್ಲಿನ ದರ ನಿಗದಿಯನ್ನು ಜಿಲ್ಲಾಡಳಿತವೇ ಮಾಡಬೇಕು ರಾಜಧನವನ್ನು 257 ರೂ. ಗಳಿಂದ 97 ರೂ. ಗಳಿಗೆ ಇಳಿಕೆ ಮಾಡಿದ ತರುವಾಯವೂ ಕೆಂಪು ಕಲ್ಲು ಬೆಲೆಯನ್ಜು ಎರಡು ಪಟ್ಟು ಏರಿಕೆ ಮಾಡಿರುವ ಕೆಂಪುಕಲ್ಲು ಪಾಯಗಳ ಮಾಲಕರ ನೀತಿ ಕಾಳದಂಧೆಯ ವ್ಯಾಪಾರವನ್ನು ನೆನಪಿಸುವಂತಿದೆ. ಈ ವಿಪರೀತ ದರ ಏರಿಕೆ ಕಡಿಮೆ ಆದಾಯದ ಜನತೆಯ ಮನೆ ಕಟ್ಟುವ ಕನಸನ್ನು ಭಗ್ನಗೊಳಿಸಿದೆ, ಕಟ್ಟಡ ನಿರ್ಮಾಣ ಕಾರ್ಮಿಕರ ದುಡಿಮೆಗೆ ಬರೆ ಎಳೆದಿದೆ. ದ.ಕ. ಜಿಲ್ಲಾಧಿಕಾರಿಗಳು ಈ […]

Continue Reading

ಮುಚ್ಚಿ ಹೋಗಿರುವ ಕನ್ಯಾನ ಪೊಲೀಸ್ ಹೊರಠಾಣೆ ಆರಂಭಿಸಬೇಕು. ಗಡಿಭಾಗದ ಬೆರಿಪದವುನಲ್ಲಿ ಪೊಲೀಸ್ ಚೆಕ್ ಪೋಸ್ಟ್ ತೆರೆಯಬೇಕು.

ಸರ್ಕಾರಕ್ಕೆ, ಗೃಹ ಇಲಾಖೆಗೆ, ನಾಗರಿಕರ ಒತ್ತಾಯ . ವಿಟ್ಲ : ಅಂತರಾಜ್ಯಗಡಿ ಭಾಗದ ಕನ್ಯಾನದಲ್ಲಿ ಐದು ವರ್ಷಗಳ ಹಿಂದೆ ಆರಂಭವಾಗಿದ್ದ ಪೊಲೀಸ್ ಹೊರಠಾಣೆ ಒಂದು ವರ್ಷದಲ್ಲೇ ಕೋಮಾ ಸ್ಥಿತಿಗೆ ತಲುಪಿ ನಿರ್ಜೀವಗೊಂಡಿದೆ. 30/01/2021ರಂದು ಲೋಕಾರ್ಪಣೆ ಆಗಿದ್ದ ಕನ್ಯಾನ ಪೊಲೀಸ್ ಹೊರಠಾಣೆ ಒಂದು ವರ್ಷದಲ್ಲೇ ಮುಚ್ಚಿ ಹೋಗಿತ್ತು. ಬೆರಿಪದವು ಗಡಿಭಾಗದಲ್ಲಿ ಚೆಕ್ ಪೋಸ್ಟ್ ಒತ್ತಾಯ.ಕೇರಳ ಗಡಿ ಭಾಗದ ಪೆರುವಾಯಿ ಗ್ರಾಮದಲ್ಲೂ ದೋ ನಂಬರ್ ದಂಧೆಯ ಖದೀಮರು ತಮ್ಮ ಸಾಮ್ರಾಜ್ಯ ಸ್ಥಾಪಿಸಲು ಹೆಣಗಾಡುತ್ತಿದ್ದಾರೆ.ಕೇರಳದಿಂದ ಬೆರಿಪದವು ಮೂಲಕ ಪೆರುವಾಯಿ ಗ್ರಾಮವನ್ನು ಸಂಪರ್ಕಿಸಿ […]

