ಸಿವಿಲ್ ಗುತ್ತಿಗೆದಾರರೊಬ್ಬರ ಹನಿಟ್ರ್ಯಾಪ್ ಪ್ರಕರಣ; ಮೂವರು ಆರೋಪಿಗಳ ಬಂಧನ

ಚಿನ್ನದ ಚೈನ್, ಉಂಗುರ ಕಸಿದು, 27 ಸಾವಿರ ನಗದು, 8 ಸಾವಿರ ಗೂಗಲ್ ಪೇ ಮಾಡಿಸಿಕೊಂಡ ಆರೋಪಿಗಳು ಗುತ್ತಿಗೆದಾರರೊಬ್ಬರಿಗೆ ಹನಿಟ್ರ್ಯಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಂತೋಷ್, ಅಜಯ್ ಹಾಗೂ ಜಯರಾಜ್ ಎಂದು ಗುರುತಿಸಲಾಗಿದೆ. ಸಿವಿಲ್ ಗುತ್ತಿಗೆದಾರರೊಬ್ಬರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ನಯನಾ ಎಂಬಾಕೆ ಸೇರಿ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದು ಅವರಿಗಾಗಿ ಶೋಧ ನಡೆಸಲಾಗಿದೆ. ದೂರುದಾರ ಸಿವಿಲ್ ಕಂಟ್ರಾಕ್ಟರ್‌ಗೆ ಐದಾರು ತಿಂಗಳುಗಳ ಹಿಂದಷ್ಟೇ ಪರಿಚಯವಾಗಿದ್ದ ನಯನಾ […]

Continue Reading

ಸ್ಟೆಂಟ್ ಅಳವಡಿಸಿ ಮೋಸ ಹೋಗುವ ಮೊದಲು ಯೋಚಿಸಿ.!

ಹೃದಯದಲ್ಲಿ ಸಂಭವಿಸಿದ ಬ್ಲಾಕ್(ತಡೆ)ಗಳನ್ನು ಸರಿಪಡಿಸಲು ವೈದ್ಯರುಗಳು ಸ್ಟಂಟ್‌ಗಳನ್ನು ಉಪಯೋಗಿಸಿ ಹೃದಯ ಸಂಬಂಧವಾದ ಬ್ಲಾಕ್‌ಗಳಿದ್ದರೆ ಅದನ್ನು ಸರಿಪಡಿಸುತ್ತಾರೆ. ಆದರೆ ಇದಕ್ಕೆ ಉಪಯೋಗಿಸುವ ಸ್ಟಂಟ್‌ಗೆ ಸರಿಸುಮಾರು ರೂ.7,000 ಸಾವಿರದಿಂದ 35 ಸಾವಿರ ರೂಪಾಯಿವರೆಗೆ ಬೆಲೆಬಾಳುವ ಸ್ಟಂಟ್ ಇರುತ್ತದೆ. ತಮ್ಮ ತಮ್ಮ ಅನುಕೂಲಕ್ಕೆ ತಕ್ಕಂತೆ ಹೃದಯ ಸಂಬಂಧಿ ರೋಗಿಗಳು ಇದನ್ನು ಅಳವಡಿಸಿಕೊಳ್ಳುತ್ತಾರೆ. ಯಾವ ಕಂಪೆನಿಯಿಂದ ಯಾವ ಸ್ಟೆಂಟ್‌ನ್ನು ಡಾಕ್ಟರ್ ಅಳವಡಿಸುತ್ತಾರೆ ಎಂದು ಯಾರೂ ಈ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಮಾತ್ರವಲ್ಲದೆ ವೈದ್ಯಾಧಿಕಾರಿಗಳು, ಸಂಬಂಧಪಟ್ಟ ಆಸ್ಪತ್ರೆಯವರು ಇದರ ಬಗ್ಗೆ ರೋಗಿಗಳ ಗಮನಕ್ಕೂ ತರುವುದಿಲ್ಲ. […]

Continue Reading

ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಯೊಬ್ಬರ ಹೆಸರಲ್ಲಿ ಲಂಚಕ್ಕೆ ಬೇಡಿಕೆ ಆರೋಪ; ಮಹಿಳಾ ನ್ಯಾಯವಾದಿಯ ವಿರುದ್ದ ಪ್ರಕರಣ ದಾಖಲು

