ರೈಸ್ ಪುಲ್ಲಿಂಗ್ ದಂಧೆ ಆರೋಪಿಗಳ ಬಂಧನ.ರೈಸ್ ಪುಲ್ಲಿಂಗ್ ಯಂತ್ರ, ಬೆಂಝ್, ಫಾರ್ಚುನರ್, ಸ್ಕಾರ್ಪಿಯೋ ಕಾರುಗಳು, 1,332 ಗ್ರಾಂ.ಚಿನ್ನ,28 ಲಕ್ಷ ರೂಪಾಯಿ ನಗದು ಜಪ್ತಿ

ರೈಸ್ ಪುಲ್ಲಿಂಗ್ ಮೆಷಿನ್ ನೀಡುವುದಾಗಿ ರಾಜ್ಯದ ವಿವಿಧೆಡೆ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದ ಮಾಜಿ ಪೊಲೀಸ್ ಸೇರಿ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 2.88 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾನ್ ಸ್ಟ್ರೇಬಲ್ ವಿ.ಆರ್. ನಟೇಶ್,ವೆಂಕಟೇಶ್, ಸೋಮಶೇಖರ್ ಬಂಧಿತರು.ಬಂಧಿತರಿಂದ ರೈಸ್ ಪುಲ್ಲಿಂಗ್ ಯಂತ್ರ, ಬೆಂಝ್, ಫಾರ್ಚುನರ್, ಸ್ಕಾರ್ಪಿಯೋ ಕಾರುಗಳು, 1 ಕೆಜಿ 332 ಗ್ರಾಂ.ಚಿನ್ನದ ಆಭರಣಗಳು ಮತ್ತು 28 ಲಕ್ಷ ರೂಪಾಯಿ ನಗದು ಹಣ ಜಪ್ತಿ ಮಾಡಲಾಗಿದೆ. ಶ್ರೀಮಂತರನ್ನು ಹುಡುಕಿ ಅವರನ್ನು ತಮ್ಮ ಬುಟ್ಟಿಗೆ […]

Continue Reading

ಶಿಕ್ಷಣ ಇಲಾಖೆಯ ಮಹತ್ವದ ಸುತ್ತೋಲೆ,ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಂದ ಪಡೆಯುವ ಶುಲ್ಕದ ವಿವರಗಳನ್ನು ಕಡ್ಡಾಯವಾಗಿ ಪ್ರಕಟಿಸಬೇಕು

ಶೈಕ್ಷಣಿಕ ವರ್ಷ ಸಮೀಪಿಸುತ್ತಿದ್ದಂತೆಯೇ ಶಾಲೆಗೆ ಪ್ರವೇಶ ಪಡೆಯುವವರ ಪ್ರಕ್ರಿಯೆಯೂ ಆರಂಭವಾಗಿದೆ. ಇದರ ಮಧ್ಯೆ ಖಾಸಗಿ ಶಾಲೆಗಳು ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ.ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದ್ದು ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಂದ ಪಡೆಯುವ ಶುಲ್ಕದ ವಿವರಗಳನ್ನು ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಸೂಚಿಸಿದೆ. ಏಪ್ರಿಲ್ ನಿಂದ ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು ಎಂದು ತಿಳಿಸಲಾಗಿದ್ದು, ಜೊತೆಗೆ ಮಗು ಹಿಂದೆ ಓದುತ್ತಿದ್ದ ಶಾಲೆ ತೊರೆದು ಬೇರೆ ಶಾಲೆಗೆ ಪ್ರವೇಶ […]

Continue Reading

ಕಾಂಗ್ರೆಸ್ ಗೆ ಬಿಗ್ ಧಮಾಕ.. ಮಾಜಿ ಸಿಎಂ ಶೆಟ್ಟರ್ ರಾಹುಲ್ ಸಮ್ಮುಖದಲ್ಲಿಯೇ ‘ಕೈ’ ಸೇರ್ಪಡೆ..ರೆಡಿಯಾಯ್ತು 2 ಹೆಲಿಕಾಪ್ಟರ್.!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನಿರೀಕ್ಷಿತ ರೀತಿಯ ಯಶಸ್ಸು ಕಂಡಿದ್ದು, ಬಿಜೆಪಿಯ ಸ್ವಯಂಕೃತ ಅಪರಾಧ ಪಕ್ಷಕ್ಕೆ ಮಗ್ಗುಲ ಮುಳ್ಳಾಗಿದೆ. ಪ್ರಬಲ ಲಿಂಗಾಯತ ಮುಖಂಡ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರನ್ನು ಬಿಜೆಪಿ ನಡೆಸಿಕೊಂಡ ರೀತಿಯಿಂದ ಕೆಂಡಾಮಂಡಲರಾಗಿರುವ ಶೆಟ್ಟರ್ ಶಿರಸಿಗೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇಂದೇ ಬೆಂಗಳೂರಿಗೆ ತೆರಳಿ ರಾಹುಲ್ ಗಾಂಧಿ ಸಮ್ಮುಖದಲ್ಲಿಯೇ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಬಹುತೇಕ ಖಚಿತವಾಗಿದೆ.ಹುಬ್ಬಳ್ಳಿ, ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. […]