Continue Reading

ಯಕ್ಷಗಾನ ಕಲಾವಿದ ಈಶ್ವರ ಗೌಡ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಉಡುಪಿ : ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆಯಲ್ಲಿ ಮಹಿಷಾಸುರನ ಪಾತ್ರ ಮುಗಿಸಿ ಚೌಕಿಗೆ ನಿರ್ಗಮಿಸುತ್ತಿದ್ದಂತೆ ಈಶ್ವರ ಗೌಡರು ( 51) ಹೃದಯಾಘಾತದಿಂದ ನಿನ್ನೆ ನಿಧನರಾದರು. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಈಶ್ವರ ಗೌಡರು ಬುಧವಾರ ರಾತ್ರಿ ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥ ಗೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ […]

Continue Reading

ಸುಖಾನಂದ ಶೆಟ್ಟಿ ಹತ್ಯೆಯ ಪ್ರಮುಖ ಆರೋಪಿಗೆ ಆಶ್ರಯ ನೀಡಿದ ಅಡ್ಡೂರಿನ ಸಲಾಂ 19 ವರ್ಷಗಳ ನಂತರ ಖಾಕಿ ಬಲೆಗೆ

2006 ಡಿಸೆಂಬರ್ 1 ರಂದು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಬಳಿ ಬಿಜೆಪಿ ಮುಖಂಡ ಸುಖಾನಂದ ಶೆಟ್ಟಿಯನ್ನು ಗುರುಪುರ ಕಬೀರ್ ಹಾಗೂ ಆತನ ಸಹಚರರು ಸೇರಿಕೊಂಡು ಹತ್ಯೆ ಮಾಡಿದ್ದರು. ಸುಖಾನಂದ ಶೆಟ್ಟಿ ಹತ್ಯೆ ಆ ದಿನಗಳಲ್ಲಿ ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ಪ್ರಕರಣದ ಪ್ರಮುಖ ಆರೋಪಿ ಕಬೀರ್ ಎಂಬಾತನಿಗೆ ಲತೀಫ್ ಯಾನೆ ಅಡ್ಡೂರು ಲತೀಫ್ ಹಾಗೂ ಪ್ರಸ್ತುತ ಕಿನ್ನಿಪದವು ನಿವಾಸಿ ಅಬ್ದುಲ್ ಸಲಾಂ ಅಡ್ಡೂರು ಎಂಬ ಸಹೋದರರು ತಮ್ಮ ಅಡ್ಡೂರು ಟಿಬೇಟ್ ಕಾಲೋನಿಯಲ್ಲಿರುವ ಮನೆಯಲ್ಲಿ ಎರಡು […]

Continue Reading

ಮಂಗಳೂರು: ವಕೀಲರಿಗೆ ನಿಂದನೆ ಆರೋಪ; ಮಹಿಳಾ ಠಾಣಾ ಇನ್ಸ್ ಪೆಕ್ಟರ್ ಬಾಲಕೃಷ್ಣ ವಿರುದ್ಧ ಪೊಲೀಸ್ ಆಯುಕ್ತರಿಗೆ, ಮಾನವ ಹಕ್ಕು ಆಯೋಗಕ್ಕೆ, ಡಿಜಿಪಿಗೆ ದೂರು

ಡಿವೈಎಫ್ಐ ಮುಖಂಡರು, ವಕೀಲರಾಗಿರುವ ನಿತಿನ್ ಕುತ್ತಾರ್ ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ವೃತ್ತಿ ಧರ್ಮಕ್ಕೆ ಅಪಮಾನ ಮಾಡಿರುವ ಆರೋಪದಲ್ಲಿ ಮಂಗಳೂರು ನಗರ ಮಹಿಳಾ ಠಾಣೆಯ ಪೊಲೀಸ್ ನಿರೀಕ್ಷರಾಗಿರುವ ಬಾಲಕೃಷ್ಣ ಎಂಬವರ ವಿರುದ್ಧ ಪೊಲೀಸ್ ಆಯುಕ್ತರಿಗೆ, ಮೇಲಾಧಿಕಾರಿಗಳಿಗೆ, ಮಾನವ ಹಕ್ಕು ಆಯೋಗಕ್ಕೂ ದೂರು ಸಲ್ಲಿಸಲಾಗಿದೆ. ಮಂಗಳೂರು ನಗರದಲ್ಲಿ ಏಳೆಂಟು ವರ್ಷಗಳಿಂದ ವಕೀಲ ವೃತ್ತಿ ನಡೆಸಿಕೊಂಡು ಬರುವ ಯುವ ವಕೀಲ ನಿತಿನ್ ಕುತ್ತಾರ್ ನವೆಂಬರ್ 13 ರಂದು ಕೌಟುಂಬಿಕ ವಿಚಾರವಾಗಿ ಕಕ್ಷಿದಾರರ ಪರವಾಗಿ ಮಂಗಳೂರು ನಗರ ಮಹಿಳಾ ಠಾಣೆಗೆ ಭೇಟಿ […]

