ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳ ವಶ, ಕೇಸು ದಾಖಲು

ವಿಟ್ಲ ಠಾಣಾ ಪೊಲೀಸ್ ಉಪ-ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಇದು ಅಪರಾಹ್ನ ಉಕ್ಕಡ ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ KA 01 AJ 9542 & KA 50 AF 3229 ನೋಂದಣಿ ಸಂಖ್ಯೆಯ ಎರಡು ಲಾರಿಗಳನ್ನು ತಪಾಸಣೆ ನಡೆಸಲಾಗಿ ಅದರಲ್ಲಿ ತಲಾ 500 ಕೆಂಪು ಕಲ್ಲುಗಳಿದ್ದು, ಕೆಂಪು ಕಲ್ಲು ಸಾಗಾಟದ ಬಗ್ಗೆ ಪರವಾನಿಗೆಯನ್ನು ಸದ್ರಿ ಲಾರಿಗಳ ಚಾಲಕರಲ್ಲಿ ಪರವಾನಿಗೆ ಇಲ್ಲವೆಂದು ಹಾಗೂ KA 01 […]

Continue Reading

ತಡೆಯಾಜ್ಞೆಯ ಗ್ಯಾಗ್ ಆರ್ಡರ್ ನೀಡಿದ ನ್ಯಾಯಾಧೀಶರಿಗೂ ಧರ್ಮಸ್ಥಳಕ್ಕೂ ಸಂಬಂಧ: ಕೇಸ್ ವರ್ಗಾವಣೆಗೆ ಮೆಮೋ

ಧರ್ಮಸ್ಥಳ ಹರ್ಷೇಂದ್ರ ಕುಮಾರ್, ವಿರೇಂದ್ರ ಹೆಗ್ಗಡೆ, ಧರ್ಮಸ್ಥಳ ಸಂಸ್ಥೆ ಮತ್ತು ಕುಟುಂಬದ ವಿರುದ್ಧ ಸುದ್ದಿ ಪ್ರಕಟ ಮಾಡದಂತೆ 338 ಪತ್ರಕರ್ತರು, ಹೋರಾಟಗಾರರು, ಸಂಸ್ಥೆಗಳ ವಿರುದ್ಧ ಮಧ್ಯಂತರ ತಡೆಯಾಜ್ಞೆ ನೀಡಿದ್ದ ಬೆಂಗಳೂರಿನ 26 ನೇ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರು ಎಸ್ಡಿಎಂ ಲಾ ಕಾಲೇಜು ವಿದ್ಯಾರ್ಥಿಯಾಗಿದ್ದು, ವಿರೇಂದ್ರ ಹೆಗ್ಗಡೆಯವರ ಕೇಸುಗಳನ್ನು ಪ್ರತಿನಿಧಿಸಿದ್ದ ಲಾ ಎಸೋಶಿಯೇಟ್ ನಲ್ಲಿ ವೃತ್ತಿ ನಡೆಸಿದ್ದಾರೆ. ಹಾಗಾಗಿ ಹರ್ಷೇಂದ್ರ ಕುಮಾರ್ ದಾಖಲಿಸಿದ್ದ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಪ್ರತಿವಾದಿ 25 ಆಗಿರುವ ಪತ್ರಕರ್ತ ನವೀನ್ […]

Continue Reading

ಬಂಟ್ವಾಳ: ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ಖರೀದಿಸಿ ಮೋಸ ಹೋದ ಗ್ರಾಹಕ; ಸಮಸ್ಯೆ ಬಗ್ಗೆ ಕಂಪೆನಿಗೆ, ಡೀಲರಿಗೆ ಸಾಕಷ್ಟು ಬಾರಿ ದೂರಿಕೊಂಡರೂ ಯಾವುದೇ ಸ್ಪಂದನೆ ಇಲ್ಲ.

ಬಂಟ್ವಾಳ: ತಾಲೂಕಿನ ಪಾಣೆಮಂಗಳೂರು ಸಮೀಪದ ವ್ಯಕ್ತಿಯೊಬ್ಬರು ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ಖರೀದಿಸಿ ಮೋಸ ಹೋದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀರೋ ವಿಡಾ ಕಂಪೆನಿಗೆ ಸೇರಿದ ವಿ1 ಪ್ರೊ ಮಾದರಿಯ ವಿದ್ಯುತ್ ಚಾಲಿತ ದ್ವಿಚಕ್ರ ವಾಹನವನ್ನು ಇವರು ಕಳೆದ 8 ತಿಂಗಳ ಹಿಂದೆ ಖರೀದಿಸಿದ್ದು, ವಾಹನ ಖರೀದಿಗೆ ಮುಂಚಿತವಾಗಿ ಕಂಪೆನಿ ವಿವಿಧ ಜಾಹೀರಾತುಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದು, ವಾಹನ ಖರೀದಿಸಿದ ಬಳಿಕ ಆಗುವ ಯಾವುದೇ ಸಮಸ್ಯೆಗಳಿಗೂ ಕ್ಯಾರೇ ಅನ್ನದೆ ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ ಎಂದವರು ಆರೋಪಿಸಿದ್ದಾರೆ. ಕಳೆದ […]

