ಸಿದ್ದರಾಮಯ್ಯರವರ ಪರಮಾಪ್ತ ಎಂದೇ ಗುರುತಿಸಿಕೊಂಡಿರುವ G.V ಸೀತಾರಾಮ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿತ್ಯ ನಿರಂತರವಾಗಿ ಪ್ರತಿನಿತ್ಯ ಒಂದಿಲ್ಲೊಂದು ಗೊಂದಲ, ಕುತೂಹಲಕಾರಿ ಬೆಳವಣಿಗೆಗಳು, ಬಣಗಳ ನಡುವಿನ ತಿಕ್ಕಾಟ ನಡೆಯುತ್ತಲೇ ಇದೆ. ಈ ಮಧ್ಯೆ ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆ ನಡೆದಿದೆ. ಇಂದು ಕಾಂಗ್ರೆಸ್ ನಾಯಕನೊಬ್ಬನ ಉಚ್ಛಾಟನೆಯಾಗಿದೆ. ಅದೂ ಸಿಎಂ ಸಿದ್ದರಾಮಯ್ಯ ಅವರ ಪರಮಾಪ್ತ ಎಂದೇ ಗುರುತಿಸಿಕೊಂಡಿರುವ G.V ಸೀತಾರಾಮ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇದು ಪಕ್ಷದೊಳಗಿನ ಶೀತಲ ಸಮಾರಾ ಇನ್ನಷ್ಟು ಹೆಚ್ಚಾಗುವ ಸೂಚನೆ ನೀಡಿದಂತಿದೆ. ಸಿದ್ದರಾಮಯ್ಯರ ಪರಮಾಪ್ತ […]

Continue Reading

ಸರಕು ಸಾಗಣೆ ವಾಹನ ಅಪಘಾತಕ್ಕೀಡಾಗಿ ಅದರಲ್ಲಿದ್ದ ಪ್ರಯಾಣಿಕ ಗಾಯಗೊಂಡರೆ, ಮೃತಪಟ್ಟರೆ ವಾಹನ ಮಾಲೀಕನೇ ಜವಾಬ್ದಾರಿ, ಆತನೇ ಪರಿಹಾರ ಪಾವತಿಸಬೇಕು: ಹೈಕೋರ್ಟ್ ಮಹತ್ವದ ಆದೇಶ

ಸರಕು ಸಾಗಣೆ ವಾಹನ ಅಪಘಾತಕ್ಕೀಡಾಗಿ ಅದರಲ್ಲಿದ್ದ ಪ್ರಯಾಣಿಕ ಗಂಭೀರ ಗಾಯಗೊಂಡರೆ ಅಥವಾ ಮೃತಪಟ್ಟ ವೇಳೆ ಆ ವಾಹನದ ಮಾಲೀಕರು ಸಂತ್ರಸ್ತರಿಗೆ ಪರಿಹಾರ ಪಾವತಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಅಲ್ಲದೇ, ಅಪಘಾತಕ್ಕೀಡಾದ ವಾಹನ ವಿಮೆ ಪಡೆದಿದ್ದ ವಿಮಾ ಕಂಪೆನಿಯನ್ನು ಹೊಣೆಗಾರನನ್ನಾಗಿ ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಸರಕು ಸಾಗಣೆ ವಾಹನ ಅಪಘಾತಕ್ಕೀಡಾಗಿ ಗಾಯಗೊಂಡವರಿಗೆ ಪರಿಹಾರ ನೀಡುವಂತೆ ಆದೇಶಿಸಿದ್ದ ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ (ಎಂಎಸಿಟಿ) ಆದೇಶ ಪ್ರಶ್ನಿಸಿ ಸರಕು ಸಾಗಣೆ ವಾಹನಕ್ಕೆ ವಿಮೆ ನೀಡಿದ್ದ ‘ದಿ ನ್ಯಾಷನಲ್ ಇನ್ಸೂರೆನ್ಸ್ ಕಂಪೆನಿ’ […]

