ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ.

ಆರೋಪಿಗಳ ಪರ ಜಾಮೀನು ಕೊಡುವವರು ಆರೋಪಿಯ ಪೂರ್ವಾಪರ ತಿಳಿದುಕೊಂಡು ಎಚ್ಚರ ವಹಿಸಿ: ಮಂಗಳೂರು ಪೊಲೀಸ್ ಆಯುಕ್ತರು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತ್ತಿಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ತನಿಖೆಯನ್ನು ಪೂರೈಸಿ, ಮಾನ್ಯ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ನಂತರ ಕೆಲವು ಪ್ರಕರಣಗಳಲ್ಲಿ ಆರೋಪಿಗಳು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆರೋಪಿಗಳು ತಲೆಮರೆಸಿಕೊಂಡಿರುವ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಆರೋಪಿಗಳ ಬಿಡುಗಡೆ ಸಮಯದಲ್ಲಿ ಸ್ಯೂರಿಟಿದಾರರು ಭದ್ರತೆಯ ಆಧಾರವಾಗಿ ನೀಡಿದ ಜಮೀನು/ಸೊತ್ತು ವಿವರಗಳನ್ನು ಸಂಗ್ರಹಿಸಲಾಗಿದೆ. ಮಾನ್ಯ ನ್ಯಾಯಾಲಯದಿಂದ ಆದೇಶವನ್ನು ಪಡೆದು ಸ್ಯೂರಿಟಿದಾರರಿಗೆ […]

Continue Reading

ಹಲವಾರು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ

ಇಪ್ಪತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಫಾರೂಕ್@ಉಮ್ಮರ್ ಫಾರೂಕ್ ಸಜಿಪ ಮೂಡ, ಬಂಟ್ವಾಳ ತಾಲೂಕು ಎಂಬಾತನನ್ನು ದಿನಾಂಕ 15/10/2025 ರಂದು ಬಂಟ್ವಾಳ ತಾಲೂಕಿನ ಮದ್ವ ಎಂಬಲ್ಲಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿರುತ್ತದೆ. ಈತನ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ ನಂ:38/2039/2020, 48/2012, 119/2020ಕಡಬ ಪೊಲೀಸ್ ಠಾಣಾ ಅ.ಕ್ರ 43/2020, 44/2020, 45/2020, 46/2020 ಮತ್ತುವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಕೋಣಾಜೆ, […]

Continue Reading

ಪುತ್ತೂರು: ಪುತ್ತೂರು ನಗರ ಪೊಲೀಸರ ಕಾರ್ಯಾಚರಣೆ, ಮನೆ ಕಳ್ಳತನದ ಆರೋಪಿಯ ಬಂಧನ

ಪುತ್ತೂರು ತಾಲೂಕು ನಿವಾಸಿ ರೇವತಿ ಎಂಬವರ ಮನೆಯಿಂದ ನಗದು ಹಾಗೂ ಚಿನ್ನಭರಣ ಕಳವುಗೈದು ಪರಾರಿಯಾದ ಆರೋಪಿ ಪ್ರವೀಣ್ ಸಿಟಿ ಗುಡ್ಡೆ ಮನೆ, ಕಬಕ ಗ್ರಾಮ ಪುತ್ತೂರು ತಾಲೂಕು ಎಂಬಾತನನ್ನು ಬಂಧಿಸುವಲ್ಲಿ ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿರುತ್ತಾರೆ. ಶ್ರೀಮತಿ ರೇವತಿ ಪುತ್ತೂರು ಎಂಬವರ ದೂರಿನಂತೆ ದಿನಾಂಕ:12.10.2025 ರಂದು ಬೆಳಿಗ್ಗೆ ಸಮಯ 10:00 ರಿಂದ ಸಾಯಂಕಾಲ 5 ಗಂಟೆ ಸಮಯದ ಮಧ್ಯಾವದಿಯಲ್ಲಿ ತನ್ನ ವಾಸದ ಮನೆಯಿಂದ ಯಾರೋ ಕಳ್ಳರು ಒಂದು ಚಿನ್ನದ ಬಳೆ, ಒಂದು ಜೊತೆ ಕಿವಿಯೋಲೆ ಹಾಗೂ ಒಂದು […]