Continue Reading

ಚೆಕ್ ಬೌನ್ಸ್ ,ದತ್ತಾ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಮಾಜಿ ಶಾಸಕ ಹಾಗೂ ಜೆಡಿಎಸ್ ಪಕ್ಷದ ಕಡೂರು ವಿಧಾನ ಸಭಾಕ್ಷೇತ್ರದ ಅಭ್ಯರ್ಥಿ ವೈ.ಎಸ್.ವಿ ದತ್ತಾ ಅವರಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶಿದೆ. ಚೆಕ್ ಬೌನ್ಸ್ ಆರೋಪಕ್ಕೆ ಸಂಬಂಧಿಸಿದಂತೆ ಸಿ.ಎಸ್ ಸೋಮೇಗೌಡ ಸಲ್ಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಬಂಧನ ರಹಿತ ವಾರಂಟ್ ಜಾರಿ ಮಾಡಿದ್ದಾರೆ. ಏ.26ರಂದು ದತ್ತವರನ್ನು ನ್ಯಾಯಾಲಯಕ್ಕೆ ಹಾಜರಿ ಪಡಿಸುವಂತೆ ಸೂಚನೆ ನೀಡಿದ್ದಾರೆ. ದತ್ತಾ ಏಪ್ರಿಲ್ 15ರಂದು ದೂರುದಾರರಿಂದ ಪಡೆದುಕೊಂಡಿರುವ […]

Continue Reading

ಈ ಸಲ ಚುನಾವಣೆಯಲ್ಲಿ ಸ್ಪರ್ಧಿಸದೆ, ಕೋಮುವಾದಿ ಶಕ್ತಿಗಳನ್ನು ಸೋಲಿಸಲು ಜಾತ್ಯಾತೀತ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದ ಎಡಪಕ್ಷಗಳು

ರಾಜ್ಯದಲ್ಲಿ ಚುನಾವಣೆಯ ಕಾವು ರಂಗೇರುತ್ತಿದೆ.ಈ ಬಾರಿ ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಲು ಎಡಪಕ್ಷಗಳು ತೀರ್ಮಾನಿಸಿವೆ. ಬಿಜೆಪಿ ವಿರೋಧಿ ಮತಗಳು ವಿಭಜನೆಯಾಗುವುದನ್ನು ತಡೆಯಲು ಕರಾವಳಿ ಜಿಲ್ಲೆಗಳಲ್ಲಿನ ಯಾವ ಕ್ಷೇತ್ರದಲ್ಲೂ ಸ್ಪರ್ಧಿಸದಿರಲು ಸಿಪಿಐ(ಎಂ) ಮತ್ತು ಸಿಪಿಐ ಪಕ್ಷಗಳು ನಿರ್ಧರಿಸಿವೆ.ಈಗಾಗಲೇ ಬಿಜೆಪಿ 212 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಈ ಪ್ರದೇಶದಲ್ಲಿ ಜಾತ್ಯತೀತ ಮತಗಳನ್ನು ಕ್ರೋಢೀಕರಿಸಬೇಕು ಎಂದು ಉಭಯ ಪಕ್ಷಗಳು ತೀರ್ಮಾನಿಸಿವೆ. ಸಾಕಷ್ಟು ಪ್ರಭಾವ ಹೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಸಲು ಪಣ […]

