ಸುರ್ಜೇವಾಲಾ ವಿರುದ್ಧ ಶುರುವಾಗಲಿದೆ ದಂಗೆ.?; ಸಂಪುಟಕ್ಜೆ ಖಾದರ್, ಸ್ಪೀಕರ್ ಸ್ಥಾನಕ್ಕೆ ದಿನೇಶ್.?

ಕಡಲ ತೀರಕ್ಕೆ ಅರೆಸ್ಸೆಸ್ ಲಗ್ಗೆ; ಆಪರೇಷನ್ 2028 ಗೆ ಸಿದ್ದತೆ ✍️. ಅರ್.ಟಿ. ವಿಠ್ಠಲಮೂರ್ತಿ ಮೊನ್ನೆ ದಾವಣಗೆರೆ ಮತ್ತು ಬಾಗಲಕೋಟೆಯ ಉಪಚುನಾವಣೆಗೆ ಅಂತ ಹೋಗಿದ್ದ ಕಾಂಗ್ರೆಸ್ ಪಕ್ಷದ ಕೆಲ ನಾಯಕರು ಹೊಸ ಹೋರಾಟವೊಂದಕ್ಕೆ ಸ್ಕೆಚ್ ಹಾಕಿದ್ದಾರೆ. ರಾಜ್ಯ ಕಾಂಗ್ರೆಸ್ ನ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಎತ್ತಂಗಡಿ ಮಾಡಿಸುವುದು ಈ ಹೋರಾಟದ ಮೂಲ ಉದ್ದೇಶ.ಅಂದ ಹಾಗೆ ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಪಕ್ಷದ ಉಸ್ತುವಾರಿ ವಹಿಸಿಕೊಂಡ ನಂತರ ರಾಜ್ಯದಲ್ಲಿ ಕೈ ಪಾಳಯ ಗುಂಪುಗಾರಿಕೆಯಿಂದ ತತ್ತರಿಸುತ್ತಿದೆ. ಎಲ್ಲಕ್ಕಿಂತ […]

Continue Reading

ಅಕ್ರಮ ಜಾನುವಾರು ಸಾಗಾಟ ಪತ್ತೆ: 20 ಜಾನುವಾರುಗಳ ರಕ್ಷಣೆ ಹಾಗೂ ಮೂವರ ವಿರುದ್ಧ ಪ್ರಕರಣ ದಾಖಲು.

ದಿನಾಂಕ:03.04.2026 ರಂದು ಮುಂಜಾನೆ, ಪೆರಿಯಶಾಂತಿ ಕಡೆಯಿಂದ ಮರ್ಧಾಳ ಕಡೆಗೆ ಒಂದು ಕಂಟೈನರ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರು ತುಂಬಿಸಿಕೊಂಡು ಸಾಗಾಟ ಮಾಡುತ್ತಿರುವುದಾಗಿ ಜಂಬುರಾಜ್ ಮಹಾಜನ್ ಪೊಲೀಸ್ ಉಪನಿರೀಕ್ಷಕರು ಕಡಬ ಪೊಲೀಸ್ ಠಾಣೆರವರಿಗೆ ಮಾಹಿತಿ ಬಂದ ಮೇರೆಗೆ, ಸಿಬ್ಬಂದಿಗಳೊಂದಿಗೆ ನೂಜಿಬಾಳ್ತಿಲ ಗ್ರಾಮದ ಕನ್ವರೆ ಎಂಬಲ್ಲಿ KA-11 B-9413 ನೇ ನೋಂದಣಿಯ ಕಂಟೇನರ್ ಲಾರಿಯನ್ನು ಪರಿಶೀಲಿಸಿದಾಗ ಲಾರಿಯಲ್ಲಿ 20 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಕಂಡುಬಂದಿರುತ್ತದೆ. ಲಾರಿಯಲ್ಲಿದ್ದಾತನಲ್ಲಿ ವಿಚಾರಿಸಲಾಗಿ ಹಾಸನ ಬೇಲೂರು ನಿವಾಸಿ ಇರ್ಫಾನ್ (26) ಎಂಬುದಾಗಿ ತಿಳಿಸಿರುತ್ತಾನೆ . ಸದ್ರಿ ಜಾನುವಾರುಗಳನ್ನು […]

