ನಿಗಮ-ಮಂಡಳಿ ನೇಮಕಾತಿಗೆ ಅಂಕಿತ ಮುದ್ರೆ. ಪಟ್ಟಿಯಲ್ಲಿ ಶಾಸಕರ, ಕಾರ್ಯಕರ್ತರ ಹೆಸರು.

ನಿಗಮ-ಮಂಡಳಿ ನೇಮಕಾತಿಗೆ ಕಡೆಗೂ ಮುಹೂರ್ತ ನಿಗದಿ ಆಗಿದೆ. ಕಾಂಗ್ರೆಸ್‌ ಹೈಕಮಾಂಡ್‌ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿಯನ್ನು ಇಂದು ಪ್ರಕಟಿಸುವ ಸಾಧ್ಯತೆಯಿದೆ. ನಿಗಮ-ಮಂಡಳಿ ಹುದ್ದೆಗೆ 74 ಹೆಸರು ಅಂತಿಮಗೊಂಡಿದೆ.37 ಶಾಸಕರು, 37 ಕಾರ್ಯಕರ್ತರ ಹೆಸರು ಪಟ್ಟಿಯಲ್ಲಿದೆ. ಇವತ್ತು ಸುಮಾರು 40 ರಿಂದ 46 ಮಂದಿಯ ಹೆಸರು ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂತಿಮ ಮುದ್ರೆ ಒತ್ತಿದ್ದಾರೆಯಂತೆ. ಸಿ. ಪುಟ್ಟರಂಗ ಶೆಟ್ಟಿ: ಎಂಎಸ್​​ಐಎಲ್, ನರೇಂದ್ರ ಸ್ವಾಮಿ: ಮಾಲಿನ್ಯ ನಿಯಂತ್ರಣ […]

Continue Reading

ಅನಂತ ಕುಮಾರ್ ಹೆಗಡೆ ವಿರುದ್ದ ದಾಖಲಿಸಿರುವ ಎಫ್ಐಅರ್ ಪೊಲೀಸರ ತಿಪ್ಪೆ ಸಾರಿಸುವ ಕೆಲಸವಷ್ಟೆ.!

ಸಮಾಜಕ್ಕೆ ಅಂಟಿದ ಕೋಮು ಖಾಯಿಲೆ ಗುಣವಾಗುವುದಾದರೂ ಹೇಗೆ.? ✍️. ನವೀನ್ ಸೂರಿಂಜೆ ಪತ್ರಕರ್ತ ಅನಂತ ಕುಮಾರ್ ಹೆಗಡೆ ವಿರುದ್ದ ಕುಮಟಾ ಪೊಲೀಸರು IPC ಸೆಕ್ಷನ್ 1860 (U/s-153,153A,505(2) ಅಡಿಯಲ್ಲಿ ಸುಮೊಟೋ ಎಫ್ಐಅರ್ ದಾಖಲಿಸಿದ್ದಾರೆ. ಇದೊಂದು ಪೊಲೀಸರ ತಿಪ್ಪೆ ಸಾರಿಸುವ ಕೆಲಸವಷ್ಟೆ ! ಇದೇ ಭಾಷಣದಲ್ಲಿ ಅನಂತ ಕುಮಾರ್ ಹೆಗಡೆ ಮುಖ್ಯಮಂತ್ರಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಸಚಿವರುಗಳು, ಕಾಂಗ್ರೆಸ್ ನಾಯಕರು ವಿಡಿಯೋ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನ ಸಚಿವರು ಮತ್ತು ನಾಯಕರುಗಳಿಗೆ ನಿಜವಾಗಿಯೂ ಬದ್ಧತೆ ಇದ್ದರೆ […]

Continue Reading

ಪಂಚಾಯತ್ ಆಸ್ತಿಗಳಿಂದ ಹಣ ಸಂಪಾದಿಸಲು ಮುಂದಾದ ಸರಕಾರ; ಈ ಯೋಜನೆ ದೇಶದಲ್ಲೇ ಮೊದಲು.!

ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳಲ್ಲಿ ಲಭ್ಯವಿರುವ ಆಸ್ತಿಗಳನ್ನು ಹಣಗಳಿಸಲು ಬಳಸಲು ಕರ್ನಾಟಕ ಸರ್ಕಾರವು ಚಿಂತನೆ ನಡೆಸಿದೆ. ಕರ್ನಾಟಕ ಸರ್ಕಾರವು ಇದರಿಂದಾಗಿ ಹಣ ಗಳಿಸಲು ಮುಂದಾದರೆ ಭಾರತದಲ್ಲಿ ಮೊದಲ ಪ್ರಯತ್ನ ಇದಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕನ್ಸಲ್ಟಿಂಗ್ ಈ ಪಾಲಿಸಿಯು ಮಾರ್ಚ್ ಅಥವಾ ಏಪ್ರಿಲ್‌ನೊಳಗೆ ಸಿದ್ಧವಾಗಬೇಕು ಎಂದು ಡಿಎಚ್‌ಗೆ ಸಚಿವರು ತಿಳಿಸಿದರು. “ನಾವು ಪಂಚಾಯತ್‌ಗಳಿಗೆ ಹೆಚ್ಚುವರಿ ಸಂಪನ್ಮೂಲಗಳನ್ನು ಹೇಗೆ ಉತ್ಪಾದಿಸಬಹುದು ಎಂಬುದನ್ನು ಲೆಕ್ಕಾಚಾರ ಮಾಡುವ ಚಿಂತನೆಯಾಗಿದೆ, ಕರ್ನಾಟಕವು 6,000 ಗ್ರಾಮ […]

Continue Reading

ಅಪ್ರಾಪ್ತ ಯುವತಿಯ ಅಕ್ರಮ ಗರ್ಭಕ್ಕೆ ಕಾರಣನಾದ ಯುವಕನಿಗೆ 20 ವರ್ಷಗಳ ಕಠಿಣ ಸಜೆ, 1.10 ಲಕ್ಷ ರೂಪಾಯಿ ದಂಡ

ಮದುವೆ ಆಗುವುದಾಗಿ ನಂಬಿಸಿ, ಲೈಂಗಿಕ ಕಿರುಕುಳ ನೀಡಿ ಬಾಲಕಿ ಗರ್ಭದರಿಸಲು ಕಾರಣನಾದ ಯುವಕನಿಗೆ ಶಿಕ್ಷೆ ವಿಧಿಸಿ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ ನ್ಯಾಯಾಲಯದ ನ್ಯಾಯಾಧೀಶ ಜೆ.ಎಸ್. ಮೋಹನ್ ಆದೇಶಿಸಿದ್ದಾರೆ. ಆರೋಪಗಳು ದೃಢಪಟ್ಟ ಕಾರಣ 20 ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ, 1.10 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ದಂಡದ ಮೊತ್ತದಲ್ಲಿ 1 ಲಕ್ಷ ರೂಪಾಯಿಗಳನ್ನು ಮತ್ತು ಪರಿಹಾರವಾಗಿ 3 ಲಕ್ಷ ರೂಪಾಯಿ ನೀಡಲು ಆದೇಶಿಸಲಾಗಿದೆ. 2023 ರಲ್ಲಿ ಭದ್ರಾವತಿ ನಗರದ 19 ವರ್ಷದ ಯುವಕ […]

Continue Reading

ಮಾತೃ ಪಕ್ಷದತ್ತ ಮುಖ ಮಾಡುತ್ತಾರಾ.. ಜಗದೀಶ್ ಶೆಟ್ಟರ್.? ಬಿಜೆಪಿಗೆ ಕರೆತರಲು ಪಕ್ಷದೊಳಗಿನ ಒಂದು ಬಣದಿಂದ ಭಾರೀ ಪ್ರಯತ್ನ.!