Continue Reading

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಪತ್ತೆ, ಆರೋಪಿಗಳ ಬಂಧನ

ಮಂಗಳೂರು ನಗರ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಭಾಗವಾಗಿ ಇಂದು ದೊಡ್ಡ ಪ್ರಮಾಣದ 123 ಕೆಜಿ ಗಾಂಜಾ ಮತ್ತು ಅದನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಮೂರು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರು ಆಂಧ್ರಪ್ರದೇಶದಿಂದ ಗಾಂಜಾ ಸಾಗಾಟ ಮಾಡುತ್ತಿದ್ದರು. ಎರಡು ಕಾರುಗಳಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು, ಮೂಡಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್ ನ ಮಠದಕೆರೆ ಎಂಬ ಸ್ಥಳದಲ್ಲಿ ಅಕ್ರಮವಾಗಿ […]

Continue Reading

ಬಂಟ್ವಾಳ ಗ್ರಾಮಾಂತರ ಪೊಲೀಸರ ಮಿಂಚಿನ ಕಾರ್ಯಾಚರಣೆ: ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಕದ್ದ ಸುಳ್ಯದ ಪೈಚಾರು ಸತೀಶ್ ಅಂದರ್

ಲಕ್ಷಾಂತರ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಸುಳ್ಯದ ಪೈಚಾರು ನಿವಾಸಿ, 29 ವರ್ಷದ ಸತೀಶ್ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಣಿ ನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ಜುಲೈ 3 ರಿಂದ ಜುಲೈ 22 ರ ಅವಧಿಯಲ್ಲಿ ಸುಮಾರು 45 ಪ್ಲಾಸ್ಟಿಕ್‌ ಚೀಲದಲ್ಲಿದ್ದ ರೂ. 2,20,000/- ಮೌಲ್ಯದ ಒಣ ಅಡಿಕೆ ಕಳವಿನ ಬಗ್ಗೆ ದಿನಾಂಕ: 23-07-2025 ರಂದು ಅಕ್ರ 112/2025 […]

Continue Reading

ಸೂರಲ್ಪಾಡಿ ಮಸೀದಿಯ ಮಾಜಿ ಅಧ್ಯಕ್ಷರು, ಧಾರ್ಮಿಕ ಮುಂದಾಳು ಕೆ. ಶೇಖ್ ಅಬ್ಬಾಸ್ (ಬಾವಾಕ) ವಿಧಿವಶ

ಮಂಗಳೂರು: ಸೂರಲ್ಪಾಡಿ ಮಲ್ಹರುಲ್ ಅವಾಕಿಫ್ ಜುಮಾ ಮಸ್ಜಿದ್ ಸುರಲ್ಪಾಡಿ ಇದರ ಮಾಜಿ ಅಧ್ಯಕ್ಷರು, ಮಸೀದಿಯ ದೀರ್ಘ ಕಾಲ ಸದಸ್ಯರಾಗಿ ಸೇವೆ ಸಲ್ಲಿಸಿದ ಕೆ. ಶೇಖ್ ಅಬ್ಬಾಸ್ ಇಂದು ನಿಧನರಾಗಿದ್ದಾರೆ. ಸ್ಥಳೀಯವಾಗಿ ಬಾವಾಕ ಎಂದೇ ಚಿರಪರಿಚಿತರಾಗಿದ್ದರು. ಸೂರಲ್ಪಾಡಿ ಮಸೀದಿ ಅಭಿವೃದ್ಧಿ ಕಾರ್ಯದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶೇಖ್ ಅಬ್ಬಾಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು. ಚಿರ ಯುವಕರಂತೆ ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುತ್ತಿದ್ದರು. ಅವರಿಗೆ ಆರು ಗಂಡು, ಒಂದು ಹೆಣ್ಣು ಮಕ್ಕಳಲ್ಲಿ ಖ್ಯಾತ […]

Continue Reading

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿ ಮನ್ಸೂರ್ ನಿಗೆ 20 ವರ್ಷ ಜೈಲು ಶಿಕ್ಷೆ

16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಬೆದರಿಕೆ ಹಾಕಿ ವಿಡಿಯೋ ಚಿತ್ರೀಕರಿಸಿದ ಆರೋಪದಲ್ಲಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಆರೋಪಿತನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಲಾಗಿದೆ. ದಿನಾಂಕ 30-05-2023 ರಂದು ಸಜಿಪನಡು ನಿವಾಸಿ ಅಬ್ದುಲ್ ಅಝೀಝ್ ರವರ ಮಗ ಮೊಹಮ್ಮದ್ ಮನ್ಸೂರ್ ಯಾನೆ ಜಾಬೀರ್ ಈ ಕೃತ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ದಿನಾಂಕ 23-12-2023 ರಂದು ಮಂಗಳೂರು ಮಹಿಳಾ ಪೊಲೀಸ್ ಠಾಣಾ ಅ.ಕ್ರ 128/2023 ಕಲಂ: 363, […]