Continue Reading

ಎರಡು-ಮೂರು ತಿಂಗಳೊಳಗೆ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಇನ್ನು ಎರಡು ತಿಂಗಳಲ್ಲಿ ನೋಟಿಫಿಕೇಶನ್ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಮೀಸಲಾತಿ ಪ್ರಕ್ರಿಯೆ ನಡೆಯುತ್ತಿದ್ದು, ಎರಡು-ಮೂರು ತಿಂಗಳಲ್ಲಿ ಚುನಾವಣೆಗೆ ನೋಟಿಫಿಕೇಶನ್ ಹೊರಡಿಸಲಾಗುವುದು. ಬಿಜೆಪಿ ಅಧಿಕಾರದಲ್ಲಿದ್ದಾಗ ಜಿ.ಪಂ. ಮತ್ತು ತಾ.ಪಂ. ಚುನಾವಣೆಯನ್ನು ಮುಂದೂಡುತ್ತಲೆ ಬಂದಿದೆ. ಆದರೆ, ಈ ಬಾರಿ ನಾವು ಚುನಾವಣೆ ನಡೆಸುವುದು ಖಚಿತ ಎಂದರು. ಇತ್ತೀಚೆಗೆ ಮಾನ್ಯ ಕರ್ನಾಟಕ ಹೈಕೋರ್ಟ್ ಈ ಬಗ್ಗೆ ಎಚ್ಚರಿಕೆಯನ್ನು […]

Continue Reading

ವಕ್ಫ್ ಆಸ್ತಿ ಬಚಾವ್ ಮಾಡಿದ ಜಿ. ಎ. ಬಾವಾ, ದೇಶಕ್ಕೆ ಇದು ಮಾದರಿ ಪದ್ಧತಿ: ಬಾಬಾ ನಝರ್ ಮೊಹಮ್ಮದ್ ಖಾನ್

ಸಮುದಾಯದ ‘ಚೇಂಜ್ ಮೇಕರ್’ ಜಿ.ಎ ಬಾವ.! ಭಾರತದಲ್ಲಿ ಹಲವಾರು ಸಂಘ ಸಂಸ್ಥೆಗಳು ಸಮಾಜದ ವಿವಿಧ ಕ್ಷೇತ್ರದಲ್ಲಿ ದುಡಿಯುತ್ತಿದೆ. ಕೆಲವೊಂದು ಸಂಸ್ಥೆಗಳ ಯೋಜನೆಗಳು ಅತ್ಯುತ್ತಮ ಫಲಿತಾಂಶ ತರುತ್ತಿದೆ. ಇಂತಹ ಯೋಜಗಳ ಮಾದರಿಗಳನ್ನು ಪರಿಚಯಿಸುವ ಹಾಗೂ ಪರಸ್ಪರ ಸಹಯೋಗದಲ್ಲಿ ಮಾಡುವ ಅವಕಾಶಕ್ಕಾಗಿ ಬೀದರ್ ಶಾಹೀನ್ ಕಾಲೇಜಿನಲ್ಲಿ ಎರಡು ದಿನಗಳ ಕಾಲದ ಸಂಘ ಸಂಸ್ಥೆಗಳ ಸಮಾಲೋಚನಾ ಸಭೆ ನಡೆಯಿತು. ದೇಶದ ವಿವಿಧ ಭಾಗದಿಂದ ಆಗಮಿಸಿದ ಎನ್.ಜಿ. ಒ ಗಳು ತಮ್ಮ ಯೋಜನೆಗಳನ್ನು ಪರಿಚಯ ಮಾಡಿದರು. ಚೇಂಜ್ ಮೇಕರ್ ಎಂಬ ಈ ಕಾರ್ಯಕ್ರಮದಲ್ಲಿ […]

Continue Reading

ರಾಜ್ಯ ಸರಕಾರದ ಮಹತ್ತದ ಸೂಚನೆ. ಸರಕಾರದಿಂದಲೇ ವಾರಿಸುದಾರರ ಹೆಸರಿಗೆ ಪೌತಿ ಖಾತೆ: ಕಂದಾಯ ಸಚಿವರು

ಪೌತಿ ಖಾತೆ ಅಭಿಯಾನದ ಮೂಲಕ ಡಿಸೆಂಬರ್ ಒಳಗೆ ವಾರಸುದಾರರ ಹೆಸರಿಗೆ ಬದಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ರಾಜ್ಯದಲ್ಲಿ ಸುಮಾರು 52 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿ ಮುಂದುವರೆಯುತ್ತಿದ್ದು, ವಾರಸುದಾರರ ನಡುವೆ ತಕರಾರು ಇಲ್ಲದ ಎಲ್ಲಾ ಜಮೀನುಗಳನ್ನು ಪೌತಿ ಖಾತೆ ಅಭಿಯಾನದ ಮೂಲಕ ಡಿಸೆಂಬರ್ ಒಳಗೆ ವಾರಸುದಾರರ ಹೆಸರಿಗೆ ಬದಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಕಾಸಸೌಧರಲ್ಲಿ ಸೋಮವಾರ ಜಿಲ್ಲಾಧಿಕಾರಿಗಳೊಂದಿಗೆ ಮಾಸಿಕ ಪ್ರಗತಿ ಪರಿಶೀನಾ ಸಭೆ ನಡೆಸಿ ಹೇಳಿದರು. ಮೃತರ ಹೆಸರಿನಲ್ಲಿರುವ ಜಮೀನುಗಳಿಗೆ ಹನಿ ನೀರಾವರಿ, […]

