ಹಿರಿಯ ನಾಟಕ ಕಲಾವಿದ, ಪಕ್ಕಲಡ್ಕ ಯುವಕ ಮಂಡಲದ ಸಕ್ರೀಯ ಸದಸ್ಯ, ಸಂಗಾತಿ ಕೆ. ರಾಘವ ಬಂಗೇರ ಇನ್ನಿಲ್ಲ.

ಖ್ಯಾತ ನಾಟಕ ಕಲಾವಿದರೂ, ಪಕ್ಕಲಡ್ಕ ಯುವಕ ಮಂಡಲದ ಸಕ್ರೀಯ ಸದಸ್ಯರಾಗಿದ್ದ ಪ್ರಸ್ತುತ ಅಸೈಗೋಳಿಯಲ್ಲಿ ವಾಸವಾಗಿರುವ ಸಂಗಾತಿ ಕೆ ರಾಘವ ಬಂಗೇರ (78)ರವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಅಸೈಗೋಳಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಬಜಾಲ್ ಪಕ್ಕಲಡ್ಕದ ಪರಿಸರದಲ್ಲಿ ಹುಟ್ಟಿ ಬೆಳೆದ ರಾಘವರವರು ಎಳೆಯ ಪ್ರಾಯದಲ್ಲೇ ಎಡಪಂಥೀಯ ವಿಚಾರಧಾರೆಯಿಂದ ಆಕರ್ಷಿತರಾಗಿ ಆ ಮೂಲಕ ಪಕ್ಕಲಡ್ಕ ಯುವಕ ಮಂಡಲದಲ್ಲಿ ಸಕ್ರೀಯ ಸದಸ್ಯರಾಗಿದ್ದರು. ಸಾಂಸ್ಕೃತಿಕ ಚಟುವಟಿಕೆಯ ಕೇಂದ್ರವಾದ ಈ ಯುವಕ ಮಂಡಲದಲ್ಲಿ ತನ್ನಲ್ಲಿರುವ ಪ್ರತಿಭೆಯನ್ನು ಬೆಳೆಸಲು ಸಂಪೂರ್ಣವಾಗಿ ತೊಡಗಿಸಿಕೊಂಡ ರಾಘವರವರು ವಾರ್ಷಿಕೋತ್ಸವದ […]

Continue Reading

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ, ವಿಚಾರಣೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಸೆರೆಹಿಡಿದ ಸುರತ್ಕಲ್ ಪೊಲೀಸರು

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಸುರತ್ಕಲ್ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರ, ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ಧಾರವಾಡ ಹಾಗೂ ವಿವಿಧ ಕಡೆಗಳಲ್ಲಿ ಕೊಲೆ ಯತ್ನ, ಕಳವು, ಹಲ್ಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ರಾಜೇಶ್ ನಾಯ್ಕ್ @ ರಾಜ್ @ ರಾಜು ಪಮಾಡಿ, ಉಡುಪಿ. ಹಾಲಿ ವಾಸ: ಟೋಲ್ ನಾಕ, […]

Continue Reading

ವ್ಯವಹಾರದ ನೆಪದಲ್ಲಿ ಮಲ್ಲೂರಿನ ಮನೆಗೆ ಕರೆಯಿಸಿ ಕೂಡಿಹಾಕಿ ಗಂಭೀರ ಥಳಿತ; ಲಕ್ಷಾಂತರ ರೂಪಾಯಿ ಸುಲಿಗೆ: ಪ್ರಕರಣ ದಾಖಲು

