ಬ್ಯಾಲೆಟ್ ಪೇಪರ್ ನಲ್ಲೇ ಚುನಾವಣೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಏಪ್ರಿಲ್, ಮೇನಲ್ಲಿ ಚುನಾವಣೆ ಸಾಧ್ಯತೆ

ರಾಜ್ಯದಲ್ಲಿ ಗ್ರಾಮಪಂಚಾಯತ್ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ನಲ್ಲೇ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿಯೂ ಮತಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ. ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಿದೆ. ಮತ್ತೊಂದೆಡೆ  2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ […]

Continue Reading

ಸ್ಪೀಕರ್ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ; “ಇದು ಕಲಾಪ ನಡೆಸುವ ರೀತಿನಾ? ಗಲಾಟೆ ಮಾಡುವವರನ್ನು ಎತ್ತಿ ಹೊರಗೆ ಹಾಕಿಸಿ

ಸ್ಪೀಕರ್ ಖಾದರ್ ಅವರ ಕಾರ್ಯವೈಖರಿಗೆ ಸಿಎಂ ಸಿದ್ದರಾಮಯ್ಯ ಗರಂ ಆದ ಪ್ರಸಂಗ ಅಧಿವೇಶನದಲ್ಲಿ ನಡೆದಿದೆ. ಅಬಕಾರಿ ಕಿಕ್ ಬ್ಯಾಕ್ ಪ್ರಕರಣದ ಚರ್ಚೆ ಹಾಗೂ ಮನರೇಗ ಸಂಬಂಧ ನಿರ್ಣಯ ಮಂಡನೆ ಸಂದರ್ಭದಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಅಡ್ಡಿಪಡಿಸಿದ ಬಗ್ಗೆ ಸ್ಪೀಕರ್ ಖಾದರ್ ಯಾವುದೇ ಕ್ರಮ ಕೈಗೊಳ್ಳದೆ ಮೌನಕ್ಕೆ ತಾಳಿರುವುದನ್ನು ಕಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪೀಕರ್ ವಿರುದ್ಧವೇ ಕೆಂಡಾಮಂಡಲರಾದರು. ಇತ್ತೀಚೆಗೆ ಕಲಾಪದಲ್ಲಿ ದುರ್ವತನೆ ತೋರಿದ ಬಿಜೆಪಿ ಹಾಗೂ ಜೆಡಿಎಸ್ ನ ಹದಿನಾರರಷ್ಟು ಸದಸ್ಯರನ್ನು ಸ್ಪೀಕರ್ ಖಾದರ್ ಶಿಸ್ತು ಕ್ರಮ ಕೈಗೊಂಡಿದ್ದರು. […]

Continue Reading

ಜಾತಕದ ನೆಪ; ಎಸ್‌ಸಿ ಸಮುದಾಯದ ಯುವತಿಗೆ ದೇವಸ್ಥಾನದ ಅರ್ಚಕನಿಂದ ಲೈಂಗಿಕ ದೌರ್ಜನ್ಯ, ಪ್ರಕರಣ ದಾಖಲು

ಮದುವೆ ಜಾತಕ ತೋರಿಸುವ ನೆಪದಲ್ಲಿ ಎಸ್‌ಸಿ ಸಮುದಾಯದ ಯುವತಿಗೆ ದೇವಾಲಯದ ಅರ್ಚಕನಿಂದ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಮೂಡಿಗೆರೆ ಪರಿಸರದಲ್ಲಿ ಬೆಳಕಿಗೆ ಬಂದಿದೆ.ಹೊರಟ್ಟಿ ಗ್ರಾಮದ ಪಾರ್ವತಿ ಈಶ್ವರ ದೇವಸ್ಥಾನದ ಅರ್ಚಕ ಕೃಷ್ಣ ರಾವ್ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಗಂಭೀರ ಪ್ರಕರಣ ದಾಖಲಾಗಿದೆ. 23 ವರ್ಷದ ಎಸ್‌ಸಿ ಸಮುದಾಯದ ಯುವತಿ ನೀಡಿರುವ ದೂರಿನಂತೆ, ಮದುವೆಯಲ್ಲಿ ತೊಂದರೆ ಆಗುತ್ತದೆ ಎಂದು ಹೆದರಿಸಿ ಆರೋಪಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. 2025ರ ನವೆಂಬರ್ 23ರಿಂದ 2026ರ ಫೆಬ್ರವರಿ […]

