ಪೊಲೀಸರಿಂದ ನೆಮ್ಮದಿಯೇ ಇಲ್ಲದಾಗ ನಿದ್ದೆ ಎಲ್ಲಿಂದ ಸಭಾಪತಿಗಳೇ ? – ಸುನೀಲ್ ಕುಮಾರ್ ಬಜಾಲ್

ಮಂಗಳೂರಿನ ಪೊಲೀಸ್ ಕಮೀಷನರ್ ಕಾನೂನುಬಾಹಿರವಾಗಿ ನಡೆಯುತ್ತಿದ್ದರೂ ಅವರನ್ನು ಕಣ್ಣು ಮುಚ್ಚಿ ಸಮರ್ಥಿಸುತ್ತಿರುವ ಮಾನ್ಯ ಸಭಾಪತಿಗಳು ಉತ್ತರಿಸಬೇಕು. ಜಿಲ್ಲೆಯೆಲ್ಲೆಡೆ ಪೊಲೀಸರಿಂದ ನೆಮ್ಮದಿಯೇ ಇಲ್ಲದೇ ಇರುವಾಗ ಇನ್ನು ನಿದ್ದೆ ಎಲ್ಲಿಂದ ಸ್ವಾಮಿ ಎಂದು ಸಿಪಿಐಎಂ ಉಳ್ಳಾಲ ತಾಲೂಕು ಸಮಿತಿ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ರವರು ಸ್ಪೀಕರ್ ನಡೆಯನ್ನು ಪ್ರಶ್ನಿಸಿದರು. ಅವರು ಇಂದು ತೊಕ್ಕೊಟ್ಟು ಜಂಕ್ಷನ್ ನಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ ಅಗ್ರವಾಲ್ ವರ್ಗಾವಣೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಮಟ್ಕಾ,, ಜುಗಾರಿ, ಸ್ಕಿಲ್ ಗೇಮ್, […]

Continue Reading

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ; ತಲೆಮರೆಸಿಕೊಂಡ ಆರೋಪಿಗಳ ಮನೆಗೆ NIAದಾಳಿ.

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳ ಮನೆಗಳಿಗೆ NIAತಂಡ ಸ್ಥಳೀಯ ಪೊಲೀಸರ ಸಹಕಾರದಲ್ಲಿ ದಾಳಿ ನಡೆಸಿದೆ. ಬೆಳ್ತಂಗಡಿ ತಾಲೂಕು ಪಡಂಗಡಿ ಗ್ರಾಮದ ಪೊಯ್ಯಗದ್ದೆ ಎಂಬಲ್ಲಿನ ನೌಷಾದ್(27) ಮನೆಗೆ ಇಂದು ಬೆಳಗ್ಗೆ NIA ತಂಡ ಸ್ಥಳೀಯ ಪೊಲೀಸರ ಸಹಕಾರದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.ನೌಷಾದ್ ಪತ್ತೆಗಾಗಿ ಈಗಾಗಲೇ ಸುಳಿವು ನೀಡಿದವರಿಗೆ ಎನ್.ಐ.ಎ. 2ಲಕ್ಷ ಬಹುಮಾನ ಘೋಷಿಸಿದೆ. ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಮತ್ತೋರ್ವ ತಲೆಮರೆಸಿಕೊಂಡ ಆರೋಪಿ ಅಬೂಬಕ್ಕರ್ ಸಿದ್ದೀಕ್ ಎಂಬಾತನ ಪತ್ನಿ ಮತ್ತು ಸಹೋದರನ […]

Continue Reading

ಗುರುಪುರ: ಹೆಜ್ಜೇನು ದಾಳಿಗೆ ಮೂವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಗುರುಪುರ ಮಠದಬೈಲಿನಲ್ಲಿ ಹೆಜ್ಜೇನು ದಾಳಿ ನಡೆಸಿ ಮೂವರು ಗಂಭೀರ ಗಾಯಗೊಂಡು, ಇಬ್ಬರಿಗೆ ಸಾಮಾನ್ಯ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಮಠದಬೈಲಿನ ಬೇಬಿ ಎಂಬವರು ಮನೆಯಂಗಳದಲ್ಲಿ ಇದ್ದ ವೇಳೆ ಹೆಜ್ಜೇನು (ಪೆರಿಯ) ಗುಂಪೊಂದು ದಾಳಿ ಮಾಡಿದೆ; ನೋವಿನಿಂದ ಕಿರುಚುತ್ತಾ ಹತ್ತಿರದ ರಸ್ತೆಗೆ ಓಡಿ ಬಂದ ವೇಳೆ ಅವರ ನೆರವಿಗೆ ಬಂದ ಗಣೇಶ್ ಮೇಲೆಯೂ ಹೆಜ್ಜೇನು ಎರಗಿದೆ. ಇವರಿಬ್ಬರು ತಪ್ಪಿಸಿಕೊಳ್ಳಲು ರಸ್ತೆಯಲ್ಲಿ ಓಡಾಡುತ್ತಿದ್ದ ಸಂದರ್ಭ ಇವರ ನೆರವಿಗೆ ಬಂದ ಶೋಧನ್ ರವರ ಮೇಲೂ ದಾಳಿ ಮಾಡಿದೆ. ಹೆಜ್ಜೇನು ದಾಳಿಯಿಂದ […]