ಬಿಟ್ ಕಾಯಿನ್ ದಂಧೆಯ ವಾಸನೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲೂರಿನ ಮನೆಯೊಂದಕ್ಕೆ ಕೇರಳ ಮೂಲದ ನಾಲ್ವರನ್ನು ಕರೆಯಿಸಿ ಕೂಡಿಹಾಕಿ ತಂಡವೊಂದು ಗಂಭೀರ ಹಲ್ಲೆ ನಡೆಸಿ ಲಕ್ಷಾಂತರ ರೂಪಾಯಿ ದೋಚಿದ ಪ್ರಕರಣ ಬೆಳಕಿಗೆ ಬಂದಿದ್ದು, ಸುಮಾರು ಹತ್ತರಷ್ಟು ಮಂದಿಯ ವಿರುದ್ಧ ದೂರು ದಾಖಲಾಗಿದೆ. ಕೋಝಿಕ್ಕೋಡ್ ನಿವಾಸಿ ಅಬ್ದುಲ್ ಮನಾಫ್ ಹಾಗೂ ಅವರ ಸ್ನೇಹಿತರಾದ ಅರ್ಶಕ್ ಅಹಮ್ಮದ್, ಯಾಸರ್ ಅರಾಫತ್, ಮುಹಮ್ಮದ್ ಸಾಹಿರ್ ದುಬೈನಲ್ಲಿ ವ್ಯವಹಾರ ಮಾಡಿಕೊಂಡಿದ್ದು, ಇತ್ತೀಚೆಗೆ ಊರಿಗೆ ಬಂದು ನೆಲೆಸಿದ್ದರು. ಮಂಗಳೂರಿನ ಸರ್ಫಾರಾಝ್ ಎಂಬಾತನೊಂದಿಗೆ ಕೇರಳದ […]

Continue Reading

ಪುತ್ತೂರಿನ ಬೊಳ್ವಾರಿನಲ್ಲಿ ದುಷ್ಕೃತ್ಯ, ಆರೋಪಿ ಬಂಧನ; ಹಾಡಹಗಲೇ ತಲವಾರು ಝಳಪಿಸಿ ಸಾರ್ವಜನಿಕರಿಗೆ ಬೆದರಿಕೆ.

ಪುತ್ತೂರು ಕಸ್ಬಾ ಗ್ರಾಮದ, ಬೊಳುವಾರು ಎಂಬಲ್ಲಿ, ವ್ಯಕ್ತಿಯೋರ್ವ ತನ್ನ ಕೈಯಲ್ಲಿ ತಲವಾರನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ತೋರಿಸುತ್ತಾ ಬೆದರಿಕೆ ಒಡ್ಡಿದ್ದಾನೆ. ತಕ್ಷಣವೇ ಸಾರ್ವಜನಿಕರು ಆತನನ್ನು ಹಿಡಿದು ಪುತ್ತೂರು ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮೂಲತಃ ಹಾಸನ ಮೂಲದವನಾಗಿದ್ದು ಪ್ರಸ್ತುತ ಬಂಟ್ವಾಳ ನಿವಾಸಿಯಾಗಿರುವ ರಾಜು (45) ಬಂಧಿತ ಆರೋಪಿ. ಆರೋಪಿಯನ್ನು ವಶಕ್ಕೆ ಪಡೆದ ನಗರ ಠಾಣಾ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಪುತ್ತೂರು ನಗರ ಪೊಲೀಸ್ […]

Continue Reading

ವಿಟ್ಲ: ಹತ್ತು ವರ್ಷಗಳ ಹಿಂದಿನ ಅತ್ಯಾಚಾರ ಪ್ರಕರಣ: ಬಿಹಾರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ವಿಟ್ಲ: 10 ವರ್ಷಗಳ ಹಿಂದಿನ ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ.ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ 04.11.2015 ರಾತ್ರಿ ಹೊತ್ತು ಅತ್ಯಾಚಾರ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ 218/2015 ಕಲಂ: 448,341,323, 376(G),506,34 ಐಪಿಸಿ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಯಾದ ಬಿಹಾರ, ಪಾಟ್ನಾ ನಿವಾಸಿ ಬಬ್ಲೂ ಕುಮಾರ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಕೆಲ ತಿಂಗಳ ಬಳಿಕ ಜಾಮೀನು ಪಡೆದು ಹೊರಗಡೆ ಬಂದಿದ್ದ ಆರೋಪಿ […]

Continue Reading

ನಗರದ ಪ್ರತಿಷ್ಠಿತ ಆಸ್ಪತ್ರೆಗಳಿಗೆ ಸೀಮಿತವಾಗದೆ ಗ್ರಾಮೀಣ ಪ್ರದೇಶಕ್ಕೆ ಬಂದು ಸೇವೆ ನೀಡುವ ಅಪರೂಪದ ಡಾಕ್ಟರ್