Continue Reading

ಮಕ್ಕಳ ಮೇಲೆ ‘ಸಾಮಾಜಿಕ ಮಾಧ್ಯಮ’ ಅಡ್ಡಪರಿಣಾಮ; ಜಾಗೃತಿಗಾಗಿ ಪಠ್ಯಕ್ರಮ ಆರಂಭಿಸಿ.. ಸರ್ಕಾರಕ್ಕೆ ವಕೀಲ ಮನೋರಾಜ್ ಪ್ರಸ್ತಾವನೆ

ಸಾಮಾಜಿಕ ಮಾಧ್ಯಮದ ದುಷ್ಪರಿಣಾಮಕ್ಕೆ ಕಡಿವಾಣ; ಸೂಕ್ತ ಪಠ್ಯಕ್ರಮ ಆರಂಭಿಸಲು ಸರ್ಕಾರಕ್ಕೆ ಕಾಂಗ್ರೆಸ್ ಸಲಹೆ ಜಾಗೃತಿ ಶಿಕ್ಷಣವೇ ಮಕ್ಕಳಿಗೆ ಪೂರಕ; ‘ಸೋಶಿಯಲ್ ಮೀಡಿಯಾ’ ಬಗ್ಗೆ ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಕಾಂಗ್ರೆಸ್ ಕಾನೂನು ಘಟಕ ಸಲಹೆ ‘ಸೋಶಿಯಲ್ ಮೀಡಿಯಾ’ ಬಗ್ಗೆ ಜಾಗೃತಿ ಶಿಕ್ಷಣ ಅನಿವಾರ್ಯ ; ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಹಿರಿಯ ವಕೀಲ ಮನೋರಾಜ್ ಶಿಫಾರಸು ಮಂಗಳೂರು: ಮಕ್ಕಳ ವಿಚಾರದಲ್ಲಿ ಸಾಮಾಜಿಕ ಮಾಧ್ಯಗಳಿಗೆ ಅಂಕುಶ ಹಾಕುವ ಕುರಿತು ಚರ್ಚೆಗಳು ನಡೆದಿರುವಾಗಲೇ, ರಾಜ್ಯದಲ್ಲೀಗ ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗೃತಿ ಶಿಕ್ಷಣ ಅಗತ್ಯದ […]

Continue Reading

ರಾಜಕೀಯ ಪಕ್ಷದ ಪ್ರಭಾವಿಗಳು ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿ; ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖೆ ಅಗತ್ಯವಿದೆ: ಹೈಕೋರ್ಟ್

ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳಲ್ಲಿನ ಪ್ರಭಾವಿ ವ್ಯಕ್ತಿಗಳು ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬುದಾಗಿ ಗೃಹ ಸಚಿವ ಜಿ.ಪರಮೇಶ್ವರ್‌ ವಿಧಾನಸಭೆಯಲ್ಲಿ ನೀಡಿದ ಹೇಳಿಕೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌) ದಾಖಲಿಸಿಕೊಂಡಿದೆ. ಅಲ್ಲದೇ, ಇದೊಂದು ಗಂಭೀರ ವಿಚಾರವಾಗಿರುವುದರಿಂದ ನ್ಯಾಯಾಲಯದ ನಿಗಾದಲ್ಲಿ ಕೇಂದ್ರೀಯ ಸಂಸ್ಥೆ ಅಥವಾ ವಿಶೇಷ ತನಿಖಾ ಸಂಸ್ಥೆಯಿಂದ ತನಿಖೆ (ಎಸ್‌ಐಟಿ) ನಡೆಸಬೇಕಾದ ಅಗತ್ಯವಿದೆ’ ಎಂದೂ ಹೇಳಿದೆ. ಮರಳು ಮಾಫಿಯಾಗಳಿಂದ ಅಕ್ರಮ ಮರಳು ಗಣಿಗಾರಿಕೆ ತಡೆಯಲು ಕ್ರಮ […]