Continue Reading

ಕಳಪೆ ಮಟ್ಟದ ಪೀಠೋಪಕರಣ ತಯಾರಿಸಿ ಕೊಟ್ಟು ವಂಚನೆ; ಪ್ರೀತಿ ಫರ್ನಿಚರ್ ಮಾಲಕನಿಗೆ ಬಿತ್ತು ದಂಡ; ಜಿಲ್ಲಾ ಗ್ರಾಹಕ ನ್ಯಾಯಾಲಯ ತೀರ್ಪು

ಕಳಪೆ ಮಟ್ಟದ ಪೀಠೋಪಕರಣ ತಯಾರಿಸಿ ಕೊಟ್ಟು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಸಮೀಪದ ಕಲ್ಲಂಗಲದ ಪ್ರೀತಿ ಫರ್ನಿಚರ್ ಮಾಲಕ ಸಂಜಯ್ ಕುಮಾರ್ ಗೆ 20,000 ರೂಪಾಯಿ ದಂಡ ವಿಧಿಸಿ ಮಂಗಳೂರಿನ ಜಿಲ್ಲಾ ಗ್ರಾಹಕರ ನ್ಯಾಯಾಲಯ ತೀರ್ಪು ನೀಡಿದೆ. ಕಲ್ಲಂಗಲ ನಿವಾಸಿ ಹೈದರ್ ಅಲಿ 50,000 ರೂಪಾಯಿ ಮುಂಗಡ ನೀಡಿ ಉತ್ತಮ ಗುಣಮಟ್ಟದ ತೇಗದ ಮರದಿಂದ ಮನೆಗೆ ಪೀಠೋಪಕರಣವನ್ನು ತಯಾರಿಸಲು ಸೂಚಿಸಿದ್ದರು. ನಿಗದಿತ ಸಮಯಕ್ಕೆ ಪೀಠೋಪಕರಣ ತಯಾರಿಸದೆ ಕಳಪೆ ಗುಣಮಟ್ಟದ ಪೀಠೋಪಕರಣಗಳನ್ನು ಪೂರೈಸಿದ ಬಗ್ಗೆ ಹೈದರ್ ಅಲಿ ನ್ಯಾಯಾಲಯಕ್ಕೆ […]

Continue Reading

ಮಂಗಳೂರು ಪೊಲೀಸ್ ಕಮೀಶನರ್ ವರ್ಗಾವಣೆ ಒತ್ತಾಯಿಸಿ- ಉಡುಪಿಯಲ್ಲಿ ಸಿಪಿಐಎಂ ಮತ್ತು ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ

ಪ್ರತಿಭಟನೆ ಧರಣಿಗಳಿಗೆ ಅನುಮತಿ ನಿರಾಕರಣೆ ಮಾಡುವುದು ,ಸಿಪಿಐಎಂ ಮುಖಂಡರ ಮೇಲೆ ಹಾಗೂ ಜನಪರ ಸಂಘಟನೆಯ ಮುಖಂಡರ ಮೇಲೆ ಮೊಕದ್ದಮೆ ಹೂಡುವುದು, ಸಂವಿಧಾನದ ಹಕ್ಕುಗಳನ್ನು ದಮನಿಸಲು ಹೊರಟ, ಬಿ.ಜೆ.ಪಿ. ಸಂಘಪರಿವಾರದ ಬೆಂಗಾವಲಾಗಿ ನಿಂತಿರುವ ಮಂಗಳೂರು ಪೊಲೀಸ್ ಕಮೀಶನರ್ ಅನುಪಮ್ ಅಗರವಾಲ್ ವರ್ಗಾವಣೆ ಒತ್ತಾಯಿಸಿ ಉಡುಪಿಯ ಅಜ್ಜರಕಾಡು ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿ ಸರಕಾರಕ್ಕೆ ಒತ್ತಾಯಿಸಿಸಲಾಯಿತು. ಮುಖ್ಯಮಂತ್ರಿ ಹಾಗೂ ಗ್ರಹ ಸಚಿವರು ಕೂಡಲೆ ಸಿಪಿಐಎಂ ಮುಖಂಡರ ಮೇಲೆ ಹಾಕಿರುವ ಕೇಸನ್ನು ವಾಪಾಸು ಪಡೆಯಬೇಕು, ಅಕ್ರಮ ಮರಳುಗಾರಿಕೆ, ಬೆಟ್ಟಿಂಗ್, ಮಸಾಜ್ […]