ಸರಳ ಸಜ್ಜನಿಕೆಯ ವ್ಯಕ್ತಿತ್ವದ ಡಾ. ನಾಸಿರ್ ಹುಸೇನ್ ಕಿಲ್ಪಾಡಿರವರು ಅಡ್ಡೂರಿನ ರಿಫಾ ಕ್ಲಿನಿಕ್ ನಲ್ಲಿ ಬಂದು ಸೇವೆ ವೈದ್ಯ ವೃತ್ತಿ ಅನ್ನುವುದು ಪವಿತ್ರ ವೃತ್ತಿ. ಅದೊಂದು ಜೀವ ಉಳಿಸುವ ವೃತ್ತಿ. ಈ ಸಮಾಜದಲ್ಲಿ ವೈದ್ಯರಿಗೆ ಗೌರವದ ಸ್ಥಾನಮಾನಗಳಿವೆ. ಆದರೆ ಕೆಲವರು ನಗರ ಕೇಂದ್ರಿಕೃತಕ್ಕೆ ಸೀಮಿತವಾಗಿ ಕೆಲಸ ಮಾಡುವವರೇ ಜಾಸ್ತಿ. ಗ್ರಾಮೀಣ ಪ್ರದೇಶಕ್ಕೆ ಬಂದು ಸೇವೆ ನೀಡುವುದು ಬಹಳ ಅಪರೂಪ. ಗ್ರಾಮೀಣ ಪ್ರದೇಶದಿಂದಲೂ ಕಲಿತ ವೈದ್ಯರು ನಗರ ಪ್ರದೇಶದಲ್ಲೆ ತಮ್ಮ ಕಾರ್ಯಸಾಧನೆ ಮಾಡುತ್ತಾರೆ. ತಾನು ಹುಟ್ಟಿ ಬೆಳೆದ ಗ್ರಾಮೀಣ […]

Continue Reading

ಕಿನ್ನಿಗೋಳಿ ಪಟ್ಟಣ ಪಂಚಾಯತ್ ಗೆ ಹಿಡಿದ ಶನಿ ಬಿಡುವಂತೆ ಕಾಣುತ್ತಿಲ್ಲ. ವ್ಯವಹಾರದ ಕಿಲಕಿಲ ಕೇಳಿ ಬರುತ್ತಿದೆ

ಕಿನ್ನಿಗೋಳಿ ಪಟ್ಟಣ ಪಂಚಾಯತ್ ಗೆ ಹಿಡಿದ ಶನಿ ಬಿಡುವಂತೆ ಕಾಣುತ್ತಿಲ್ಲ. ಯಾರೇ ಮುಖ್ಯಾಧಿಕಾರಿಗಳು ಬಂದರೂ ಪಟ್ಟಣ ಪಂಚಾಯತ್ ದುರವಸ್ಥೆ ಅದೇ ತರಹ ಇರುತ್ತದೆ. ಈಗ ಜಯಶಂಕರ ಅನ್ನುವ ಹೊಸ ಮುಖ್ಯಾಧಿಕಾರಿ ಬಂದು ಕೂತಿದ್ದಾರೆ. ಜಯಶಂಕರ ಬರುವ ಮೊದಲು ಈ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಗೆ ಲೋಕಾಯುಕ್ತ ರೈಡ್ ನಡೆಸಿ ಮುಖ್ಯಾಧಿಕಾರಿಯನ್ನೇ ಬಂಧಿಸಿತ್ತು. ಪಿಡಬ್ಲ್ಯೂಡಿ ಕ್ಲಾಸ್ -1 ಗುತ್ತಿಗೆದಾರರಿಂದ ಲಂಚ ಸ್ವೀಕರಿಸಿದ ವೇಳೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು. ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ, ಜೂನಿಯರ್ ಇಂಜಿನಿಯರ್ ನಾಗರಾಜ್ 2022-23 ನೇ ಸಾಲಿನ […]

Continue Reading

ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಉಡುಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಏಳು ತಾಲೂಕುಗಳ ಸರಕಾರಿ ಶಾಲೆಯ ಮಕ್ಕಳಿಗೆ ಕೊಡೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ಹಾಗೂ ಉಡುಪಿ ತಾಲೂಕಿನ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮ ಗುರುವಾರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ (ನೋರ್ಥ್ ಶಾಲೆ ) ಉಡುಪಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉಡುಪಿ ತಾಲೂಕು ಉಪ ತಹಶೀಲ್ದಾರ್ ರಾದ ರವಿಶಂಕರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. […]