Continue Reading

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಕೃಷ್ಣವೇಣಿ ಅಮಾನತು ಆದೇಶ ರದ್ದುಗೊಳಿಸಿದ ಹೈಕೋರ್ಟ್

ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಕೃಷ್ಣವೇಣಿ ಅವರ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮನೆ ಕಟ್ಟುವ ಸಂಬಂಧ ದೃಢೀಕರಣ ನೀಡಲು ಲಂಚ ಪಡೆದಿದ್ದರು ಎಂದು ಆರೋಪಿಸಿ ಲೋಕಾಯುಕ್ತ ಅಧಿಕಾರಿಗಳೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಕೃಷ್ಣವೇಣಿ ಅವರನ್ನು ಮೇ 28 ರಂದು ಬಂಧಿಸಿದ್ದರು. ಇದರ ವಿರುದ್ಧ ಹೈಕೋರ್ಟ್ ಗೆ ಸೂಕ್ತ ದಾಖಲೆಗಳೊಂದಿಗೆ ಕೃಷ್ಣವೇಣಿ ರಿಟ್ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿದ […]

Continue Reading

ಇದು ಡಿಕೆಶಿ ಕ್ಯಾಂಪಿನ ಲೇಟೆಸ್ಟು ಚಿಂತೆ; ವರಿಷ್ಟರು ಯೆಸ್ ಅನ್ನುತ್ತಾರಾ?

ಬಿಜೆಪಿ ಭಿನ್ನರಿಗೆ ತಲೆನೋವು; ಜೋಡೆತ್ತುಗಳ ಬೆಂಬಲ ಬೇಕು ✍️. ಆರ್.ಟಿ.ವಿಠ್ಠಲಮೂರ್ತಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕ್ಯಾಂಪಿನಲ್ಲಿ ಅನುಮಾನ ಶುರುವಾಗಿದೆ.ಸಿಎಂ ಸಿದ್ದರಾಮಯ್ಯ ಅವರ ಜಾಗಕ್ಕೆ ಬರಲು ಡಿಕೆಶಿ ಕಸರತ್ತು ನಡೆಸುತ್ತಿದ್ದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾವೇ ಸಿಎಂ ಆಗಲು ಸಜ್ಜಾಗಿದ್ದಾರಾ ಎಂಬುದು ಈ ಅನುಮಾನ.ಪರಿಣಾಮ?ಸಿದ್ದರಾಮಯ್ಯ ಅವರ ಜಾಗಕ್ಕೆ ಬರಲು ಇದುವರೆಗೆ ಖರ್ಗೆಯವರ ನೆರವು ನಿರೀಕ್ಷಿಸುತ್ತಿದ್ದ ಡಿ.ಕೆ.ಶಿವಕುಮಾರ್ ಇನ್ನು ಮುಂದೆ ಪ್ರಿಯಾಂಕಾಗಾಂಧಿ ಅವರನ್ನಷ್ಟೇ ನೆಚ್ಚಿಕೊಳ್ಳುವುದು ಅನಿವಾರ್ಯ ಎಂಬುದು ಈ ಕ್ಯಾಂಪಿನ ಯೋಚನೆ.ಅಂದ ಹಾಗೆ ಡಿಕೆಶಿ ಕ್ಯಾಂಪಿಗೆ ಇಂತಹ ಅನುಮಾನ […]

Continue Reading

ಮೊಬೈಲ್ ಬಳಸದೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಕವಿರಾಜ್ ಅರೆಸ್ಟ್

10 ದಿನಗಳ ರಹಸ್ಯ ಕಾರ್ಯಾಚರಣೆಯಲ್ಲಿ ಭೂಗತ ಪಾತಕಿ ರವಿಪೂಜಾರಿ ಸಹಚರ ಖಾಕಿ ಬಲೆಗೆ ಬಿದ್ದಿದ್ದೇ ರೋಚಕ.! ಬಿಲ್ಡರ್ ವೊಬ್ಬರ ಹತ್ಯೆ, ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಸೇರಿದಂತೆ ದೇಶಾದಾದ್ಯಂತ ಹದಿನಾಲ್ಕು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಕವಿರಾಜ್ ಕೋಲಾರ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ (ಸೆನ್) ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಉತ್ತರಾಖಂಡ ಮೂಲದ ಕವಿರಾಜ್ ಭೂಗತ ಪಾತಕಿ ರವಿ ಪೂಜಾರಿ ಸಹಚರನಾಗಿ ಗುರುತಿಸಿಕೊಂಡಿದ್ದ. […]