ಅಪರಾಧ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು ಮಾಡುವ ಸಂಬಂಧ ಹೈಕೋರ್ಟ್‌ ನ್ಯಾಯಮೂರ್ತಿಯೊಬ್ಬರ ಹೆಸರನ್ನು ದುರ್ಬಳಕೆ ಮಾಡಿಕೊಂಡ ಆರೋಪ ಕುರಿತು ಮಹಿಳಾ ವಕೀಲರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಹೈಕೋರ್ಟ್‌ನ ಕಾನೂನು ವಿಭಾಗದ ಜಂಟಿ ರಿಜಿಸ್ಟ್ರಾರ್‌ ಎಂ. ರಾಜೇಶ್ವರಿ ನೀಡಿದ ದೂರಿನ ಮೇರೆಗೆ ಹೈಕೋರ್ಟ್‌ ವಕೀಲೆ ದಯೀನಾಬಾನು ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) 318 (4) ವಂಚನೆಯಡಿ ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತನಾಗಿದ್ದ 24 ವರ್ಷದ ವಿಷ್ಣುದೇವನ್‌ಗೆ ಜಾಮೀನು ಸಿಗದೆ 3 ವರ್ಷಗಳಿಂದ ಜೈಲಿನಲ್ಲಿದ್ದ ಮಗನನ್ನು ಜಾಮೀನಿನ […]

Continue Reading

ಸಿ.ಟಿ. ರವಿ ಬಂಧನ ಹೈಡ್ರಾಮಾ ಪ್ರಕರಣ; ಖಾನಾಪುರ ಠಾಣೆಯೊಳಗೆ ಬಿಜೆಪಿ ನಾಯಕರಿಗೆ ಸಭೆ ನಡೆಸಲು ಅವಕಾಶ ಮಾಡಿಕೊಟ್ಟ ಇನ್ಸ್ ಪೆಕ್ಟರ್ ಅಮಾನತು

ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರಿಗೆ ಅಶ್ಲೀಲ ಪದ ಬಳಕೆ ಮಾಡಿದ ಕಾರಣಕ್ಕಾಗಿ ಬಂಧನಕ್ಕೊಳಪಡಿಸಲಾಗಿತ್ತು. ಇದು ರಾಜ್ಯ ರಾಜಕಾರಣದಲ್ಲಿ ಹೈಡ್ರಾಮಾ ಕ್ಕೆ ಕಾರಣವಾಗಿತ್ತು. ಸಿ ಟಿ ರವಿ ಅವರನ್ನು ಬಂಧಿಸಿ ಖಾನಾಪುರ ಠಾಣೆಗೆ ಕರೆತಂದ ಇನ್ಸ್ ಪೆಕ್ಟರ್ ಮಂಜುನಾಥ ನಾಯ್ಕ ಕರ್ತವ್ಯ ಲೋಪ, ಬೇಜಬ್ದಾರಿತನ ಪ್ರದರ್ಶನ ಆರೋಪ ಹಾಗೂ ಅಪಾಧಿತರನ್ನು ಹೊರತುಪಡಿಸಿ ಠಾಣೆಯೊಳಗೆ ಯಾರನ್ನೂ ಬಿಡದಂತೆ ಆದೇಶ ನೀಡಿದ್ದರೂ ನಿರ್ಲಕ್ಷ್ಯ ವಹಿಸಿ ಬಿಜೆಪಿ ನಾಯಕರನ್ನು ಠಾಣೆಯೊಳಗೆ ಬಿಟ್ಟಿರುವ ಆರೋಪದ ಮೇಲೆ ಅಮಾನತು ಮಾಡಲಾಗಿದೆ. […]

Continue Reading

ವಿಜಯೇಂದ್ರ ಸೇಫ್ಟಿಗೆ ನಡ್ಡಾ ಬರುತ್ತಿದ್ದಾರೆ. ವಿಜಯೇಂದ್ರ ಅವರಿಗೆ ಶಹಭಾಷ್ ಗಿರಿ ಕೊಟ್ಟ ಮೋದಿ

ಪಕ್ಷ ಸಂಘಟನೆಯಲ್ಲಿ ಕರ್ನಾಟಕದ ಬಿಜೆಪಿ ದೇಶದಲ್ಲೇ ನಾಲ್ಕನೇ ಸ್ಥಾನ ಪಡೆದಿದೆಯಂತೆ. ಕರ್ನಾಟಕದಲ್ಲಿ ಬಿಜೆಪಿಗೆ ಅಧಿಕಾರ ಇಲ್ಲದಿದ್ದರೂ, ರಾಷ್ಟ್ರಮಟ್ಟದಲ್ಲಿ ಪಕ್ಷಕ್ಕೆ ಮಾದರಿಯಂತೆ ಕಳೆದ ವಾರ ದಿಲ್ಲಿಗೆ ಹೋದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪಕ್ಷ ಸಂಘಟನೆಗಾಗಿ ತಾವು ಮಾಡುತ್ತಿರುವ ಪ್ರಯತ್ನಗಳ ಬಗ್ಗೆ ಅವರು ವಿವರಿಸಿದ್ದಾರೆ. ಹೀಗೆ ವಿಜಯೇಂದ್ರ ಅವರು ಹೇಳಿದ್ದನ್ನು ಸಮಾಧಾನದಿಂದ ಕೇಳಿಸಿಕೊಂಡ ಪ್ರಧಾನಿ ಮೋದಿಯವರು ವೆರಿಗುಡ್ ಎಂದಿದ್ದಾರೆ. ಕಾರಣ.? ಕರ್ನಾಟಕದಲ್ಲಿ ಪಕ್ಷ ಸಂಘಟನೆಗಾಗಿ ವಿಜಯೇಂದ್ರ ಅವರು […]

