ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಹಾಗೂ ಹೆಡ್ ಕಾನ್‌ಸ್ಟೇಬಲ್‌ಗಳಿಗೆ ಇಂದಿನಿಂದ ಹೊಸ ‘ಕ್ಯಾಪ್’

ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಹಾಗೂ ಹೆಡ್ ಕಾನ್‌ ಸ್ಟೇಬಲ್‌ಗಳು ಇಂದಿನಿಂದ ಹೊಸ ‘ಕ್ಯಾಪ್’ ಧರಿಸಲಿದ್ದಾರೆ. ಈ ಮೂಲಕ ಹಲವಾರು ವರ್ಷಗಳಿಂದ ರಾಜ್ಯ ಪೊಲೀಸರು ಧರಿಸುತ್ತಿದ್ದ ಸ್ಚೋಚ್ ಕ್ಯಾಪ್‌ಗೆ ಪೊಲೀಸ್‌ ಇಲಾಖೆ ಅಂತಿಮ ವಿದಾಯ ಹೇಳಲಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಇಂದು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಗೃಹ ಸಚಿವರು ಪಿ-ಕ್ಯಾಪ್ ಘೋಷಣೆ ಹಾಗೂ ವಿತರಣಾ ಮಾಡಲಿದ್ದಾರೆ. ತೆಲಂಗಾಣ ಮಾದರಿಯಲ್ಲೇ […]

Continue Reading

ಹೊರಗೆ ಆರ್ ಎಸ್ ಎಸ್ ವಿರುದ್ಧ ಕಿಡಿ; ಒಳಗಡೆ ಆರ್ ಎಸ್ ಎಸ್ ಅಪ್ಪಿ ಮುದ್ದಾಡುತ್ತಿರುವ ಕಾಂಗ್ರೆಸ್ ಸೇನಾನಿಗಳು.!

ಕಾಂಗ್ರೆಸ್ ಸರ್ಕಾರದಲ್ಲಿ ಲಾಭದಾಯಕ ಹುದ್ದೆಗಳು ಆರ್ ಎಸ್ ಎಸ್ ಪಾಲು.! ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳ ನಿರ್ಬಂಧ ಬಗ್ಗೆ ಭಾರೀ ಸದ್ದು ಗದ್ದಲ ಕೇಳಿ ಬರುತ್ತಿರುವ ಹೊತ್ತಿಗೆ ಕಾಂಗ್ರೆಸ್ ಪಕ್ಷವನ್ನು ಲಗಾಡಿ ತೆಗೆಯುವವರಾರು.? ಅನ್ನುವ ಬಗ್ಗೆ ಚರ್ಚೆಗಳು ನಡೆಯತೊಡಗಿದೆ. ಕಾಂಗ್ರೆಸ್ ನಾಯಕರು ಮೃದು ಹಿಂದುತ್ವದ ಕಡೆಗೆ ವಾಲಿರುವ ಪರಿಣಾಮ ಕಾಂಗ್ರೆಸ್ ಗೆ ಸರಣಿ ಸೋಲಾಗುತ್ತಿದೆ. ಬಿಜೆಪಿಯ ಸೈದ್ಧಾಂತಿಕತೆಯ ವಿರುದ್ಧ ಸಮರ ಸಾರಿ ಪಕ್ಷವನ್ನು ಬೆಳೆಸಬೇಕಾದ ಕಾಂಗ್ರೆಸ್ಸಿಗರೇ ಸ್ವತ‌ಹ ಬಿಜೆಪಿಗರಾಗಿ ಪರಿವರ್ತಿತರಾಗುತ್ತಿರುವುದು ಕಾಂಗ್ರೆಸ್ ದೊಡ್ಡ […]

Continue Reading

ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?, ಕೆಪಿಸಿಸಿ ಪಟ್ಟಕ್ಕೆ ಕೃಷ್ಣ ಭೈರೇಗೌಡ.?