Continue Reading

‘ಸಿಟಿ ಹೈಲೈಟ್ಸ್’ ಪತ್ರಿಕೆಯ ಮುಖ್ಯಸ್ಥ ಎಂ.ಪಿ ಅರುಣ್ ಕುಮಾರ್ ರವರಿಗೆ KUJW 2024 ನೇ ಸಾಲಿನ ಗಣೇಶ್ ಜಿ. ದತ್ತಿ ಪ್ರಶಸ್ತಿ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUJW) ದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಬೀದರ್ ನಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಿಟಿ ಹೈಲೈಟ್ಸ್ ಇಂಗ್ಲಿಷ್ ಪತ್ರಿಕೆಯ ಶಿವಮೊಗ್ಗ ಮುಖ್ಯಸ್ಥ (ಬ್ಯೂರೋ ಛೀಪ್), ಪತ್ರಿಕೋದ್ಯಮದಲ್ಲಿ ವೃತ್ತಿ ನೈಫುಣ್ಯತೆ ಮತ್ತು ವೃತ್ತಿಪರತೆಯನ್ನು ಕಾಯ್ದುಕೊಂಡಿರುವ ಅರುಣ್ ಕುಮಾರ್ […]

Continue Reading

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಡಾಕ್ಟ್ರು ಬರುತ್ತಾರೆ; ಒಂಭತ್ತಕ್ಕೆ ಡಿಕೆಶಿ ದಿಲ್ಲಿಗೆ.?, ಶಾಮನೂರು ಕೋಟೆ ಸೇಫ್ ಆಗಲಿದೆ.?

ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಟಿಫಿಕೇಟು ✍️. ಅರ್.ಟಿ.ವಿಠ್ಟಲಮೂರ್ತಿ ಇತ್ತೀಚೆಗೆ ಹಿರಿಯ ಲಿಂಗಾಯತ ನಾಯಕ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರ ಜತೆ ಸಿಎಂ ಸಿದ್ದರಾಮಯ್ಯ ಚರ್ಚಿಸಿದ್ದಾರೆ. ಈ ಚರ್ಚೆಯ ಸಂದರ್ಭದಲ್ಲಿ: ‘ಡಾಕ್ಟ್ರೇ, ನೀವು ಕೆಪಿಸಿಸಿ ಅಧ್ಯಕ್ಷರಾಗಲು ರೆಡಿಯಾಗಿ’ ಎಂದಿದ್ದಾರೆ. ಸಿದ್ದರಾಮಯ್ಯ ಅವರು ಈ ಮಾತು ಹೇಳಿದಾಗ ಪ್ರತಿಕ್ರಿಯಿಸಿದ ಶರಣ ಪ್ರಕಾಶ್ ಪಾಟೀಲ್ ಅವರು: ‘ಸಾರ್ ನಾನು ಮಂತ್ರಿಯಾಗಿದ್ದುಕೊಂಡೇ ಕೆಪಿಸಿಸಿ ಅಧ್ಯಕ್ಷನಾಗಲು ತಯಾರಿದ್ದೇನೆ’ ಎಂದಾಗ: ಹಾಗೇ ಆಗಲಿ ಡಾಕ್ಟ್ರೇ ಅದಕ್ಕೇನು? ‘ಅಂತ […]

Continue Reading

ಆಪರೇಷನ್ ಟ್ವೆಂಟಿಗೆ ಸಿದ್ದು ರೆಡಿ; ಕೆ.ಸಿ. ವೇಣುಗೋಪಾಲ್ ಅವರ 3:2 ಸೂತ್ರ. ಜಮೀರಣ್ಣಾಕೀ ಪೊಲಿಟಿಕ್ಸ್

✍️. ಅರ್.ಟಿ.ವಿಠ್ಠಲಮೂರ್ತಿ ಕಳೆದ ಬುಧವಾರ ವಿಧಾನಸಭೆಯ‌ ಮೊಗಸಾಲೆಯಲ್ಲಿ ಕುಳಿತಿದ್ದ ಡಿಸಿಎಂ ಡಿಕೆಶಿ ಕ್ಯಾಂಪಿನ ಹಿರಿಯ ನಾಯಕರೊಬ್ಬರು ತಮ್ಮ ಆಪ್ತರ ಬಳಿ ಮೆಲ್ಲಗೆ ಮಾತನಾಡುತ್ತಿದ್ದರು. ಅವರ ಪ್ರಕಾರ: ‘ಏಪ್ರಿಲ್ ಮೊದಲ ವಾರ ದಿಲ್ಲಿಯಲ್ಲಿ ನಿರ್ಣಾಯಕ ಸಭೆ ನಡೆಯಲಿದೆ.’ ಅರ್ಥಾತ್, ಬಜೆಟ್ ಅಧಿವೇಶನದ ನಂತರ ದಿಲ್ಲಿಗೆ ಧಾವಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಹತ್ವದ ವಿಷಯವೊಂದನ್ನು ಪ್ರಸ್ತಾಪಿಸಲಿದ್ದಾರೆ. ಅಂದ ಹಾಗೆ ಕೆ.ಸಿ. ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರ ಪರವಾಗಿಯೇ ನಿಂತವರು ಮತ್ತು […]