Continue Reading

ಸಿಜೆಐ ಮೇಲಿನ ಶೂ ದಾಳಿಯನ್ನು ಸಮರ್ಥಿಸುವವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ; ಸಿಎಂಗೆ ವಕೀಲ ಮನೋರಾಜ್ ಆಗ್ರಹ

ಸಿಜೆಐ ಮೇಲಿನ ದಾಳಿ ಸಮರ್ಥಿಸಿ ಪೋಸ್ಟ್; ವಕೀಲರ ಆಕ್ರೋಶ, ಕ್ರಿಮಿನಲ್ ಪ್ರಕ್ರಿಯೆಗೆ ಆದೇಶಿಸಲು ಸಿಎಂಗೆ ಆಗ್ರಹ ಸಿಜೆಐ ಮೇಲೆ ದಾಳಿ ನಡೆಸಿದವರಷ್ಟೇ ಅಲ್ಲ, ಬೆಂಬಲಿಸಿ ಪೋಸ್ಟ್ ಹಾಕಿದವರಿಗೂ ಸಂಚಕಾರ? ಸಿಎಂ ಮೇಲೆ ವಕೀಲರ ಒತ್ತಡ ಸಿಜೆಐ ಮೇಲಿನ ದಾಳಿ ಬೆಂಬಲಿಸುತ್ತಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ; ಸರ್ಕಾರಕ್ಕೆ ವಕೀಲ ಮನೋರಾಜ್ ರಾಜೀವ್ ಆಗ್ರಹ ಮಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದು ಅಪಮಾನಿಸಿದ ಕೃತ್ಯದ ವಿರುದ್ಧ […]

Continue Reading

ನಿಡ್ಡೋಡಿಯಲ್ಲಿ ಗ್ಯಾಂಗ್ ರೇಪ್ ಗೆ ಸಿದ್ದತೆ; ಇನ್ಸ್ ಪೆಕ್ಟರ್ ಸಂದೇಶ್ ರವರ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ

ಅಪ್ರಾಪ್ತ ಬಾಲಕಿಯರ ಗ್ಯಾಂಗ್ ರೇಪ್ ಗೆ ರೆಡಿಯಾಗುತ್ತಿದ್ದಂತೆ ಅಪತ್ಬಾಂಧವನಾಗಿ ಬಂದ ಇನ್ಸ್ ಪೆಕ್ಟರ್ ಸಿಂಗಂ ಸಂದೇಶ್, ನಾಲ್ಕು ಮಂದಿ ಅಂದರ್ ನಿಡ್ಡೋಡಿ ಪರಿಸರದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ನಾಲ್ಕು ಮಂದಿ ಯುವಕರ ತಂಡವೊಂದು ಸಿಕ್ಕಿಬಿದ್ದಿದ್ದು ಸಂಭಾವ್ಯ ಗ್ಯಾಂಗ್ ರೇಪ್ ಒಂದನ್ನು ಮೂಡುಬಿದಿರೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ.ಅವರ ಸಮಯ ಪ್ರಜ್ಞೆಯಿಂದ ತಪ್ಪಿ ಹೋಗಿದೆ. ಅಪ್ರಾಪ್ತ ಬಾಲಕಿಯರೊಂದಿಗೆ ಮಾಯಾಲೋಕ ಸೃಷ್ಟಿಸಲು ಹೊರಟಿದ್ದ ನಾಲ್ವರ ಹೆಡೆಮುರಿ ಕಟ್ಟಲಾಗಿದೆ. ಬಂಧಿತರನ್ನು ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ಞೇಶ್, ದಿಲೀಪ್ ಹಾಗೂ ಶ್ರೀಕಾಂತ್ […]