ಕುಮಾರಣ್ಣನಿಗೆ ಅಮಿತ್ ಶಾ ಸಿಗ್ನಲ್ಲು…, ಬಿಜೆಪಿಯಲ್ಲಿ ಜಿಬಿಎ ಕಿರಿಕಿರಿ… ✍️. ಆರ್.ಟಿ.ವಿಠ್ಠಲಮೂರ್ತಿ ಮುಂದಿನ ತಿಂಗಳ ಮೂರನೇ ವಾರ ದಿಲ್ಲಿ ದಂಡಯಾತ್ರೆಗೆ ಹೊರಡಲಿರುವ ಸಿಎಂ ಸಿದ್ಧರಾಮಯ್ಯ ವರಿಷ್ಟರ ಮುಂದೆ ಹೊಸ ಪ್ರಪೋಸಲ್ಲು ಮಂಡಿಸಲಿದ್ದಾರೆ. ಈ ಪ್ರಪೋಸಲ್ಲಿಗೆ ಒಪ್ಪಿಗೆ ಸಿಕ್ಕರೆ ಇನ್ನಿಬ್ಬರು ನಾಯಕರು ಕರ್ನಾಟಕದ ಉಪಮುಖ್ಯಮಂತ್ರಿಗಳಾಗಲಿದ್ದಾರೆ.ಸಿದ್ಧರಾಮಯ್ಯ ಅವರ ಆಪ್ತರ ಪ್ರಕಾರ: ಉಪಮುಖ್ಯಮಂತ್ರಿ ಪಟ್ಟಕ್ಕೆ ಬರಲಿರುವ ಈ ನಾಯಕರ ಪೈಕಿ ಒಬ್ಬರು ದಲಿತ ನಾಯಕ ಪ್ರಿಯಾಂಕ್ ಖರ್ಗೆ. ಮತ್ತೊಬ್ಬರು ಮುಸ್ಲಿಂ ನಾಯಕ ಜಮೀರ್ ಅಹ್ಮದ್. ಅಂದ ಹಾಗೆ ಉಪಮುಖ್ಯಮಂತ್ರಿ ಪಟ್ಟಕ್ಕೆ ಈ […]

Continue Reading

ಮದುವೆಯಾಗುವ ಭರವಸೆ ನೀಡಿ, ಮಹಿಳೆ ಮೇಲೆ ಅತ್ಯಾಚಾರ; ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಪ್ರಕರಣ ದಾಖಲು, ಎಎಸ್ಐ ಅಮಾನತು

ಮದುವೆಯಾಗುವ ಭರವಸೆ ನೀಡಿ, ಮಹಿಳೆ ಮೇಲೆ ಅತ್ಯಾಚಾರ ಆರೋಪದ ಅಡಿಯಲ್ಲಿ ಡಿಜೆ ಹಳ್ಳಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೂರ್ವ ವಿಭಾಗದ ಗೋವಿಂದಪುರ ಠಾಣೆಯಲ್ಲಿ ಸಂತ್ರಸ್ತ ಮಹಿಳೆಯ ದೂರಿನ ಆಧಾರದ ಮೇಲೆ ಇನ್ಸ್ ಪೆಕ್ಟರ್ ಸುನಿಲ್ ಮತ್ತು ಎಎಸ್‌ಐ ಪ್ರಕಾಶ್ ರಾಥೋಡ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಕರ್ತವ್ಯ ಲೋಪ ಆರೋಪದಡಿ ಪ್ರಕಾಶ್ ರಾಥೋಡ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಅಲ್ಪಸಂಖ್ಯಾತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ರಿಜಿಸ್ಟ್ರಾರ್ ಮ್ಯಾರೇಜ್ ಆಗುವುದಾಗಿ […]

Continue Reading

ಖಾಸಗಿ ಶಾಲೆ ಸಿಬ್ಬಂದಿ ವಿರುದ್ಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಅನುಮತಿ. ಅನುದಾನಿತ ಖಾಸಗಿ ಶಾಲೆಗಳ ಸಿಬ್ಬಂದಿ ಸರಕಾರಿ ಸಿಬ್ಬಂದಿಯ ಭಾಗ

ಖಾಸಗಿ ಶಾಲೆ ಸಿಬ್ಬಂದಿ ವಿರುದ್ಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿ, ಅನುದಾನಿತ ಖಾಸಗಿ ಶಾಲೆಗಳ ಸಿಬ್ಬಂದಿ ಸರಕಾರಿ ಸಿಬ್ಬಂದಿಯ ಭಾಗವೆಂದು ನ್ಯಾಯಾಲಯ ಹೇಳಿದೆ. ಆಸ್ತಿ ವಿವರ ಸಲ್ಲಿಸದಿರುವುದು ಮತ್ತು ಅನುಮತಿ ಇಲ್ಲದೆ ಭೂಮಿ ಖರೀದಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಆದ್ದರಿಂದ, ಬಿ. ಲಕ್ಷ್ಮಿನಾರಾಯಣ ಅವರ ವಿರುದ್ಧ ತನಿಖೆ ಮುಂದುವರಿಸಲು ಆದೇಶಿಸಿದೆ. ಲೋಕಾಯುಕ್ತರು ಕೈಗೊಂಡಿದ್ದ ತನಿಖೆ ಪ್ರಶ್ನಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಬೈರಶೆಟ್ಟಿಹಳ್ಳಿಯ ಶ್ರೀ ಬಾಲಾಂಜನೇಯ ಪ್ರೌಢಶಾಲೆಯ ಗ್ರಂಥಪಾಲಕ ಮತ್ತು ಗುಮಾಸ್ತ ಬಿ. ಲಕ್ಷ್ಮೀನಾರಾಯಣ ಸಲ್ಲಿಸಿದ ಮೇಲ್ಮನವಿಯನ್ನು […]