ಹಿರಿಯ ನಾಯಕ ಜಗದೀಶ್ ಶೆಟ್ಟರ್ ಮತ್ತೆ ಮಾತೃ ಪಕ್ಷದತ್ತ ಮುಖ ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಕರೆತರಲು ಪಕ್ಷದೊಳಗಿನ ಒಂದು ಬಣ ಭಾರೀ ಪ್ರಯತ್ನ.! ಕಳೆದ ವಿಧಾನಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಕಾಂಗ್ರೆಸ್ ಸೇರಿ ಬಿಜೆಪಿಗೆ ಭಾರೀ ಹಾನಿ ಮಾಡುವಲ್ಲಿ ಯಶಸ್ವಿಯಾಗಿದ್ದ ಮಾಜಿ ಮುಖ್ಯಮಂತ್ರಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಮತ್ತೆ ಮಾತೃ ಪಕ್ಷದತ್ತ ಮುಖ ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಕರೆತರಲು ಪಕ್ಷದೊಳಗಿನ ಒಂದು ಬಣ ಭಾರೀ ಪ್ರಯತ್ನ ನಡೆಸಿದೆ ಎನ್ನಲಾಗಿದೆ. ಈಗಾಗಲೇ […]

Continue Reading

ನಗರಸಭೆ, ಪುರಸಭೆ, ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಅಗತ್ಯವಿಲ್ಲ: ಹೈಕೋರ್ಟ್

ಕರ್ನಾಟಕ ಭೂಕಂದಾಯ ಕಾಯ್ದೆಯಡಿ ಸೂಚಿಸಲಾದ ವಿಧಾನಗಳನ್ನು ಅನುಸರಿಸಿ ನಗರಸಭೆ, ಪುರಸಭೆ ಅಥವಾ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಅಗತ್ಯವಿಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಈ ಮಹತ್ವದ ತೀರ್ಪನ್ನು ಘೋಷಿಸಿದೆ. ಟೌನ್ ಮುನ್ಸಿಪಲ್ ಕೌನ್ಸಿಲ್ (TMC) ವ್ಯಾಪ್ತಿಗೊಳಪಟ್ಟ ಭೂಮಿ ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿತವಾದ ಭೂಮಿ ಎಂದು ಪರಿಗಣಿಸತಕ್ಕದ್ದಾಗಿದೆ ಎಂದು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ತೀರ್ಪಿನಲ್ಲಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ […]

Continue Reading

ಕೇರಳ ಮೂಲದ ವೈದ್ಯ ವಿದ್ಯಾರ್ಥಿ ಸಾವು ಪ್ರಕರಣ: ಮಂಗಳೂರಲ್ಲಿ ಸಿಬಿಐ ತಂಡ

ತಣ್ಣೀರುಬಾವಿ ಬಳಿ 2014 ರಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿಯ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿ ವಿದ್ಯಾರ್ಥಿಯ ತಂದೆಯ ದೂರಿನ ಮೇರೆಗೆ ಸಿಬಿಐ ತಂಡ ಗುರುವಾರ ಮಂಗಳೂರಿಗೆ ಆಗಮಿಸಿದೆ. ಮಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜಿನ 3 ನೇ ವರ್ಷದ ವಿದ್ಯಾರ್ಥಿಯಾಗಿದ್ದ ಕೇರಳ ಮೂಲದ ರೋಹಿತ್ ರಾಧಾಕೃಷ್ಣನ್ (22) ಅವರ ಮೃತದೇಹ 2014 ರ ಮಾರ್ಚ್ 23 ರಂದು ತಣ್ಣೀರು ಬಾವಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಮೀಪ ಪತ್ತೆಯಾಗಿತ್ತು. ರೋಹಿತ್ ಶವ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಬೈಕ್ ನಲ್ಲಿ […]

Continue Reading

ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಿದ್ದೇ ಆದರೆ ಸಂಪುಟದಿಂದ ಹೊರಗಿರುವುದಾಗಿ ಖಡಕ್ ಎಚ್ಚರಿಕೆಯ ಸಂದೇಶ ನೀಡಿದ ಡಿ.ಕೆ ಶಿವಕುಮಾರ್

ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಿದ್ದೇ ಆದರೆ ತಾವು ಸಂಪುಟದಿಂದ ಹೊರಗಿರುವುದಾಗಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಡಕ್ಕ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ರಾಜ್ಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಗೆ ಒತ್ತಡ ತೀವ್ರವಾದ ಬೆನ್ನಲ್ಲೇ 7 ಮಂದಿ ಸಚಿವರುಗಳು ರಹಸ್ಯ ಸಭೆ ನಡೆಸಿದ್ದರು. ಅದರೆ ಇದರ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಹೈಕಮಾಂಡ್‍ಗೆ ತಮ್ಮ ನಿಲುವನ್ನು ತಿಳಿಸಿದ್ದು, ಪಕ್ಷಕ್ಕೆ ಅನುಕೂಲವಾಗುವುದಾದರೆ ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಳ್ಳಬಹುದು. ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಸಿದ್ದೇ ಆದರೆ ತಾವು […]