Continue Reading

ನೀರುಮಾರ್ಗ: ವೈದ್ಯಕೀಯ ಸೀಟಿಗೆ ಹೆಚ್ಚುವರಿ 8 ಲಕ್ಷ ಡೊನೇಷನ್ ಪಡೆದಿದ್ದ ಜಿ.ಆರ್.ಮೆಡಿಕಲ್ ಕಾಲೇಜು; ಹಣ ಹಿಂದಿರುಗಿಸುವಂತೆ ಶುಲ್ಕ ನಿಯಂತ್ರಣ ಸಮಿತಿ ಸೂಚನೆ

ಮಂಗಳೂರು ತಾಲೂಕಿನ ನೀರುಮಾರ್ಗ ಬಳಿಯ ಜಿ.ಆರ್. ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಕೋರ್ಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗೆ ಪ್ರವೇಶ ನೀಡುವ ಸಂದರ್ಭದಲ್ಲಿ ಹೆಚ್ಚುವರಿಯಾಗಿ ಎಂಟು ಲಕ್ಷ ರೂಪಾಯಿ ಡೊನೇಷನ್ ವಸೂಲಿ ಮಾಡಿಕೊಂಡಿದ್ದ ಕಾಲೇಜು ಆಡಳಿತ ಮಂಡಳಿ, ಆ ಹಣವನ್ನು ಮರಳಿ ವಿದ್ಯಾರ್ಥಿಗೆ ಹಿಂದಿರುಗಿಸುವಂತೆ ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಬಿ. ಶ್ರೀನಿವಾಸ ಗೌಡರು ಸೂಚನೆ ನೀಡಿದ್ದಾರೆ. ಜಿ.ಆರ್ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿ ಆರ್ ಕೆ ಆದಿತ್ಯ ಎಂಬುವವರಿಂದ ಹೆಚ್ಚುವರಿ ಹಣ ಪಾವತಿಸಿಕೊಂಡಿದ್ದರು. ಈ ಕುರಿತು ವಿದ್ಯಾರ್ಥಿ […]

Continue Reading

ಪುತ್ತೂರು: ಭಾರತೀಯ ಚಾರ್ಟಡ್ ಎಕೌಂಟೆಂಟ್ಸ್ ಸಂಸ್ಥೆ (ಐಸಿಎಐ) 2025 ರಲ್ಲಿ ನಡೆಸಿದ CA ಪರೀಕ್ಷೆಯಲ್ಲಿ ಪೆರ್ನೆ ನಿವಾಸಿ ಮುಹಮ್ಮದ್ ಇಯಾಸ್ ಯಶಸ್ವಿ

ಪುತ್ತೂರು: ಭಾರತೀಯ ಚಾರ್ಟಡ್ ಎಕೌಂಟೆಂಟ್ಸ್ ಸಂಸ್ಥೆ (ಐಸಿಎಐ)ಯು 2025 ರಲ್ಲಿ ನಡೆಸಿದ ಸಿ.ಎ. ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಮುಹಮ್ಮದ್ ಇಯಾಸ್ ರವರು ತನ್ನ ಮೊದಲ ಪ್ರಯತ್ನದಲ್ಲಿಯೇ ಗ್ರೂಪ್ ಒಂದು ಮತ್ತು ಗ್ರೂಪ್ ಎರಡರಲ್ಲೂ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಪೆರ್ನೆ ನಿವಾಸಿ ಇಸ್ಮಾಯಿಲ್ ಮತ್ತು ರುಖ್ಯಾ ದಂಪತಿಯ ಕಿರಿಯ ಪುತ್ರನಾಗಿರುವ ಮುಹಮ್ಮದ್ ಇಯಾಸ್ ರವರು CA ಗಣೇಶ್ ರಾವ್ ಪಿ. ಅವರ ಮಾರ್ಗದರ್ಶನದಲ್ಲಿ ಕಳೆದ ಮೇ ತಿಂಗಳು ನಡೆದ ಸಿಎ ಅಂತಿಮ ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಿದ್ದಾರೆ. ಮುಹಮ್ಮದ್ […]

Continue Reading