Continue Reading

ಬಾಲಕಿಯ ಮೃತದೇಹ ಮನೆಗೆ ಕೊಂಡೊಯ್ಯುತ್ತಿರುವಾಗ ಕಿಡಿಗೇಡಿಗಳಿಂದ ಆಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ, ರಸ್ತೆ ಮದ್ಯೆ ತಡೆ, ಪ್ರಕರಣ ದಾಖಲು

ಹೆಜ್ಜೇನು ಕಡಿತದಿಂದ ಮೃತಪಟ್ಟ ಬಾಲಕಿಯ ಮೃತದೇಹವನ್ನು ಮನೆಗೆ ಕೊಂಡೊಯ್ಯುತ್ತಿರುವಾಗ ಕಿಡಿಗೇಡಿಗಳು ಆಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿ, ರಸ್ತೆ ಮದ್ಯೆ ತಡೆದು ನಿಲ್ಲಿಸಿದ ಘಟನೆ ಪೆರ್ನೆ- ಕಡಂಬು ಎಂಬಲ್ಲಿ ನಡೆದಿದೆ. ದಿನಾಂಕ 12-10-2025 ರ ರಾತ್ರಿ 12:30 ಗಂಟೆಗೆ, ಪಡ್ನೂರು ಗ್ರಾಮದ ಕಾರ್ಲ ಶ್ರೀರಾಮ ಭಜನಾ ಮಂದಿರದ ಬಳಿ, ಶವ ಸಾಗಿಸುತ್ತಿದ್ದ KA-21 AE-3033 ಅಂಬುಲೆನ್ಸ್‌ ಅನ್ನು ಬೊಲೆರೋ ವಾಹನ (ನಂ: KA 19 AE 7322) ಹಿಂಬದಿಯಿಂದ ಓವರ್‌ಟೇಕ್ ಮಾಡಿ ರಸ್ತೆಗೆ ಅಡ್ಡಗಟ್ಟಿ ಅಕ್ರಮವಾಗಿ ತಡೆದ ಘಟನೆ ನಡೆದಿದೆ. […]

Continue Reading

ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಮಂಗಳವಾರದಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆಯು ಮಂಗಳೂರಿನ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದ ತನಕ ನಡೆಯಿತು. ಪ್ರತಿಭಟನೆಯನ್ನು ಉದ್ಘಾಟಿಸುತ್ತಾ ಫೆಡರೇಶನ್ ರಾಜ್ಯ ಸಮಿತಿಯ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರುರವರು ಮಾತನಾಡುತ್ತಾ ಲಕ್ಷಾಂತರ ಜನತೆಗೆ ಸಂಬಂಧಿಸಿ ಆಳುವ […]

Continue Reading

ಉಡುಪಿಯ ಸಾಂಸ್ಕೃತಿಕ ಹರಿಕಾರ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ 75ರ ಅಭಿನಂದನೆ

ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರು, ಉಡುಪಿಯ ಸಾಂಸ್ಕೃತಿಕ ಹರಿಕಾರ ಎಂದೇ ಖ್ಯಾತರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ 75 ವರ್ಷ ತುಂಬಿದ ಹಿನ್ನಲೆಯಲ್ಲಿ ಅಭಿಮಾನಿಗಳಿಂದ ಅಭಿನಂದನಾ ಕಾರ್ಯಕ್ರಮ ಭಾನುವಾರ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ತಲ್ಲೂರ್ಸ್ ಕುಟುಂಬದ ಫ್ಯಾಮಿಲಿ ವೈದ್ಯ ಡಾ. ಆರ್.ಎನ್.ಭಟ್ ಅವರಿಗೆ ಜಾನಪದ ಶೈಲಿಯಲ್ಲಿ ಗೌರವಾರ್ಪಣೆ ನಡೆಯಿತು. ವೈದ್ಯರತ್ನ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಡಾ.ಆರ್.ಎನ್. ಭಟ್, ಬಹಳ ವಿಶಿಷ್ಟ ರೀತಿಯಲ್ಲಿ ನಡೆದ ಈ ಸನ್ಮಾನದಿಂದ ಹೃದಯ ತುಂಬಿ […]