Continue Reading

ಬಾಡಿಗೆ ಹೋಗಿದ್ದ ವಿಟ್ಲದ ಚಾಲಕ ನಾಪತ್ತೆ. ಉಪ್ಪಿನಂಗಡಿಯಲ್ಲಿ ಅನಾಥ ಸ್ಥಿತಿಯಲ್ಲಿ ಆಟೋ ಪತ್ತೆ; ಚಾಲಕನ ಮೊಬೈಲ್ ಸ್ವಿಚ್ಡ್ ಆಫ್

ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವೀರಕಂಭ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕರ ಪುತ್ರ ಧನರಾಜ್(28) ನಾಪತ್ತೆಯಾದ ಆಟೋ ಚಾಲಕ. 28/11/2024ರಂದು ಎಂದಿನಂತೆ ಬೆಳಿಗ್ಗೆ 8.30ರ ಸುಮಾರಿಗೆ ತನ್ನ ಮನೆಯಿಂದ ಆಟೋದೊಂದಿಗೆ ಹೊರಟಿದ್ದ ಧನರಾಜ್ ಆರು ದಿನ ಕಳೆದರೂ ಮರಳಿ ಬಂದಿಲ್ಲ. ಆತಂಕಗೊಂಡ ಪೋಷಕರು ಧನರಾಜ್ ಮೊಬೈಲಿಗೆ ಕರೆ ಮಾಡಿದರೂ ಸ್ವಿಚ್ಡ್ ಆಫ್ ಬರುತ್ತಿದೆ. ಸಂಬಂಧಿಕರಲ್ಲಿ, ಸ್ನೇಹಿತರಲ್ಲಿ ವಿಚಾರಿಸಿದ್ದರೂ ಎಲ್ಲೂ ಮಾಹಿತಿ ಲಭ್ಯವಾಗಿಲ್ಲ ಎಂದು ಪೋಷಕರು ತಿಳಿಸಿದ್ದಾರೆ. ತುಳು-ಕನ್ನಡ ಭಾಷೆ ಬಲ್ಲ ಸುಮಾರು ಐದು […]

Continue Reading

ಚುನಾವಣಾ ಬಾಂಡ್ ಹಗರಣ: ನಳಿನ್ ಕುಮಾರ್ ಕಟೀಲ್ FIR ರದ್ದುಗೊಳಿಸಿದ ಹೈಕೋರ್ಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಸದ್ದು ಮಾಡಿದ್ದ ಸಂದರ್ಭ, ಮುಖ್ಯಮಂತ್ರಿ ವಿರುದ್ಧವೇ ಎಫ್ ಐ ಆರ್ ದಾಖಲಾಗಿ ಬಿಜೆಪಿ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯರನ್ನು ಆಗ್ರಹಿಸುತ್ತಿದ್ದ ಸಂದರ್ಭ ಇದಕ್ಕೆ ಪ್ರತ್ಯಾಸ್ತ್ರ ಅನ್ನುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಚುನಾವಣಾ ಬಾಂಡ್ ಗೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಾಗಿತ್ತು. ಚುನಾವಣಾ ಬಾಂಡ್ ಗಳನ್ನು ಖರೀದಿಸಲು ಉದ್ಯಮಿಗಳ ಮೇಲೆ ಒತ್ತಡ ಹೇರಿದ ಆರೋಪದ ಮೇಲೆ ರಾಜ್ಯ […]

Continue Reading

ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಸಂಘಪರಿವಾರದ ಕಾರ್ಯಕರ್ತ ಪ್ರಸಾದ್

