ರಾಜಾಂಗಣದಲ್ಲಿ ಯಕ್ಷ ಪಂಚಮಿ ಸಮಾರೋಪ : ಕಲಾವಿದ ಅಜ್ರಿ ಗೋಪಾಲ ಗಾಣಿಗರಿಗೆ ತಲ್ಲೂರ್ಸ್ ಪ್ಯಾಮಿಲಿ ಟ್ರಸ್ಟ್ ಯಕ್ಷ ಪ್ರಶಸ್ತಿ ಪ್ರದಾನ

ಯಕ್ಷಗಾನಕ್ಕೆ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಕೊಡುಗೆ ಅಭಿನಂದನೀಯ : ಪರ್ಯಾಯ ಪುತ್ತಿಗೆ ಶ್ರೀ ಉಡುಪಿ : ಯಕ್ಷಗಾನ ಕಲೆಗೆ ಉಡುಪಿಯ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ನೀಡುತ್ತಿರುವ ಕೊಡುಗೆ ಶ್ಲಾಘನೀಯ. ಇಂದಿನ ಪ್ರಶಸ್ತಿ ಪ್ರಧಾನ ಯಕ್ಷ ಕಲೆಗೆ ವಿಶೇಷ ಉತ್ತೇಜನ ಕೊಟ್ಟ ಹಾಗೆ. ತಲ್ಲೂರು ಶಿವರಾಮ ಶೆಟ್ಟಿ ಎಂದರೆ ಯಕ್ಷಗಾನ ಎಂಬುವುದೇ ಅಲ್ಲಿ ಪ್ರಸಿದ್ದಿಯಾಗಿದೆ. ಯಕ್ಷಗಾನ ಕಲೆಗೆ ಅವರು ನೀಡುತ್ತಿರುವ ಉತ್ತೇಜನ ಪ್ರೋತ್ಸಾಹ ಹೀಗೆ ಮುಂದುವರೆಯಲಿ. ನಮ್ಮ ನಾಡಿನ ಹೆಮ್ಮೆಯ ಕಲೆ ಯಕ್ಷಗಾನ ಚಿರಸ್ಥಾಯಿಯಾಗಲಿ ಎಂದು ಪರ್ಯಾಯ ಪುತ್ತಿಗೆ […]

Continue Reading

ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ದ ಪ್ರಕರಣ ದಾಖಲು.

ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಮಾಡಿದ ಭಾಷಣ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟುಮಾಡುವಂತಿದೆ ಅವರು ಹಿಂದೂ-ಮುಸ್ಲಿಂ ಸಮುದಾಯಗಳ ಬಗ್ಗೆ ಅವಮಾನಕಾರಿ ಹೇಳಿಕೆಗಳನ್ನು ನೀಡಿ, ಮತದಾರರ ಸಂಖ್ಯೆಯ ಉಲ್ಲೇಖ ಮಾಡಿ ಧಾರ್ಮಿಕ ವೈಮನಸ್ಸು ಉಂಟುಮಾಡಿದ್ದಾರೆ. ಅವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡಿರುವುದಾಗಿದೆ ಎಂದು ದೂರುದಾರರಾದ ಪುತ್ತೂರು ತಾಲೂಕು ಈಶ್ವರಿ ಪದ್ಮುಂಜ ಎಂಬವರು ದೂರು ನೀಡಿರುತ್ತಾರೆ. ಅವರ ದೂರಿನ್ವಯ ದಿನಾಂಕ: 25-10-2025 ರಂದು […]