Continue Reading

ಬಿಜೆಪಿಗರಿಗೆ ಗೋವುಗಳ ಬಗ್ಗೆ ನಿಜವಾದ ಪ್ರೀತಿ, ಗೌರವವಿದ್ದರೆ, ವಿದೇಶಗಳಿಗೆ ಗೋಮಾಂಸ ರಫ್ತು ನಿಷೇಧಿಸಿ: ಸಚಿವ ರಾಮಲಿಂಗ ರೆಡ್ಡಿ

ಬಿಜೆಪಿ ಸರ್ಕಾರ ಬಂದ ನಂತರ ಭಾರತ ಗೋ ಮಾಂಸ ರಪ್ತು ಮಾಡುವಲ್ಲಿ 2ನೇ ಸ್ಥಾನಕ್ಕೆ ಏರಿದೆ. ಗೋವುಗಳ ಬಗ್ಗೆ ನಿಜವಾದ ಪ್ರೀತಿ ಮತ್ತು ಗೌರವವಿದ್ದರೆ, ಮೊದಲು ವಿದೇಶಗಳಿಗೆ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸಿ ಎಂದು ಸಚಿವ ರಾಮಲಿಂಗಾರೆಡ್ಡಿ ಯವರು ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಾಯಕರಿಗೆ ನೇರ ಸವಾಲು ಹಾಕಿದ್ದಾರೆ. ಗೋ ಸಂರಕ್ಷಣೆಯ ಹೆಸರಿನಲ್ಲಿ ರಾಜಕೀಯ ಮಾಡುವ ಬದಲು ಕೃತಿಯ ಮೂಲಕ ಬದ್ಧತೆ ಪ್ರದರ್ಶಿಸಬೇಕೆಂದು ಅವರು ಆಗ್ರಹಿಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು […]

Continue Reading

ಬೈಂದೂರು ಕ್ಷೇತ್ರಕ್ಕೆ ಅದು ಯಾರ ಶಾಪ ತಟ್ಟಿದೆಯೋ ಅ ದೇವರೇ ಬಲ್ಲ. ಕಾಂಗ್ರೆಸ್ ಗೆದ್ದರೂ ಹಾಗೆ, ಬಿಜೆಪಿ ಗೆದ್ದರೂ ಹಾಗೆ, ಬೈಂದೂರು ಬಿಜೆಪಿ ಬಡಿದಾಟ

ಈ ಬೈಂದೂರು ಕ್ಷೇತ್ರಕ್ಕೆ ಅದು ಯಾರ ಶಾಪ ತಟ್ಟಿದೆಯೋ ದೇವರೇ ಬಲ್ಲ. ಕಾಂಗ್ರೆಸ್ ಗೆದ್ದರೂ ಹಾಗೆ, ಬಿಜೆಪಿ ಗೆದ್ದರೂ ಹಾಗೆ, ಈ ಕ್ಷೇತ್ರ ಹಾಗೆಯೇ ಇದೆ. ಗೋಪಾಲ ಪೂಜಾರಿಯವರು ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕ್ಷೇತ್ರದ ಇಂಚಿಂಚೂ ಕೂಡ ಬಲ್ಲವರು. ಗುರುರಾಜ ಗಂಟಿಹೊಳೆ ಅವರು ಹಿಂದುತ್ವದ ಅಲೆಯಲ್ಲಿ ಗೆದ್ದುಬಂದವರು. ಒಂದಿಷ್ಟು ದೂರದೃಷ್ಟಿ ಚಿಂತನೆಗಳು, ವಿಪರೀತ ನಾಲೇಜ್ ಎಲ್ಲವೂ ವರ್ಕೌಟ್ ಆಗುತ್ತಿಲ್ಲ. ಬೈಂದೂರು ಬಿಜೆಪಿ ಅಧ್ಯಕ್ಷರಂತೂ ರಾಜಕೀಯವಾಗಿ ತೊಳಲಾಟದಲ್ಲಿದ್ದಾರೆ. ಆಳಿಗೊಂದು ಕಲ್ಲು ಎಂಬಂತೆ ಅಧ್ಯಕ್ಷರ ಮೇಲೆ ಬಣ […]

Continue Reading

ಭಯಾನಕ ನರಕವಾಗಿರುವ ಸರಕಾರಿ ಆಸ್ಪತ್ರೆಗಳಿಗೆ ಸೂಕ್ತ ಚಿಕಿತ್ಸೆ ಯಾವಾಗ?