ಸತತ ಸುರಿಯುವ ಮಳೆಯ ನಡುವೆ ಮುಳುಗು ತಜ್ಞ ಇಸ್ಮಾಯಿಲ್ ಕಾರ್ಯಾಚರಣೆ.. ಮೃತದೇಹ ಪತ್ತೆ ಬೆಳ್ತಂಗಡಿ ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ, ಸಂಘಪರಿವಾರದ ಕಾರ್ಯಕರ್ತ ಪ್ರಸಾದ್ ಎಂಬವರು ಡಿಸೆಂಬರ್ 2 ರಂದು ಸಂಜೆ ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಗೂ ಮಾಹಿತಿ‌‌‌ ನೀಡಲಾಗಿತ್ತು. ಆದರೆ ಮುಳುಗು ತಜ್ಞ ಬೆಳ್ತಂಗಡಿ‌ಯ‌ ಸಂಜಯ ನಗರದ ಇಸ್ಮಾಯಿಲ್‌ ಸತತ ಸುರಿಯುವ […]

Continue Reading

ಗಡಿದಾಟಿ ಉಡುಪಿ ಜಿಲ್ಲೆಗೂ ವಿಸ್ತರಣೆಗೊಂಡ ಮಂಗಳೂರು ಪೊಲೀಸ್ ಕಮೀಷನರ್ ಹಠಾವೋ ಚಳವಳಿ

ಸರ್ವಾಧಿಕಾರಿಗಳಿಗೆ, ಜನವಿರೋಧಿ ಐಪಿಎಸ್ ಗಳಿಗೆ ತಲೆಬಾಗುವ ಪ್ರಶ್ನೆಯೇ ಇಲ್ಲ. ಹೋರಾಟ ಮತ್ತಷ್ಟು ವ್ಯಾಪಕಗೊಳ್ಳಲಿದೆ: ಸಿಪಿಐಎಂ ಕುಂದಾಪುರ ತಾಲೂಕು ಸಮಿತಿ ಪ್ರತಿಭಟನೆ, ಧರಣಿಗಳಿಗೆ ಅನುಮತಿ ನಿರಾಕರಿಸುತ್ತಿರುವ, ಜನಪರ ಸಂಘಟನೆಗಳ ಮೇಲೆ ಸರಣಿ ಮೊಕದ್ದಮೆ ಹೂಡುತ್ತಿರುವ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು, ಮಂಗಳೂರು ನಗರಿದಂದ ಅವರನ್ನು ವರ್ಗಾಯಿಸಬೇಕು ಎಂದು ಒತ್ತಾಯಿಸಿ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಡಿವೈಎಪ್ಐ ಸಂಘಟನೆಗಳಿಂದ ಜಿಲ್ಲಾದ್ಯಂತ ಪ್ರತಿಭಟನಾ ಸಭೆ ನಡೆಯುತ್ತಾ ಇದೆ. ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ […]

Continue Reading

ಪೊಲೀಸ್ ಕಮೀಷನರ್ ಅಗ್ರವಾಲ್ ಎತ್ತಂಗಡಿಯಾಗದೆ ವಿರಮಿಸುವುದಿಲ್ಲ, ಹೋರಾಟವನ್ನು ಜಿಲ್ಲೆಯ ಮೂಲೆಮೂಲೆಗೆ ವಿಸ್ತರಿಸುತ್ತೇವೆ: ಮುನೀರ್ ಕಾಟಿಪಳ್ಳ

ಪೊಲೀಸ್ ಕಮೀಷನರ್ ವರ್ಗಾವಣೆಗೆ ಆಗ್ರಹಿಸಿ ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ಪ್ರತಿಭಟನೆ, ಧರಣಿಗಳಿಗೆ ಅನುಮತಿ ನಿರಾಕರಿಸುತ್ತಿರುವ, ಜನಪರ ಸಂಘಟನೆಗಳ ಮೇಲೆ ಸರಣಿ ಮೊಕದ್ದಮೆ ಹೂಡುತ್ತಿರುವ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು, ಮಂಗಳೂರು ನಗರದಂದ ಅವರನ್ನು ವರ್ಗಾಯಿಸಬೇಕು ಒತ್ತಾಯಿಸಿ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ನಗರದ ಕ್ಲಾಕ್ ಟವರ್ ಮುಂಭಾಗ ಪ್ರತಿಭಟನಾ ಸಭೆ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಕಮೀಷನ್ ಹಠಾವೊ ಘೋಷಣೆಗಳನ್ನು ಕೂಗಿದರು. ಕಮೀಷನರ್ ವಿರುದ್ಧದ […]

Continue Reading