Continue Reading

ಕೋಮು ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ದೂರು ದಾಖಲು

ಪುತ್ತೂರು: ದೀಪಾವಳಿ ಸಂಭ್ರಮ ಸಾರ್ವಜನಿಕ ಸಮಾರಂಭವೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ. ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪಾವಳಿ ಸಂಭ್ರಮ ಧಾರ್ಮಿಕ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರನ್ನು ಅವಮಾನಿಸಿ, ಗರ್ಭಿಣಿ ಮಹಿಳೆಯರನ್ನು ನಿಂದನೆ ಮಾಡಿ, ಅವರ ಘನತೆಗೆ ಧಕ್ಕೆ ತರುವಂತೆ, ಗರ್ಭಿಣಿಯರ ವಿರುದ್ದ ಹಿಂಸೆಗೆ ಪ್ರೇರೆಪಿಸುವಂತೆ, ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತಿ, ದ್ವೇಷ […]

Continue Reading

ಸುರತ್ಕಲ್: ಕಾನಾ ಬಳಿ ಯುವಕರಿಬ್ಬರಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿದ ಪ್ರಕರಣ ಬೇಧಿಸಿದ ಸುರತ್ಕಲ್‌ ಪೊಲೀಸರು

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾದ ಬಳಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪೋಲೀಸರು ದಸ್ತಗಿರಿ ಮಾಡಿ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ಫಿಯಾಗಿರುತ್ತಾರೆ. 23-10-2025 ರಂದು ರಾತ್ರಿ ಸುಮಾರು 10:30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಬಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿoದ ಇರಿದು […]

Continue Reading

ಸ್ನೇಹಪರ ವ್ಯಕ್ತಿತ್ವದ ಮಂಗಳೂರು ತಾ.ಪಂ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಮುಹಮ್ಮದ್ ಸಿರಾಜು ಉಳಾಯಿಬೆಟ್ಟು ವಿಧಿವಶ

ಮಂಗಳೂರು ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಕಾಂಗ್ರೆಸ್ ಮುಖಂಡರಾದ ಮುಹಮ್ಮದ್ ಸಿರಾಜ್ ಉಳಾಯಿಬೆಟ್ಟು ಅಲ್ಪಕಾಲದ ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಸಿರಾಜುದ್ದೀನ್ ‘ಸಿರಾಜ್ ಮೋನು’ ಎಂದೇ ಜನಪ್ರಿಯರಾಗಿದ್ದರು. ಪ್ರಸ್ತುತ ಗುರುಪುರ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮುಖಂಡರಾಗಿಯೂ ಗುರುತಿಸಿಕೊಂಡಿದ್ದರು. ವೃತ್ತಿಯಲ್ಲಿ ಮಾವಿನ ವ್ಯಾಪಾರ ನಡೆಸುತ್ತಿದ್ದ ಸಿರಾಜುದ್ದೀನ್ ಎಲ್ಲರೊಂದಿಗೆ ಅತ್ಯಂತ ಆಪ್ತತೆಯಿಂದ ಬೆರೆಯುತ್ತಿದ್ದರು. ರಾಜಕಾರಣದ ಬಗ್ಗೆ ಹೆಚ್ಚು […]