ಸರ್ಕಾರದ ಎಲ್ಲ ಇಲಾಖೆಗಳೂ ಕೆಟ್ಟು ಕೆರೆಹಿಡಿದು ಹೋಗಿರುವಂತೆ ಆರೋಗ್ಯ ಇಲಾಖೆಯು ಹದಗೆಟ್ಟಿದೆ. ರಾಜ್ಯದ ಬಹುತೇಕ ಸರ್ಕಾರಿ ಆಸ್ಪತ್ರೆಗಳು ನರಕವಾಗಿವೆ. ತಾಲ್ಲೂಕು ಆಸ್ಪತ್ರೆಗಳ ಅವ್ಯವಸ್ಥೆಯಿಂದ ಬಡರೋಗಿಗಳು ಬಾಯಿ ಬಾಯಿ ಬಡಿದುಕೊಳ್ಳುವಂತಾಗಿದೆ. ಇಡೀ ಆರೋಗ್ಯ ವ್ಯವಸ್ಥೆಯೇ ರೋಗಗ್ರಸ್ತವಾಗಿದ್ದರೂ ರಾಜ್ಯ ಸರಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದೆ. ರಾಜ್ಯದಲ್ಲಿ ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 2,844 ಆಸ್ಪತ್ರೆಗಳಿವೆ. ಮಂಜೂರಾದ 6,563 ವೈದ್ಯರ ಹುದ್ದೆಗಳಿವೆ. ಈ ಪೈಕಿ 2,269 ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ವೈದ್ಯರನ್ನು ನೇಮಕ […]

Continue Reading

ಸ್ಥಳೀಯ ಸಂಸ್ಥೆ ವ್ಯಾಪ್ತಿ ಕಟ್ಟಡಕ್ಕೂ ಸ್ವಾಧೀನಾನುಭವ ಪತ್ರ(ಓಸಿ)ದಿಂದ ವಿನಾಯಿತಿ; ರಾಜ್ಯ ಸರಕಾರದ ಮಹತ್ವದ ನಿರ್ಧಾರ

ರಾಜ್ಯ ಸರ್ಕಾರವು ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿಯೂ ಸ್ವಾಧೀನಾನುಭವ ಪತ್ರ(ಓಸಿ)ದಿಂದ ವಿನಾಯಿತಿ ಮುಂದಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 1,200 ಚದರ ಅಡಿವರೆಗಿನ ವಿಸ್ತೀರ್ಣದಲ್ಲಿ ನಿರ್ಮಾಣ ಮಾಡಿದ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ(ಓಸಿ)ದಿಂದ ವಿನಾಯಿತಿ ನೀಡಿದ ಬೆನ್ನಲ್ಲೇ ಇತರೆ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿಯೂ ವಿನಾಯಿತಿ ನೀಡಲು ಸರ್ಕಾರ ಮುಂದಾಗಿದೆ.ನಗರಾಭಿವೃದ್ಧಿ ಇಲಾಖೆಯಿಂದ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ 1,200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಾಣ […]

Continue Reading

ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಸಂಘದ ಕಾರ್ಯಚಟುವಟಿಕೆಗಳಿಗೆ ಅವಕಾಶ ನಿಷೇಧಿಸಬೇಕು ಎಂದಿರುವ ಸಚಿವ ಪ್ರಿಯಾಂಕಾ ಖರ್ಗೆಯವರ ಹೇಳಿಕೆ ಅತ್ಯಂತ ಮಹತ್ವದ್ದು: ಶೇಖರ್ ಲಾಯಿಲ

2013 ರಲ್ಲಿ ಬಿಜೆಪಿ ಪಕ್ಷದ ಜಗದೀಶ್ ಶೆಟ್ಟರ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗಲೇ ಆದೇಶವಾಗಿದ್ದು ಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಚಟುವಟಿಕೆಗಳಿಗೆ ಅವಕಾಶ ನಿಷೇಧಿಸಬೇಕು ಎಂದಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕಾ ಖರ್ಗೆಯವರ ಹೇಳಿಕೆ ಅತ್ಯಂತ ಮಹತ್ವದ್ದಾಗಿದೆ. ಜಗತ್ತಿನಾದ್ಯಂತ ಎಲ್ಲಿಯೂ ಅಧಿಕೃತವಾಗಿ ನೋಂದಣಿಯಾಗದ ಸಂಘಟನೆಯ ಕಾರ್ಯಚಟುವಟಿಕೆಗಳನ್ನು ನಿಷೇಧಗೊಳಗಾಗಬೇಕಾದ ಅಗತ್ಯವಿದೆ. ಈಗಾಗಲೇ ಸರ್ಕಾರಿ ಸೇರಿದಂತೆ ಅನುದಾನಿತ ಶಾಲಾ ಕಾಲೇಜುಗಳ ಆವರಣಗಳನ್ನು ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮ ನಡೆಸಲು ಅವಕಾಶ ನಿರಾಕರಿಸಿ ಬಿಜೆಪಿ ಪಕ್ಷದ ಜಗದೀಶ್ ಶೆಟ್ಟರ್ ಅವರು […]

Continue Reading