Continue Reading

ಸ್ಥಳೀಯ ಸಂಸ್ಥೆಗಳ ಚುನಾವಣೆ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅಂತಿಮ ಗಡುವು

ರಾಜ್ಯದಲ್ಲಿ ಚುನಾವಣೆ ನಡೆಯಬೇಕಿರುವ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಹಾಗೂ‌ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸುವ ಸಂಬಂಧ ಉತ್ತರಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅಂತಿಮ ಗಡುವು ನೀಡಿದೆ. ಚುನಾವಣೆಗಾಗಿ ಮೀಸಲಾತಿ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ […]

Continue Reading

ಶೀಘ್ರವೇ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ; ಪೂರ್ವ ಸಿದ್ಧತೆಗೆ ಸರ್ಕಾರ ಸೂಚನೆ, ಜಿಲ್ಲಾಧಿಕಾರಿಗಳಿಗೆ ಪತ್ರ

ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸರ್ಕಾರ ಸೂಚಿಸಿದೆ. ಆ ಮೂಲಕ ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಶೀಘ್ರವೇ ದಿನಾಂಕ ಘೋಷಣೆಯ ಸುಳಿವು ಹೊರಬಿದ್ದಿದೆ. ಈ ಕುರಿತಂತೆ ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಅದರಲ್ಲಿ 2020-25ನೇ ಅವಧಿಯ ಗ್ರಾಮ ಪಂಚಾಯಿತಿಗಳ ಅವಧಿಯು 2026 ರ ಜನವರಿ-ಫೆಬ್ರವರಿಯಲ್ಲಿ ಪೂರ್ಣಗೊಳ್ಳಲು ಪ್ರಾರಂಭವಾಗಿದ್ದು, ಸದರಿ ಅವಧಿಯು ಮುಕ್ತಾಯಗೊಳ್ಳುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸುವ ಆರು ತಿಂಗಳು […]

Continue Reading

ನಗರಸಭೆ ಪೌರಾಯುಕ್ತೆಗೆ ನಿಂದನೆ ಮತ್ತು ಜೀವ ಬೆದರಿಕೆ ಒಡ್ಡಿದ ಪ್ರಕರಣ; ಕರ್ನಾಟಕ- ಕೇರಳ ಗಡಿಯಲ್ಲಿ ರಾಜೀವ್‌ ಗೌಡರ ಬಂಧನ.

ನಗರಸಭೆ ಪೌರಾಯುಕ್ತೆ ಅಮೃತಗೌಡ ರವರಿಗೆ ನಿಂದನೆ ಮತ್ತು ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡರನ್ನು ಪೊಲೀಸರು ಕರ್ನಾಟಕ-ಕೇರಳ ಗಡಿಯಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಕರ್ನಾಟಕ- ಕೇರಳ ಗಡಿಯಲ್ಲಿ ಪೊಲೀಸರು ರಾಜೀವ್‌ ಗೌಡರನ್ನು ಬಂಧಿಸಿ, ಅವರನ್ನು ಚಿಕ್ಕಬಳ್ಳಾಪುರಕ್ಕೆ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ. ಬ್ಯಾನರ್‌ ವಿಚಾರಕ್ಕೆ ಸಂಬಂಧಿಸಿ ಜ.12 ರಂದು ರಾಜೀವ್‌ ಗೌಡ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ್ದರು. ಧಮ್ಕಿ ಹಾಕಿ, ನಿಂದಿಸಿದ್ದಕ್ಕೆ ರಾಜೀವ್‌ ಗೌಡ ವಿರುದ್ಧ […]