Continue Reading

ಮಂಗಳೂರು: ಜಾಗದ ನಕಲಿ ಜಿಪಿಎ ಸೃಷ್ಟಿಸಿ ವಂಚನೆ; ಸಹೋದರ, ನ್ಯಾಯವಾದಿ ಸೇರಿ ಐವರ ಮೇಲೆ ಎಫ್ಐಆರ್

ನಕಲಿ ಜಿಪಿಎ (ಪವರ್ ಆಫ್ ಅಟಾರ್ನಿ) ಮಾಡಿ ತನ್ನ ತಮ್ಮನಿಗೆ ಸೇರಿದ್ದ ಜಾಗವನ್ನು ತನ್ನ ಹೆಸರಿಗೆ ಮಾಡಿಕೊಂಡ ಬಗ್ಗೆ ಅಣ್ಣ ಅಹಮ್ಮದ್ ಮೊಹಿದ್ದೀನ್ ಬಾವಾ, ನ್ಯಾಯವಾದಿ ಸೇರಿ ಒಟ್ಟು ಐವರ ಮೇಲೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಅಹಮ್ಮದ್ ಮೊಹಿದ್ದೀನ್ ಬಾವಾ ಅವರ ತಮ್ಮ ಮಂಗಳೂರು ನಿವಾಸಿ ಜುಬೇರ್ ಅಹಮ್ಮದ್ ದೂರು ನೀಡಿದ್ದು, ನವೆಂಬರ್ 24 ರಂದು ದೂರುದಾರರು ಜಿಪಿಎ ಕೊಟ್ಟಿರುವ ರೀತಿ ನಕಲಿ ದಾಖಲೆ ತಯಾರಿಸಿ, 2023 ರ ಸೆಪ್ಟೆಂಬರ್ 21 ರಂದು […]

Continue Reading

ಅಂಬ್ಲಮೊಗರು ಗ್ರಾಮದ ಭೂ ಹಗರಣದ ಬಗ್ಗೆ ಸಮಗ್ರ ತನಿಖೆಯಾಗಲಿ: ಸುನಿಲ್ ಕುಮಾರ್ ಬಜಾಲ್

ಬಡ ರೈತರ ಕೃಷಿಭೂಮಿಯ ಅಕ್ರಮ ಸ್ವಾಧೀನದ ವಿರುದ್ಧ ಉಳ್ಳಾಲ ತಹಶೀಲ್ದಾರ್ ಕಚೇರಿಯೆದುರು ಪ್ರತಿಭಟನೆ ಬಡ ಗೇಣಿದಾರರ ಭೂಮಿಯನ್ನು ಮಾಲೀಕರಿಂದ ನೇರವಾಗಿ ಖರೀದಿ ಮಾಡಿ ಗೇಣಿದಾರರಿಗಾದ ಅನ್ಯಾಯದ ವಿರುದ್ಧ, ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿರುವುದರ ವಿರುದ್ಧ ಹಾಗೂ ಪಂಚಾಯತ್ ನಿಂದ ನಿರ್ಮಿಸಲ್ಪಟ್ಟಿದ್ದ ರಸ್ತೆಯ ಅತಿಕ್ರಮಣದ ವಿರುದ್ಧ ಅಂಬ್ಲಮೊಗರು ಗ್ರಾಮದ ನಾಗರೀಕರು ಕೃಷಿಭೂಮಿ ಸಂರಕ್ಷಣಾ ಹೋರಾಟ ಸಮಿತಿಯ ನೇತ್ರತ್ವದಲ್ಲಿ ಇಂದು ಉಳ್ಳಾಲ ತಹಶೀಲ್ದಾರ್ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಅಂಬ್ಲಮೊಗರು ಮುನ್ನೂರು ಬೆಳ್ಮ ಗ್ರಾಮದ ನಾಗರಿಕರು […]

Continue Reading

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ, ಪೊಲೀಸರ ಜೀಪಿಗೆ ಡಿಕ್ಕಿ ಹೊಡೆಸಿ ಕೊಲೆಯತ್ನ, ಆರೋಪಿಯ ಕಾಲಿಗೆ ಗುಂಡು

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರ ಮಂಗಳ ಎಂಬಲ್ಲಿ ಇಂದು ಮುಂಜಾನೆ ಆರೋಪಿ ಅಬ್ದುಲ್ಲಾ ಎಂಬವರು ಇಚರ್ ವಾಹನದಲ್ಲಿ ಹತ್ತು ಜಾನುವಾರಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದು, ಪೊಲೀಸರು ವಾಹನ ನಿಲ್ಲಿಸಲು ಸೂಚಿಸಿದರೂ ಆರೋಪಿಗಳು ವಾಹನವನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಸರಿ ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು. ಆರೋಪಿಯು ಪೊಲೀಸರ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪೊಲೀಸರನ್ನೇ ಯಮಾರಿಸಲು ಪ್ರಯತ್ನಿಸಿರುತ್ತಾರೆ. ಅ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಪಿಎಸ್ಐ ರವರು ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ. […]