Continue Reading

ಬಜ್ಪೆ: ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾಗಿ ಸಿರಾಜ್ ಬಜ್ಪೆ ಆಯ್ಕೆ, ಹೊಸ ಕಾರ್ಯಕಾರಿ ಸಮಿತಿ ರಚನೆ

ದಿನಾಂಕ 10-10-2025ರ ಶುಕ್ರವಾರ ಸಂಜೆ ಬಜ್ಪೆ ಪಟ್ಟಣ ಪಂಚಾಯತ್ ಸಭಾಭವನದಲ್ಲಿ, ದಲಿತ ಸಂಘದ ರಾಜ್ಯ ಸಂಚಾಲಕರಾದ ಎಂ.ದೇವದಾಸ್ ರವರ ಅದ್ಯಕ್ಷತೆಯಲ್ಲಿ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯ ಕಾರ್ಯಕಾರಿ ಸಮಿತಿಯ ಸಭೆ ನಡೆಯಿತು.ಸರ್ವಾನುಮತದಿಂದ ಅಧ್ಯಕ್ಷರಾಗಿ ಸಿರಾಜ್ ಬಜ್ಪೆ ರವರನ್ನು ಆಯ್ಕೆಮಾಡಲಾಯಿತು. ಗೌರವ ಅದ್ಯಕ್ಷರುಗಳಾಗಿ ಎಂ. ದೇವದಾಸ್, ರಾಬರ್ಟ್ ರೇಗೊ, ಅಬ್ದುಲ್ ಖಾದರ್ MJM, ವಸಂತ್, ಮೊನಕ, ಉಪಾಧ್ಯಕ್ಷರುಗಳಾಗಿ ದೀಪಕ್ ಪೂಜಾರಿ, ಇಂಜಿನಿಯರ್ ಇಸ್ಮಾಯಿಲ್ ಮತ್ತು ಥೋಮಸ್. ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಗೋಪಾಲ ಸುವರ್ಣ, ಕಾರ್ಯದರ್ಶಿಯಾಗಿ ನಿಸಾರ್ ಕರಾವಳಿ, ಜೊತೆ […]

Continue Reading

ಸಿಜೆಐ ಮೇಲಿನ ದಾಳಿಯ ಹಿಂದೆ ಭಾರೀ ಸಂಚು ಸಾಧ್ಯತೆ; ಮನೋರಾಜ್ ಅನುಮಾನ

CJI ಮೇಲೆ ಶೂ ಎಸದವರು ಸನಾತನಿಗಳಲ್ಲ, ದೇಶದ್ರೋಹಿಗಳು; ಕಠಿಣ ಕಾನೂನು ಕ್ರಮಕ್ಕೆ ಮನೋರಾಜ್ ಆಗ್ರಹ ಸಿಜೆಐ ಮೇಲಿನ ಶೂ ದಾಳಿಗೆ ವ್ಯಾಪಕ ಖಂಡನೆ; ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮನೋರಾಜ್ ಆಗ್ರಹ ಮಂಗಳೂರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೂಷಣ್ ಗವಾಯಿ ಮೇಲೆ ವಕೀಲನೊಬ್ಬ ಶೂ ಎಸೆದ ಘಟನೆಯನ್ನು ಕಾಂಗ್ರೆಸ್ ಪಕ್ಷದ ಕಾನೂನು ಘಟಕ ಖಂಡಿಸಿದೆ. ಈ ಬಗ್ಗೆ ಕರ್ನಾಟಕದ ವಕೀಲರೂ ಆಕ್ರೋಶ ಹೊರಹಾಕಿದ್ದಾರೆ. ಮಂಗಳೂರಿನ ವಕೀಲರ ಸಂಘದ ಮಾಜಿ ಅಧ್ಯಕ್ಷರೂ ಆದ ಜಿಲ್ಲಾ ಕಾಂಗ್ರೆಸ್ ಕಾನೂನು […]

Continue Reading