Continue Reading

ಸಾರಿಗೆ ನೌಕರರ ಬೇಡಿಕೆ ಈಡೇರಿಸುವ ಹೋರಾಟಕ್ಕೆ ಕೊನೆಗೂ ಮಂಡಿಯೂರಿದ ರಾಜ್ಯ ಸರಕಾರ

ಸಾರಿಗೆ ನೌಕರರ ಬೇಡಿಕೆ ಈಡೇರಿಸುವ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಂಡಿಯೂರಿದೆ. ಬಾಕಿ ವೇತನ ಪಾವತಿ, ವೇತನ ಪರಿಷ್ಕರಣೆ, ರಜೆಯ ಹಕ್ಕು ಸೇರಿ, ಹಲವು ಬೇಡಿಕೆಗಳ ಈಡೇರಿಕೆಗೆ, ನೌಕರರು ಬಿಗಿ ಪಟ್ಟು ಹಿಡಿದಿದ್ದಾರೆ. ನೌಕರರ ಸಂಘ ಹಲವು ಬಾರಿ ಸಿಎಂ, ಸಾರಿಗೆ ಸಚಿವರ ಭೇಟಿಗೆ ಪ್ರಯತ್ನಿಸಿದ್ದರೂ ಯಾವುದೇ ಜಯ ಸಿಕ್ಕಿಲ್ಲ. ಮೊದಲ ಸಭೆಯಲ್ಲಿ ನೌಕರರ ಬೇಡಿಕೆಗಳ ಬಗ್ಗೆ ಪರಿಶೀಲಿಸೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಬಳಿಕ ಅದೂ ಈಡೇರಿಲ್ಲ. ಬಾಕಿ ವೇತನ ನೀಡೋಕೆ ಸಾಧ್ಯವಿಲ್ಲ. 2028ರವರೆಗೆ ವೇತನ ಪರಿಷ್ಕರಣೆ […]

Continue Reading

ಮಣ್ಣಿನ ಮೊಮ್ಮಗನಿಗೆ ಜೀವಾವಧಿ.! ನೂರಾರು ಹೆಣ್ಣುಮಕ್ಕಳ ಮೈ ಹುರಿದು ಮುಕ್ಕಿದ ಪ್ರಜ್ವಲ್ ಜ್ವಾಲೆ ಕರಟಿತು..!

ಹಣ ಮತ್ತು ಅಧಿಕಾರದ ದರ್ಪದಿಂದ ಅಮಾಯಕ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಸುವ ಪ್ರತಿಷ್ಠಿತರಿಗೆ ಇದು ಪಾಠವಾಗಬೇಕು ಕಾಮಾತುರಣಂನ ಲಜ್ಜ ನ ಭಯಂ! ಎಂಬಂತೆ ಸೀತೆಯ ಸಾಂಗತ್ಯ ಬಯಸಿದ ರಾವಣ ದುರಂತ ಅಂತ್ಯ ಕಂಡ. ದ್ರೌಪದಿಯ ಮೋಹಕ್ಕೆ ಸಿಲುಕಿದ ದುರ್ಯೋಧನ ಸರ್ವನಾಶವಾದ. ಪಾಂಚಾಲಿಯ ಮುಡಿಗೆ ಕೈ ಹಾಕಿದ, ಸೀರೆಯ ಸೆಳೆದ ದುಶ್ಯಾಸನ ಸೇರಿದಂತೆ ಇಡೀ ಕುರುವಂಶವೇ ನಾಶವಾಯಿತು. ಇತಿಹಾಸಕ್ಕೆ ಬಂದರೆ ರಾಜಾಧಿರಾಜರುಗಳೇ ಹೆಣ್ಣಿನ ಚಪಲಕ್ಕೆ ಅಂಟಿಕೊಂಡಿದ್ದರಿಂದ ಕೋಟೆ -ಕೊತ್ತಲಗಳೇ ಉರುಳಿ ಹೋಗಿವೆ. ಇಷ್ಟೆಲ್ಲಾ ನಿದರ್ಶನಗಳಿರುವಾಗ ಹುಲುಮಾನವರು ಲೋಲುಪ್ತತೆಯ […]

Continue Reading