Continue Reading

ಗೃಹಲಕ್ಷ್ಮೀ ಯೋಜನೆಯ 5ನೇ ಕಂತಿನ ಹಣ ಬಿಡುಗಡೆಗೆ ರಾಜ್ಯ ಸರಕಾರ ಹೊಸ ರೂಲ್ಸ್‌ ಜಾರಿ

ಗೃಹಲಕ್ಷ್ಮೀ ಯೋಜನೆಯ 5ನೇ ಕಂತಿನ ಹಣ ಬಿಡುಗಡೆಗೆ ಮೊದಲೇ ರಾಜ್ಯ ಸರಕಾರ ಹೊಸ ರೂಲ್ಸ್‌ ಜಾರಿ ಮಾಡಿದೆ. ಸರಕಾರ ಜಾರಿಗೆ ತಂದಿರುವ ರೂಲ್ಸ್‌ ಪಾಲನೆ ಮಾಡದೇ ಇದ್ದರೆ ಮುಂದಿನ ಯಾವುದೇ ಕಂತಿನ ಹಣವೂ ನಿಮ್ಮ ಖಾತೆಗೆ ಜಮೆ ಆಗೋದಿಲ್ಲ. ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಗೃಹಿಣಿಯರು ಕಡ್ಡಾಯವಾಗಿ ತಮ್ಮ ಖಾತೆಗೆ ಇ-ಕೆವೈಸಿ ಮಾಡಿಸಲೇಬೇಕು. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಡೆಯಬೇಕಾದರೆ ರೇಷನ್‌ ಕಾರ್ಡ್‌ನಲ್ಲಿ ಇರುವ ಪ್ರತಿಯೊಬ್ಬ ಸದಸ್ಯರು ಕೂಡ Ekyc ಮಾಡಿಸಲೇಬೇಕಾಗಿದೆ. ಒಂದೊಮ್ಮೆ ನಿಮ್ಮ ಕುಟುಂಬ ಸದಸ್ಯರ ಇಕೆವೈಸಿ […]

Continue Reading

ಶಾಲಾ ಮಕ್ಕಳಿಗೆ ಶುಭ ಸುದ್ದಿ; ಬ್ಯಾಗ್ ಹೊರೆ ಕಡಿಮೆ ಮಾಡಲು ಶಿಕ್ಷಣ ಇಲಾಖೆ ಚಿಂತನೆ

ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದ್ದು, ಪ್ರಸಕ್ತ ವರ್ಷದಿಂದ ಪಠ್ಯಪುಸ್ತಕಗಳು ಭಾಗ-1 ಮತ್ತು ಭಾಗ-2 ಎಂದು ಎರಡು ವಿಭಾಗಗಳಾಗಿ ಮುದ್ರಿಸಿ ಸರಬರಾಜು ಮಾಡಲು ಇಲಾಖೆ ತೀರ್ಮಾನ ಮಾಡಿದೆ. ಅರ್ಧವಾರ್ಷಿಕ ಪರೀಕ್ಷೆ ವರೆಗೆ ಭಾಗ-1 ಹಾಗೂ ದಸರಾ ರಜೆ ಮುಗಿದ ಬಳಿಕ ಭಾಗ-2 ಪಠ್ಯಪುಸ್ತಕಗಳನ್ನು ವಿತರಣೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ. ಪಠ್ಯಪುಸ್ತಕ ವಿಭಜಿಸಿ ನೀಡುವುದರಿಂದ ಮಕ್ಕಳ ಶಾಲಾ ಬ್ಯಾಗ್ ತೂಕ ಕಡಿಮೆಯಾಗಲಿದೆ. ನಿರ್ವಹಣೆ ಸುಲಭವಾಗುತ್ತದೆ. ಮಕ್ಕಳ ಒತ್ತಡ ಇಳಿಕೆಯಾಗುತ್ತದೆ. […]

Continue Reading