Continue Reading

ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯಿಂದ ಅರಣ್ಯ ಸಚಿವರ ಬೇಟಿ, ಸಮಸ್ಯೆಗಳನ್ನು ಬಗೆಹರಿಸಲು ಮನವಿ

ಧರ್ಮಸ್ಥಳಕ್ಕೆ ಆಗಮಿಸಿದ ರಾಜ್ಯದ ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪದಾಧಿಕಾರಿಗಳು ಭೇಟಿಯಾಗಿ ಅರಣ್ಯವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಸಿದರು. ಅರಣ್ಯ ಮತ್ತು ಕಂದಾಯ ಜಮೀನಿನ ಬಗ್ಗೆ ಇರುವ ಗೊಂದಲಗಳನ್ನು ಬಗೆಹರಿಸಬೇಕು, ಜಂಟಿ ಸರ್ವೇ ನಡೆಸಿ, ಕೃಷಿ ಚಟುವಟಿಕೆಗಳನ್ನು ನಡೆಸಿರುವ ಅರಣ್ಯವಾಸಿಗಳಿಗೆ ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿಗಳನ್ನು ಇತ್ಯರ್ಥಪಡಿಸಿ ಹಕ್ಕುಪತ್ರ ವಿತರಣೆ ಮಾಡಬೇಕು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಆದಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಕ್ತ […]

Continue Reading

ಕುಂದಾಪುರ: ಖಾಸಗಿ ಶಾಲಾ ಬಸ್ಸಿಗೆ ಗಾಳಿ ತುಂಬುವಾಗ ಟಯರ್ ಸ್ಪೋಟ..!!

ಗಾಳಿಯಲ್ಲಿ ಹಾರಾಡಿ ಕೆಳಕ್ಕೆ ಬಿದ್ದ ಯುವಕ ಅಬ್ದುಲ್ ರಜೀದ್ ಗೆ ಗಂಭೀರ ಗಾಯ ಗಾಳಿ ತುಂಬುವಾಗ ಟಯರ್ ಸ್ಪೋಟಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ನಡೆದಿದೆ.ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿ ನ ಟಯರ್ ಪಂಚರ್ ಶಾಪ್ ನಲ್ಲಿ ಬಸ್ಸಿನ ಟೈಯರಿಗೆ ಗಾಳಿ ತುಂಬುವ ಸಂದರ್ಭ ಟಯರ್ ಸಿಡಿದಿದೆ. ಟಯರ್ ಗಾಳಿ ತುಂಬಿಸುತ್ತಿದ್ದ ಅಬ್ದುಲ್ ರಜೀದ್ (19) ಗಾಯಗೊಂಡ ಯುವಕ. ಖಾಸಗಿ ಶಾಲೆ ಬಸ್ಸೊಂದರ ಟಯರ್ ಪ್ಯಾಚ್ ಗೆಂದು ಬಂದಿದ್ದು, ಗಾಳಿ ತುಂಬಿದ ಕೆಲವೇ ನಿಮಿಷಗಳಲ್ಲಿ […]

Continue Reading

ಗಣ್ಯರ ಹೆಸರು ಬಳಸಿ ಚಿನ್ನಾಭರಣ ಮಳಿಗೆಗೆ ಕೋಟ್ಯಾಂತರ ರೂಪಾಯಿ ವಂಚನೆ; ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆಯ ಬಂಧನ.