Continue Reading

ಪದೇ ಪದೇ ಹೊಂದಾಣಿಕೆ ರಾಜಕೀಯ ಮಾಡುವ ಮೂಲಕ, ಮುಸ್ಲಿಮರ ಭಾವನೆಗಳಿಗೆ ದಕ್ಕೆ ತರುವ ಕೆಲಸ ಮಾಡಬೇಡಿ: ಸಿರಾಜ್ ಬಜ್ಪೆ

ಸರಕಾರ ವಿಧಿಸಿದ ಕಾನೂನಿಗೂ, ಮುಸ್ಲಿಮರಿಗೂ ಏನು ಸಂಬಂಧ.? ಡಾ.ಬಿ ಆರ್ ಅಂಬೇಡ್ಕರ್ ರವರು ರಚಿಸಿದ ಸಂವಿಧಾನದ ಅಡಿಯಲ್ಲಿ ಯಾವ ಕಾನೂನು ತಂದರು ಮುಸ್ಲಿಂ ಸಮುದಾಯ ಸ್ವಾಗತಿಸುತ್ತದೆ ಮತ್ತು ಅದನ್ನು ಪಾಲಿಸುತ್ತದೆ. ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗಾಗಿ ಆಡಳಿತ ಸರಕಾರ ಏನಾದರೂ ಕಾನೂನು ತಂದಲ್ಲಿ, ಅದಕ್ಕೆ ಬಡಬಡಾಯಿಸುವ ವಿರೋಧಪಕ್ಷಗಳು ಎಳೆದು ತರುವುದು ಮುಸ್ಲಿಮರನ್ನು. ಹೋಗಲಿ ಬಿಡಿ ವಿರೋಧ ಪಕ್ಷಗಳಿಗೆ ಕೇವಲ ಜಾತಿ ಆಧಾರದಲ್ಲಿ ರಾಜಕೀಯ ಮಾಡಿಕೊಂಡು ದಿನ ದೂಡುವ ವಿಷಯ ಮತದಾರ ಬಾಂಧವರಿಗೆ ಚೆನ್ನಾಗಿ ಅರ್ಥ ಆಗಿಬಿಟ್ಟಿದೆ. ಸರ್ಕಾರ […]

Continue Reading

ಮಂಗಳೂರು: ನಗರದ ಅಪಾರ್ಟ್ ಮೆಂಟ್ ನ ಮೂರು ಪ್ಲಾಟ್ ನಲ್ಲಿ ಕಳ್ಳತನ. 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳವು

ಪೊಲೀಸರ ಶೀಘ್ರ ಕಾರ್ಯಾಚರಣೆ; ಕಳವುಗೈದ ಆರೋಪಿಗಳನ್ನು 20 ಗಂಟೆಯೊಳಗೆ ಬಂಧನ. ಚಿನ್ನಾಭರಣ, ನಗದು, ವಿದೇಶಿ ಕರನ್ಸಿ ವಶ ಮಂಗಳೂರು ನಗರದ ಲಾಲ್ ಬಾಗ್ ಹ್ಯಾಟ್ ಹಿಲ್ ನ ಅಪಾರ್ಟ್ ಮೆಂಟ್ ನ ಮೂರು ಪ್ಲಾಟ್ ಗಳಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ,ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳವು. ಪೊಲೀಸರ ಶೀಘ್ರ ಕಾರ್ಯಾಚರಣೆಯಿಂದ ಕಳವು ಮಾಡಿದ ಇಬ್ಬರು ಆರೋಪಿಗಳನ್ನು 20 ಗಂಟೆಯ ಒಳಗೆ ಬಂಧನ. ಚಿನ್ನಾಭರಣ, ನಗದು ಹಾಗೂ 3000 ವಿದೇಶಿ ಕರನ್ಸಿ […]

Continue Reading