Continue Reading

ಮಂಗಳೂರು ಮಹಾ ನಗರ ಪಾಲಿಕೆಯಲ್ಲಿ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ ಯಾನೆ ಮುನ್ನ ಬಂಧನ

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿಯ ನಕಲಿ ರಶೀದಿ ಸೃಷ್ಟಿಸಿದ ಆರೋಪದಲ್ಲಿ ಉಜ್ಜೋಡಿ ನಿವಾಸಿ ಪೃಥ್ವಿರಾಜ್ ಶೆಟ್ಟಿ ಯಾನೆ ಮುನ್ನಾ ಎಂಬಾತನನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. “ಶ್ರೀ ರಾಜ ದುರ್ಗಾ ಫರ್ನಿಚರ್ ವರ್ಕ್ಸ್” ಎಂಬ ಉದ್ದಿಮೆ ಹೊಂದಿರುವ ಬಾಲಕೃಷ್ಣ ಸುವರ್ಣ ಎಂಬವರು ಮಾನ್ಯ ನ್ಯಾಯಾಲಯದ ಪ್ರಕರಣ ದಲ್ಲಿ ವ್ಯವಹರಿಸಲು ದಾಖಲಾತಿಗಳನ್ನು ಪಡೆದುಕೊಳ್ಳಲು ಮಂಗಳೂರು ಮಹಾ ನಗರ ಪಾಲಿಕೆಗೆ ಭೇಟಿ ನೀಡಿದ್ದು, ಆ ಸಂದರ್ಭ ಅವರ ಉದ್ದಿಮೆ ಪರವಾನಿಗೆ ಹಾಗೂ […]

Continue Reading

ಕರಾವಳಿಗೆ ಪ್ರತ್ಯೇಕ ಮರಳು ನೀತಿ, ಸರಳೀಕೃತ ಪರವಾನಿಗೆ, ಕೇರಳ ಮಾದರಿ ನೀತಿ ಜಾರಿಗೊಳಿಸುವಂತೆ ಒತ್ತಾಯ

ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾದ ಜಿಲ್ಲಾ ಬಿಜೆಪಿ ನಿಯೋಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿಂದ ಕೆಂಪು ಕಲ್ಲು ಮತ್ತು ಮರಳು ಗಣಿಗಾರಿಕೆ ಸ್ತಬ್ದಗೊಂಡು ಕರಾವಳಿಯ ಆರ್ಥಿಕ ಪರಿಸ್ಥಿತಿಗೆ ತೀವ್ರ ಹಿನ್ನಡೆಯಾಗಿದ್ದು, ಸಾವಿರಾರು ಕಾರ್ಮಿಕರು ಕೆಲಸವಿಲ್ಲದೆ ಬದುಕಿನ ಬಂಡಿ ದೂಡುವುದು ಕಷ್ಟವಾಗಿದೆ. ರಾಜ್ಯ ಸರಕಾರದ ಅಸಮರ್ಪಕ ಹಾಗೂ ಅವೈಜ್ಞಾನಿಕ ಮರಳು ನೀತಿಯಿಂದಾಗಿ ಜಿಲ್ಲೆಯಲ್ಲಿ ಮರಳಿನ ಪೂರೈಕೆ ಸಂಪೂರ್ಣ ಸ್ತಬ್ದವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಗೃಹ ನಿರ್ಮಾಣ ಕಾರ್ಯ, ಕಟ್ಟಡ ಕಾಮಗಾರಿ ಸಂಪೂರ್ಣ ನಿಂತಿದೆ. […]

Continue Reading

ನಾಗರ ಪಂಚಮಿ ಹೆಸರಿನಲ್ಲಿ ಹಾಲನ್ನು ಸುರಿದು ಪೋಲು ಮಾಡುವ ಬದಲು ರೋಗಿಗಳಿಗೆ ನೀಡುವ ವಿನೂತನ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ಸಾಕ್ಷಿಯಾಯಿತು.

ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತವಾಗಿ ಹಾಲು, ಹಣ್ಣು ಹಂಪಲು ವಿತರಣೆ ನಾಗರ ಪಂಚಮಿ ಹೆಸರಿನಲ್ಲಿ ಮೌಢ್ಯಕ್ಕೆ ಒಳಗಾಗಿ ಜನರು ಹಾಲನ್ನು ನಾಗರ ಹುತ್ತಗಳಿಗೆ , ಕಲ್ಲಿಗೆ ಸುರಿದು ಅಪಾರ ಪೌಷ್ಟಿಕಾಂಶಯುಳ್ಳ ಹಾಲನ್ನು ಪೋಲು ಮಾಡುವ ಬದಲಾಗಿ ರೋಗಿಗಳಿಗೆ ನೀಡುವ ವಿನೂತನ ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆ ಇಂದು ಸಾಕ್ಷಿಯಾಯಿತು. ನಾಗರ ಪಂಚಮಿ ದಿನದಂದು ಮಂಗಳವಾರ ಬೆಳ್ತಂಗಡಿ ತಾಲೂಕು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಬೆಳ್ತಂಗಡಿ ತಾಲೂಕು […]

Continue Reading