Continue Reading

ರಾಜ್ಯ ಸರಕಾರಕ್ಕೆ ಅಬಕಾರಿ ಸಂಕಷ್ಟ.! ಅಬಕಾರಿ ಇಲಾಖೆಯಲ್ಲಿ ಮಹಾ ಹಗರಣ; ಸರ್ಕಾರದ ಮೂರನೇ ವಿಕೆಟ್ ಉರುಳಲಿದೆಯೇ.?

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಒಂದಾದ ಮೇಲೊಂದರಂತೆ ಕಂಟಕಗಳು ಎದುರಾಗುತ್ತಿವೆ. ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳ ಬೆನ್ನಲ್ಲೇ ಇದೀಗ ಅಬಕಾರಿ ಇಲಾಖೆಯ ಮಹಾ ಹಗರಣವೊಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪ ಇದೀಗ ಸಚಿವ ಆರ್.ಬಿ.ತಿಮ್ಮಾಪುರ ಅವರ ಕುರ್ಚಿ ಅಲುಗಾಡಿಸುತ್ತಿದ್ದು, ಸರ್ಕಾರದ ಮೂರನೇ ವಿಕೆಟ್ ಪತನವಾಗಲಿದೆಯಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ದಟ್ಟವಾಗಿದೆ. ರಾಜ್ಯಪಾಲರ ಭಾಷಣ ವಿವಾದಗಳ ನಡುವೆ ಸಿಲುಕಿದ್ದ ಸರ್ಕಾರಕ್ಕೆ, ಅಬಕಾರಿ ಇಲಾಖೆಯ ಲಂಚ ಪ್ರಕರಣ ನುಂಗಲಾರದ […]

Continue Reading

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಕೆ; ವಿರೋಧ ವ್ಯಕ್ತಪಡಿಸುತ್ತಿದ್ದ ನಾಯಕರಿಗೆ ಸ್ಪಷ್ಟ ಸಂದೇಶ

ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಸಂಘಟನೆಯಲ್ಲಿ ಭಾರಿ ಬದಲಾವಣೆಗಳಾಗುತ್ತಿದ್ದರೂ, ಕರ್ನಾಟಕದಲ್ಲಿ ಮಾತ್ರ ಹೈಕಮಾಂಡ್ ವಿಜಯೇಂದ್ರ ಅವರ ನಾಯಕತ್ವದ ಮೇಲೆ ನಂಬಿಕೆ ಇಟ್ಟಿದೆ. 19ಕ್ಕೂ ಹೆಚ್ಚು ರಾಜ್ಯಗಳ ಅಧ್ಯಕ್ಷರ ಬದಲಾವಣೆಯ ನಡುವೆಯೂ ವಿಜಯೇಂದ್ರ ಕುರ್ಚಿ ಅಲುಗಾಡದಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಕೇವಲ ಅಧ್ಯಕ್ಷ ಸ್ಥಾನದ ಚರ್ಚೆಯಷ್ಟೇ ಅಲ್ಲದೆ, ಪಕ್ಷದ ಸಂಘಟನೆಗೆ ಸಂಬಂಧಿಸಿದಂತೆ ಕೆಲವು ಮಹತ್ವದ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ. ಹೊಸ ರಾಷ್ಟ್ರೀಯ ಅಧ್ಯಕ್ಷರು ಅಧಿಕಾರ ವಹಿಸಿಕೊಂಡ ಕೂಡಲೇ ರಾಜ್ಯ ಬಿಜೆಪಿ ನಾಯಕತ್ವದಲ್ಲಿಯೂ ಬದಲಾವಣೆಗಳು ಬರುತ್ತವೆ ಎಂಬ ಮಾತುಗಳು ಹಲವು […]

Continue Reading