Continue Reading

National Level Beauty Pageant ನ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ವಿನ್ನರ್ ಪ್ರಶಸ್ತಿ ಪಡೆದುಕೊಂಡ ಉಡುಪಿಯ ಸಚಿತ ರಾವ್

ಉಡುಪಿ : ಉಡುಪಿಯ ಪುಟಾಣಿ ಪ್ರತಿಭೆಯಾದ ಸಚಿತ ರಾವ್ ಅವರು ಇತ್ತೀಚೆಗೆ ನಡೆದ ಎರಡು ಪ್ರಮುಖ ಸೌಂದರ್ಯ ಸ್ಪರ್ಧೆಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ನವೆಂಬರ್ 15 ರಂದು ಬೆಂಗಳೂರಿನ ಆರ್.ಆರ್. ನಗರದಲ್ಲಿ ನಡೆದ National Level Beauty Pageant ನ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ವಿನ್ನರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ನವೆಂಬರ್ 16 ರಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ಮಿಸ್ ಮಲೆನಾಡು 2025 ಬ್ಯೂಟಿ ಕಾಂಟೆಸ್ಟ್‌ನಲ್ಲಿ ಮೊದಲ ರನ್ನರ್ ಅಪ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಉಡುಪಿಯ […]

Continue Reading

ಯಕ್ಷಗಾನ ಹಾಸ್ಯಗಾರ ರವಿಶಂಕರ ವಳಕ್ಕುಂಜ ಅವರ 2 ಕೃತಿಗಳು ಲೋಕಾರ್ಪಣೆ

ಯಕ್ಷಗಾನ ಕ್ಷೇತ್ರ ಕಲಾವಿದರು ಹಾಗೂ ವಿದ್ವಾಂಸರ ಸಂಗಮ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಉಡುಪಿ : ಯಕ್ಷಗಾನ ಹಾಸ್ಯಗಾರ ರವಿಶಂಕರ ವಳಕ್ಕುಂಜ ಅವರು ಯಕ್ಷಗಾನದ ಬಗ್ಗೆ 7 ಕೃತಿಗಳನ್ನು ಬರೆದು ಬಿಡುಗಡೆ ಮಾಡಿರುವುದು ಓರ್ವ ಕಲಾವಿದನಾಗಿ ಯಕ್ಷಲೋಕಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಕಟೀಲು ಕ್ಷೇತ್ರದ ರಥಬೀದಿಯಲ್ಲಿ ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಏಳನೇ ಮೇಳದ ಉದ್ಘಾಟನೆ […]

Continue Reading

ಕುಖ್ಯಾತ ಅಂತರಾಜ್ಯ ಕಳ್ಳ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ. 40 ಕ್ಕೂ ಅಧಿಕ ಕಳವು ಪ್ರಕರಣದ ಆರೋಪಿ

5,65,000 ರೂ. ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣ, ದ್ವಿಚಕ್ರ ವಾಹನ ವಶ. ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಎಂಬಲ್ಲಿ ದಿನಾಂಕ 02.10.2025 ರಿಂದ ದಿನಾಂಕ 6.10.2025ರ ಮಧ್ಯದ ಅವಧಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ನಡೆದ ಸುಮಾರು 149 ಗ್ರಾಂ ತೂಕದ ಒಟ್ಟು 9.5 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 85/2025 ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನುಹತ್ತಿದ ಪೊಲೀಸರು ತನಿಖೆ ನಡೆಸಲಾಗಿ, ಹೊರ ರಾಜ್ಯಗಳಲ್ಲಿ […]