Continue Reading

ರಘುಪತಿ ಭಟ್’ರ ಹೃದಯ ಹೀನ ನಡವಳಿಕೆಯೇ ಇಂದಿನ ಕಣ್ಣೀರಿಗೆ ಕಾರಣ:ನವೀನ್ ಸೂರಿಂಜೆ

ಬಿಜೆಪಿ ಟಿಕೆಟ್ ಸಿಕ್ಕಿಲ್ಲ ಎಂದು ರಘುಪತಿ ಭಟ್ಟರು ಕಣ್ಣೀರು ಹಾಕಿದ್ದಾರೆ. ನಿಜವಾಗಿಯೂ ಕಣ್ಣೀರು ಹಾಕಬೇಕಿದ್ದ ಸಮಯದಲ್ಲಿ ಭಟ್ಟರು ಹೃದಯ ಹೀನರಂತೆ ವರ್ತಿಸಿದ ಪರಿಣಾಮ ಇಂದಿನ ಸ್ಥಿತಿ. ಅವತ್ತು ಹಾಜಬ್ಬ ಮತ್ತು ಹಸನಬ್ಬ ಎಂಬ ತಂದೆ-ಮಗನನ್ನು ಆದಿ ಉಡುಪಿಯ ನಡು ರಸ್ತೆಯಲ್ಲಿ ಬೆತ್ತಲು ಮಾಡಲಾಯಿತು. ಈ ರೀತಿ ಬೆತ್ತಲು ಮಾಡಿ ಬೆತ್ತಲಾದ ಆರೋಪಿಯನ್ನು ಖುಲಾಸೆಗೂ ಮುನ್ನವೇ ಬೆಂಬಲಿಸಿ ಪುರಸಭೆಗೆ ನಾಮ ನಿರ್ದೇಶನ ಮಾಡಲಾಯಿತು. ಆಗ ಭಟ್ಟರು ಕಣ್ಣೀರು ಹಾಕಲಿಲ್ಲ. ಒಬ್ಬ ಉಗ್ರ ಹಿಂದುತ್ವವಾದಿಯನ್ನು ಭಟ್ಟರೇ ಬೆಳೆಸಿದರು‌. ತಾನು ಬೆಳೆಸಿದ್ದು […]

Continue Reading

‘ಬಲಿ ಕಾ ಬಕ್ರಾ’ ‘ಸಂತೋಷ’ ಆಟದಲ್ಲಿ ಗೆಲ್ಲುವರಾರು..?

ಒಂದು ಕಡೆ ಡಿಕೆಶಿ, ಸಿದ್ರಾಮಣ್ಣನನ್ನು ಕಟ್ಟಿಹಾಕಿ..ಇನ್ನೊಂದು ಕಡೆ ಸೋಮಣ್ಣ ಕಥೆ ಖತಂ.! ಭಾರತೀಯ ಜನತಾ ಪಕ್ಷ ಬಹುತೇಕ ಹುರಿಯಾಳುಗಳ ಪಟ್ಟಿ ಅಂತಿಮಗೊಳಿಸಿ ಬಿಡುಗಡೆ ಮಾಡಿದೆ. ಹಳೆಯ, ಹಿರಿಯ ನಾಯಕರಿಗೆ ನಿವೃತ್ತಿ ಹೆಸರಿನಲ್ಲಿ ರಾಜಕೀಯದಿಂದಲೇ ದೂರ ಮಾಡಲಾಗಿದೆ. ಕೆಲವೊಂದು ಕ್ಷೇತ್ರಗಳಲ್ಲಿ ಹೊಸ ಮುಖಗಳನ್ನು ಪರಿಚಯಿಸಲಾಗಿದೆ. ಆದರೆ ಎಲ್ಲಕ್ಕಿಂತ ಮುಖ್ಯವಾಗಿ ಬಿಜೆಪಿಯ ಈ ಬಾರಿಯ ಪಟ್ಟಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು ಎರಡು ಹೆಸರುಗಳು ಮಾತ್ರ. ಅವು ಯಾರದೆಂದರೆ ಒಬ್ಬರು ಪದ್ಮನಾಭನಗರ ಶಾಸಕರಾದ ಆರ್ ಅಶೋಕ್, ಮತ್ತೊಬ್ಬರು ಗೋವಿಂದರಾಜ ನಗರ ಶಾಸಕರಾದ […]

Continue Reading

5 ಕ್ಷೇತ್ರಗಳ ಟಿಕೆಟ್‌ ವಿಷಯದಲ್ಲಿ ಡಿಕೆಸಿ,ಸಿದ್ದು ನಡುವೆ ಮೂಡದ ಒಮ್ಮತ. ಕಾಂಗ್ರೆಸ್‌ನ 30 ಅಭ್ಯರ್ಥಿ ಪಟ್ಟಿ ಅಂತಿಮ