ಬಿಜೆಪಿ ಮುಖಂಡ ವರ್ತೂರ್ ಪ್ರಕಾಶ್ ಗೆ ತನಿಖೆ ಸಂಕಷ್ಟ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ. ಚಿನ್ನಾಭರಣ ಮಳಿಗೆಯಲ್ಲಿ ಗಣ್ಯರ ಹೆಸರು ಬಳಸಿಕೊಂಡು ಕೋಟ್ಯಾಂತರ ಮೌಲ್ಯದ ಆಭರಣ ಖರೀದಿಸಿ ಹಣ ಪಾವತಿಸದೆ ವಂಚಿಸಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆಯನ್ನು ಪುಲಿಕೇಶಿನಗರ ಉಪ-ವಿಭಾಗದ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ಚಿನ್ನ ಹಾಗೂ ಕಾರು ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಬಾಗಲಗುಂಟೆ ನಿವಾಸಿ ಶ್ವೇತಾಗೌಡ ಬಂಧಿತ ಆರೋಪಿ. ಕೆಲ ದಿನಗಳ ಹಿಂದೆ ಅವಿನ್ಯೂ ರಸ್ತೆಯ ನವರತ್ನ ಜ್ಯುವೆಲರ್ಸ್‌ ಮಳಿಗೆಯಲ್ಲಿ ಸುಮಾರು […]

Continue Reading

ಸುವರ್ಣ ವಿಧಾನಸೌಧ ದಾಳಿ ಕೇಸ್; ರಾಜ್ಯ ಸರ್ಕಾರದ ವಿರುದ್ಧ ಕೇಂದ್ರಕ್ಕೆ ವರದಿ ನೀಡ್ತಾರಾ ರಾಜ್ಯಪಾಲರು.?

ಸುವರ್ಣ ವಿಧಾನಸೌಧ ದಾಳಿ; ರಾಜ್ಯಪಾಲರ ಅಂಗಳ ಸೇರಿದ ಪ್ರಕರಣ; ರಾಜ್ಯ ಸರ್ಕಾರ ವಜಾಕ್ಕೆ ‘CRF’ ಆಗ್ರಹ; ರಾಜ್ಯಪಾಲರಿಗೆ ಮನವಿ ▪️ ಸುವರ್ಣ ವಿಧಾನಸೌಧ ದಾಳಿ ಕೇಸ್; ರಾಜ್ಯ ಸರ್ಕಾರದ ವಿರುದ್ಧ ಕೇಂದ್ರಕ್ಕೆ ವರದಿ ನೀಡ್ತಾರಾ ರಾಜ್ಯಪಾಲರು.? ▪️ ಸುವರ್ಣ ವಿಧಾನಸೌಧ ದಾಳಿ; ರಾಜ್ಯಪಾಲರ ಅಂಗಳ ಸೇರಿದ ಪ್ರಕರಣ; ರಾಜ್ಯ ಸರ್ಕಾರ ವಜಾಕ್ಕೆ ಆಗ್ರಹ ▪️ ರಾಜ್ಯ ಸರ್ಕಾರ ವಜಾಕ್ಕೆ ‘CRF’ ಆಗ್ರಹ; ರಾಜ್ಯಪಾಲರಿಗೆ ಮನವಿ ▪️ ಸುವರ್ಣ ವಿಧಾನಸೌಧ ದಾಳಿ ಪ್ರಕರಣ; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ […]

Continue Reading

ಅಬ್ಬರಿಸಿದ ಲಕ್ಷ್ಮೀ..ರವಿಯ ರಾಜಕೀಯ ಯುಗಾಂತ್ಯ.!

ಅಕಸ್ಮಾತ್ ಇದು ನಿಜವಾದರೆ, ಸಿಟಿ ರವಿಯ ರಾಜಕೀಯ ಜೀವನವೇ ಅಂತ್ಯ.? ಹೆಬ್ಬಾಳ್ಕರ್ ಅವರ ವಿರುದ್ಧ ಬಾಯಿಗೆ ಬಂದ ರೀತಿ ಮಾತನಾಡಿ, ಅಶ್ಲೀಲ ಪದ ಬಳಕೆ ಮಾಡಿರುವ ಆರೋಪ ಹೊತ್ತಿರುವ ಸಿಟಿ ರವಿಗೆ ಇದೀಗ ನಡುಕ ಶುರುವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತವೇ ಇದ್ದು, ಇನ್ನೊಂದು ಕಡೆ ಈ ರೀತಿ ಮಹಿಳಾ ಸಚಿವರ ಬಗ್ಗೆ ವಿರೋಧ ಪಕ್ಷದ ನಾಯಕ ಅಸಭ್ಯವಾಗಿ ಮಾತನಾಡಿದ್ದಾರೆ ಎಂಬ ಆರೋಪ ಹೊಸ ಅಸ್ತ್ರವಾಗಿದೆ. ಈ ಕಾರಣಕ್ಕೆ ಸಿಟಿ ರವಿ ವಿರುದ್ಧ ದೊಡ್ಡ ಅಸ್ತ್ರ ಪ್ರಯೋಗ ಮಾಡಲು […]

Continue Reading