Continue Reading

543 ಲೋಕಸಭಾ ಸ್ಥಾನಗಳನ್ನು ಬರೋಬ್ಬರಿ 816ಕ್ಕೆ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ; ಕರ್ನಾಟಕದ ಹಾಲಿ ಸಂಸದರ ಸಂಖ್ಯೆ 28 ರಿಂದ 42ಕ್ಕೆ ಏರಿಕೆ

ಕೇಂದ್ರ ಸರ್ಕಾರ ಮುಂದಿನ ಲೋಕಸಭಾ ಚುನಾವಣೆ ವೇಳೆಗೆ ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳನ್ನು ಬರೋಬ್ಬರಿ 816ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. 2011ರ ಜನಗಣತಿ ಆಧರಿಸಿ ಕ್ಷೇತ್ರಗಳ ಮರ ವಿಂಗಡಣೆ ಪ್ರಕ್ರಿಯೆ ನಡೆದಲ್ಲಿ ಕರ್ನಾಟಕದ ಹಾಲಿ ಸಂಸದರ ಸಂಖ್ಯೆ 28ರಿಂದ 42ಕ್ಕೆ ಏರಿಕೆಯಾಗಲಿದೆ. ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ತಿದ್ದುಪಡಿ ಕೂಡ ಈ ವಿಧೇಯಕದ ಭಾಗವಾಗಲಿದೆ. 2029ರ ಚುನಾವಣೆಗೆ ಮೊದಲು ಕ್ಷೇತ್ರ ಪುನರ್ ವಿಂಗಡಣೆ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಎಲ್ಲಾ ಪಕ್ಷಗಳ […]

Continue Reading

ಸದ್ಯಕ್ಕಿಲ್ಲ ಗ್ರಾಮ ಪಂಚಾಯತ್ ಚುವಾವಣೆ; ಮೂರು ತಿಂಗಳು ಕಾಲಾವಕಾಶ ಬೇಕು ಎಂದ ರಾಜ್ಯ ಸರ್ಕಾರ

ಗ್ರಾಮ ಪಂಚಾಯತ್ ಚುವಾವಣೆ ಇದೀಗ ಮತ್ತಷ್ಟು ಮುಂದಕ್ಕೆ ಹೋಗುವ ಲಕ್ಷಣಗಳು ದಟ್ಟವಾಗಿದೆ. ರಾಜ್ಯದ 5,950 ಗ್ರಾಮ ಪಂಚಾಯಿತ್ ಗಳ ಚುನಾವಣೆಗೆ ಮೀಸಲು ಪಟ್ಟಿ ಅಂತಿಮಗೊಳಿಸಲು ಕನಿಷ್ಠ ಮೂರು ತಿಂಗಳು ಕಾಲಾವಕಾಶ ಬೇಕೆಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮೌಖಿಕವಾಗಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚುನಾವಣೆ ನಡೆಯುವುದು ಅನುಮಾನ ಎಂದು ಹೇಳಲಾಗಿದೆ. ನ್ಯಾಯಾಲಯವು ಸರ್ಕಾರದ ವಸ್ತುಸ್ಥಿತಿ ವರದಿಯನ್ನು ದಾಖಲಿಸಿಕೊಂಡು ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ. ರಾಜ್ಯದಲ್ಲಿ 5,950 ಗ್ರಾಮ ಪಂಚಾಯ್ತಿಗಳಲ್ಲಿ ಸದ್ಯ 96 ಸಾವಿರಕ್ಕೂ ಅಧಿಕ ಸಂಖ್ಯೆಯ ಸದಸ್ಯರಿದ್ದು, […]

Continue Reading

ಹಿರಿಯ ಕಲಾವಿದ ಲಿಯಾಕತ್ ಆಲಿ ನಿಧನ; ಕ.ಸಾ.ಪ ವತಿಯಿಂದ ಶ್ರದ್ಧಾಂಜಲಿ ಸಭೆ.