Continue Reading

ಕುಪ್ಪೆಪದವು: ಮನೆ ನಿವೇಶನ ವಂಚಿತರಿಂದ ಧರಣಿ; ಜನವರಿ 15 ರ ಒಳಗಡೆ ಜಮೀನು ಮಂಜೂರು ಗೊಳಿಸುವ ಭರವಸೆ: ಮಂಗಳೂರು ತಹಶೀಲ್ದಾರ್

2017 ರಲ್ಲಿ‌ ಹಕ್ಕುಪತ್ರ ವಿತರಿಸಿ, ಈವರೆಗೂ ಜಮೀನು ಸ್ವಾಧೀನ ನೀಡದ ಕುಪ್ಪೆಪದವು ಗ್ರಾಮಪಂಚಾಯತ್ ವ್ಯಾಪ್ತಿಯ ಮನೆ ನಿವೇಶನ ವಂಚಿತರು, ನಿವೇಶನ ರಹಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಇಂದು ಕುಪ್ಪೆಪದವು ಗ್ರಾಮ ಪಂಚಾಯತ್ ಮುಂಭಾಗ ಧರಣಿ ನಡೆಸಿದರು. ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಹಕ್ಕು ಪತ್ರ ವಿತರಿಸಿ ನಿವೇಶನ ಸ್ವಾಧೀನ ನೀಡದೆ ಸತಾಯಿಸುವುದು ಅಮಾನವೀಯ ನಡೆ, ಇದು ಬಡವರ ಕುರಿತಾದ ಅನಾದಾರವನ್ನು ತೋರಿಸುತ್ತದೆ. ಕಳೆದ ಮೇ ತಿಂಗಳಲ್ಲಿ ನಡೆಸಿದ ಅನಿರ್ದಿಷ್ಟಾವಧಿ ಧರಣಿಯ […]

Continue Reading

ಅಕ್ರಮ ದನ ಕಳ್ಳ ಸಾಗಾಟ ಪ್ರಕರಣ; ಮೂಡಬಿದ್ರೆ ಪೊಲೀಸರಿಂದ ಆರೋಪಿಗಳ ಬಂಧನ

ಆರೋಪಿ ಮನ್ಸೂರ್ ಅದ್ಯಪಾಡಿ ಮೇಲೆ ಒಟ್ಟು 29 ಪ್ರಕರಣಗಳು ದಾಖಲಾಗಿದ್ದು, ಇದು ಈತನ ವಿರುದ್ದದ 30ನೇ ಪ್ರಕರಣ. ಮೂಡಬಿದ್ರೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ಮೂಡಬಿದ್ರೆ-ಹೊಸ್ಮಾರು ನೆಲ್ಲಿಕಾರು ಕಡೆಯಿಂದ ಆರೋಪಿಗಳು ಟಾಟಾ ಎಸಿ ಕಂಟೈನರ್ ವಾಹನವೊಂದರಲ್ಲಿ ಅಕ್ರಮವಾಗಿ ಮೂರು ಜಾನುವಾರುಗಳನ್ನು ಸಾಗಾಟ ಮಾಡಿಕೊಂಡು ಬರುತ್ತಿದ್ದು, ಅದರಲ್ಲಿದ್ದ ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ವದ್, ಮತ್ತು ಅಬ್ದುಲ್ ಮೊಹಮ್ಮದ್ ನಿಶಾಮ್ ಎಂಬ ಮೂವರನ್ನು ಮೂಡಬಿದ್ರೆ ಪೊಲೀಸರು ವಶಕ್ಕೆ ಪಡೆದಿರುತ್ತಾರೆ. ಆರೋಪಿಗಳ ವಿರುದ್ದ ಅಪರಾಧ ಕ್ರಮಾಂಕ 178/2025 […]

Continue Reading