ಕಾಂಗ್ರೇಸ್ ಪಕ್ಷ ಬಾಕಿ ಉಳಿಸಿಕೊಂಡಿರುವ 58 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪಕ್ಷದಲ್ಲಾದ ಅಭ್ಯರ್ಥಿಗಳ ಪಟ್ಟಿಯ ಹಿನ್ನೆಲೆಯಲ್ಲಿ ಆಗಿರುವ ಬೆಳವಣಿಗೆ ಗಮನಿಸಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.ಸೋಮವಾರ ಹಾಗೂ ಮಂಗಳವಾರ ಹೊಸದಿಲ್ಲಿಯಲ್ಲಿ ನಡೆದ ಕಾಂಗ್ರೆಸ್‌ ನಾಯಕರ ಸರಣಿ ಸಭೆ ಬಳಿಕ ಈ ತೀರ್ಮಾನಕ್ಕೆ ಬರಲಾಗಿದೆ.ಬಾಕಿ 58 ಕ್ಷೇತ್ರಗಳ ಪೈಕಿ ಬಹುತೇಕ 30 ಕ್ಷೇತ್ರಗಳಿಗೆ ಕಣಕ್ಕಿಳಿಸುವ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ.ತೀವ್ರ ಸಮಸ್ಯೆಯಾಗಿರುವ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಕೊನೆಘಳಿಗೆಯಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ. ಬಾಕಿ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ […]

Continue Reading

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲು ತಿಣುಕಾಟ; ಸಂದಿಗ್ಧ ಪರಿಸ್ಥಿತಿಯಲ್ಲಿ ಬಿಜೆಪಿ ಹೈಕಮಾಂಡ್.!

ರಾಷ್ಟ್ರ ರಾಜದಾನಿಯಲ್ಲಿ ಸತತವಾಗಿ ಮೂರು ದಿನಗಳ ಕಾಲ ಸಭೆಯ ಮೇಲೆ ಸಭೆಗಳನ್ನು ನಡೆಸಿದರೂ ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಬಿಜೆಪಿ ಹೈಕಮಾಂಡಿಗೆ ಸಾಧ್ಯವಾಗಿಲ್ಲ. ಸೋಮವಾರ ಬಿಡುಗಡೆಯಾಗಬೇಕಿತ್ತು, ಅಂದು ಬಿಡುಗಡೆ ಭಾಗ್ಯ ಕಂಡಿಲ್ಲ. ಮಂಗಳವಾರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದರು, ಬುಧವಾರದಂದು ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗುವ ಸಾಧ್ಯತೆಯಿದೆ ಎಂದು ಬೊಮ್ಮಾಯಿ ತಿಳಿಸಿದ್ದರು ಆದರೆ ಇಬ್ಬರ ಮಾತಿಗೂ ಅಂತ್ಯ ಕಾಣಲಿಲ್ಲ. ಇದೀಗ ಪಟ್ಟಿಯು ಅಂತಿಮ ಹಂತದಲ್ಲಿದೆ. ನಾವು ಸಭೆಗಳನ್ನು […]

Continue Reading

3ನೇ ಪಟ್ಟಿಯ ಕಗ್ಗಂಟು, ಸಿದ್ದು ,ಡಿಕೆಶಿ ದೆಹಲಿಯಲ್ಲಿ, ಇಬ್ಬರು ನಾಯಕರ ಉಪಸ್ಥಿತಿಯಲ್ಲಿ ಸಭೆ

ಕಾಂಗ್ರೆಸ್ಸಿನ ಹೈಕಮಾಂಡ್‌ ಬುಲಾವ್‌ ಮೇರೆಗೆ ಡಿ.ಕೆ. ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಸೋಮವಾರ ದೆಹಲಿಗೆ ದೌಡಾಯಿಸಿದ್ದಾರೆ.ಅಭ್ಯರ್ಥಿಗಳ ಮೂರನೇ ಪಟ್ಟಿಗೆ ಬಿಡುಗಡೆ ಭಾಗ್ಯ ಇನ್ನೂ ದೊರೆಯಲೇ ಇಲ್ಲ.ಎರಡು ಬಾರಿಯಾಗಿ 166 ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರೂ ಬಾಕಿ ಇರುವ 58 ಕ್ಷೇತ್ರಗಳ 3ನೇ ಪಟ್ಟಿ ಹೈಕಮಾಂಡಿಗೆ ತಲೆ ನೋವಾಗಿ ಪರಿಣಮಿಸಿದೆ.58 ಕ್ಷೇತ್ರದ ಬಗ್ಗೆ ಅಂತಿಮ ತೀರ್ಮಾನ ಮಾಡಲು ಎಐಸಿಸಿ ಅಧ್ಯಕ್ಷರಾದ ಖರ್ಗೆಯವರ ಕರೆ ಮೇರೆಗೆ ಡಿಕೆಸಿ ಹಾಗೂ ಸಿದ್ದರಾಮಯ್ಯ ದಿಲ್ಲಿಗೆ ತೆರಳಿದ್ದರು. ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ […]

Continue Reading