ಮಡಿಕೇರಿಯ ಹಿಲ್ ರೋಡ್ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ (69) ಇಂದು ಬೆಳಗಿನ ಜಾವ 3 ಗಂಟೆಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರ ನಿಧನದಿಂದ ಜಿಲ್ಲೆಯ ಸಾಹಿತ್ಯ ವಲಯಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು ಅವರ ಆತ್ಮಕ್ಕೆ ಶ್ರದ್ಧಾಂಜಲಿ ಕೋರಿ ಇಂದು (15.03.2026) ಮಡಿಕೇರಿಯ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ಮಧ್ಯಾಹ್ನ ಸಭೆ ನಡೆಯಿತು. ಕೊಡಗಿನ ಹಿರಿಯ ಕಲಾವಿದರಾದ ಇವರು ಉತ್ತಮ ಗಾಯಕರಾಗಿದ್ದರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿಯ ವಿಶೇಷ ಅಹ್ವಾನಿತ […]

Continue Reading

ಪಕ್ಷದ ನಿಷ್ಠಾವಂತ ನಾಯಕರನ್ನು ರಾಜ್ಯಸಭೆಗೆ ಕಳುಹಿಸಲು ರಾಜ್ಯ ಬಿಜೆಪಿ ನಾಯಕರ ಚಿಂತನೆ.

ಮೋದಿ – ಅಮಿತ್ ಷಾ ಮಟ್ಟದಲ್ಲಿ ಗೌಡರ ಆಯ್ಕೆಯ ಬಗ್ಗೆ ಬೇರೆಯದೇ ಲೆಕ್ಕಾಚಾರ ಮಾಜಿ ಪ್ರಧಾನಿ ದೇವೇಗೌಡರನ್ನು ಮತ್ತೊಂದು ಅವಧಿಗೆ ರಾಜ್ಯಸಭೆಗೆ ಆಯ್ಕೆ ಮಾಡುವ ಕುರಿತು ದೆಹಲಿಯ ಬಿಜೆಪಿ ವರಿಷ್ಠರ ಮಟ್ಟದಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ. ಆದರೆ, ಈ ಪ್ರಸ್ತಾವನೆಗೆ ರಾಜ್ಯ ಬಿಜೆಪಿ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದು, ಮೈತ್ರಿ ಪಕ್ಷದ ನಾಯಕರಿಗಿಂತ ಸ್ವಂತ ಪಕ್ಷದ ನಾಯಕರಿಗೇ ಈ ಸ್ಥಾನವನ್ನು ಬಿಟ್ಟುಕೊಡುವುದು ಸೂಕ್ತ ಎಂಬ […]

Continue Reading

ದಾವಣಗೆರೆ ಬಗ್ಗೆ ಇರುವ ಕಾಳಜಿ, ಬಂಟ್ವಾಳಕ್ಕೆ ಯಾಕಿಲ್ಲ.? ಅಲ್ಪಸಂಖ್ಯಾತರಿಂದ ಶಾಹುಲ್ ಹಮೀದ್ ವಿರುದ್ಧ ಆಕ್ರೋಶ

ದಾವಣಗೆರೆ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಅವಕಾಶ ನೀಡಬೇಕೆಂದು ಒತ್ತಡ ಹಾಕುತ್ತಿರುವ Shahul Hameed ಅವರು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತರ ಬಗ್ಗೆ ಮೌನ ವಹಿಸಿರುವುದು ಇಲ್ಲಿ ಪ್ರಶ್ನಾರ್ಥಕವಾಗಿದೆ ಎಂದು ಸ್ಥಳೀಯ ಅಲ್ಪಸಂಖ್ಯಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಜಿಲ್ಲೆಯಲ್ಲೇ Ullal ಕ್ಷೇತ್ರವನ್ನು ಬಿಟ್ಟರೆ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕ್ಷೇತ್ರವೆಂದರೆ Bantwal ಎಂಬುದು ಎಲ್ಲರಿಗೂ ತಿಳಿದ ವಿಚಾರವಾಗಿದೆ.ಇಂತಹ ಸಂದರ್ಭದಲ್ಲಿ ಬಂಟ್ವಾಳದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವ ಬಗ್ಗೆ ಯಾವುದೇ ಸ್ಪಷ್ಟವಾದ ಹೇಳಿಕೆ […]

Continue Reading