ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಮಾಸ್ಟರ್ ಸ್ಟ್ರೋಕ್. 25 ಸಂಸದರ ಪೈಕಿ 12 ಮಂದಿ ಸಂಸದರಿಗೆ ಗೇಟ್ ಪಾಸ್.!

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ಹಾಲಿ 25 ಸಂಸದರ ಪೈಕಿ 12ಕ್ಕೂ ಹೆಚ್ಚು ಸಂಸದರಿಗೆ ಟಿಕೆಟ್ ತಪ್ಪುವ ಸಾಧ್ಯತೆಯಿದೆ. ಕೆಲವರಿಗೆ ವಯಸ್ಸು ಹಾಗೂ ಅನಾರೋಗ್ಯದ ಕಾರಣದಿಂದ ಟಿಕೆಟ್ ತಪ್ಪಿದರೆ, ಇನ್ನು ಕೆಲವರಿಗೆ ಪಕ್ಷದ ಸಂಘಟನೆ ಮಾಡದೇ ಇರುವುದು ಮುಖ್ಯ ಕಾರಣ ಎಂಬುವುದು ತಿಳಿದುಬಂದಿದೆ. ಜೊತೆಗೆ ಸತತವಾಗಿ ಮೂರ್ನಾಲ್ಕು ಬಾರಿ ಗೆದ್ದಿರುವುದ ರಿಂದ ಆಡಳಿತ ವಿರೋಧಿ ಅಲೆ ಕಾರಣಕ್ಕಾಗಿ ಟಿಕೆಟ್ ಕೈತಪ್ಪುವ ಸಾಧ್ಯತೆಗಳಿವೆ. ದಾವಣಗೆರೆ ಸಂಸದರಾದ ಸಿದ್ದೇಶ್ವರ, ವಿಜಯಪುರ ಸಂಸದರಾದ ರಮೇಶ ಜಿಗಜಿಣಗಿ, ಬೆಂಗಳೂರು ಉತ್ತರ […]

Continue Reading

ಖಾಯಂ ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ ಅಸ್ತು: ಸಚಿವ ಸುಧಾಕರ್

ಉನ್ನತ ಶಿಕ್ಷಣ ಇಲಾಖೆಗೆ ಖಾಯಂ ಸಹಾಯಕ ಪ್ರಾಧ್ಯಾಪಕರ ಅವಶ್ಯಕತೆಯಿದೆ. ಆದಷ್ಟು ತ್ವರಿತವಾಗಿ 2021ರಲ್ಲಿ ಆರಂಭಗೊಂಡ 1242ರ ನೇಮಕಾತಿಯನ್ನು ಪೂರ್ಣಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ತಿಳಿಸಿದ್ದಾರೆ. ಇಂದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ನಿಯೋಗ ಸಚಿವರ ನಿವಾಸದಲ್ಲಿ ಭೇಟಿಯಾಗಿ ಮನವಿ ನೀಡಿದ ಸಂದರ್ಭ ಈ ಮಾಹಿತಿ ನೀಡಿದ್ದಾರೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯೆಗೆ ಸಂಬಂಧಿಸಿದಂತೆ ಇಟ್ಟಿರುವ ಬೇಡಿಕೆಗಳನ್ನು ಇಂದಿನ ಸಭೆಯಲ್ಲಿಟ್ಟು ಚರ್ಚಿಸಲಾಗುವುದು. ತಮಗೆಲ್ಲರಿಗೂ ಕೆಲವೇ ದಿನಗಳಲ್ಲಿ ನೇಮಕಾತಿ ಆದೇಶವನ್ನು ನೀಡುವಂತಹ ಎಲ್ಲಾ ಪ್ರಯತ್ನಗಳನ್ನು […]

Continue Reading

ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಸರ್ಕಾರ ಆದೇಶ; ಸಿಂದೂರಿಗೆ ಮತ್ತೊಂದು ಸಂಕಷ್ಟ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದೆ.ರೋಹಿಣಿ ಸಿಂಧೂರಿ ಅವರು ನಿಯಮಗಳನ್ನು ಮೀರಿ ಇಲಾಖೆ ಅನುಮತಿ ಪಡೆಯದೆ ದುಡ್ಡು ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತ ಪ್ರಾಥಮಿಕ‌ ತನಿಖೆಯಲ್ಲಿ ಅವರು ಅಸಮರ್ಪಕ ಉತ್ತರ ನೀಡಿದ್ದಾರೆ ಮತ್ತು ಯಾವುದೇ ದಾಖಲೆ‌ ನೀಡಿಲ್ಲ. ಹೀಗಾಗಿ ಅವರ ವಿರುದ್ಧ […]

Continue Reading

ಆಸ್ತಿ ಖರೀದಿದಾರರಿಗೆ ಬಿಗ್ ಶಾಕ್.! ಭೂಮಿ, ನಿವೇಶನ, ಸ್ಥಿರಾಸ್ತಿಗಳ ಮೌಲ್ಯ ಸದ್ಯದಲ್ಲೇ ದುಬಾರಿ. ದರ ಪರಿಷ್ಕರಣೆಗೆ ಮುಂದಾದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರವು ಆಸ್ತಿ ಖರೀದಿದಾರರಿಗೆ ಬಿಗ್ ಶಾಕ್ ನೀಡಿದ್ದು, ರಾಜ್ಯದಲ್ಲಿ ಭೂಮಿ, ನಿವೇಶನ, ಕಟ್ಟಡ ಸೇರಿ ಸ್ಥಿರಾಸ್ತಿಗಳ ಮೌಲ್ಯ ಸದ್ಯದಲ್ಲೇ ದುಬಾರಿಯಾಗಲಿದ್ದು, ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಹೌದು, ಮಾರುಕಟ್ಟೆ ಮೌಲ್ಯ ಹಾಗೂ ಮಾರ್ಗಸೂಚಿ ದರ ನಡುವೆ ಹೆಚ್ಚಿರುವ ಅಂತರ ತಗ್ಗಿಸಲು ಆಸ್ತಿಗಳ ಮೌಲ್ಯ ಪರಿಷ್ಕರಣೆ ಸಿದ್ಧತಾ ಕಾರ್ಯ ಪೂರ್ಣಗೊಂಡಿದ್ದು, ನಾಳೆ ಪರಿಷ್ಕೃತ ಮಾರ್ಗಸೂಚಿ ದರ ಕರಡು ಪ್ರಕಟವಾಗಲಿದೆ.ಈ ಮೂಲಕ ಸ್ಥಿರಾಸ್ತಿ ಮೌಲ್ಯವನ್ನು ಸರಾಸರಿ ಶೇಕಡಾ 30 ರಷ್ಟು ಹೆಚ್ಚಳ ಮಾಡಲಾಗುತ್ತಿದೆ. ಬೆಂಗಳೂರು […]

Continue Reading

ಎಚ್ ಎಸ್ ಆರ್ ಪಿ ಆದೇಶ ಕಾನೂನು ಬಾಹಿರ

ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ ಎಸ್ ಆರ್ ಪಿ) ಅಳವಡಿಕೆ ಕುರಿತ ಸರಕಾರದ ಆದೇಶವು ಕಾನೂನು ಬಾಹಿರ ಎಂದು ಕರ್ನಾಟಕ ವಾಹನ ನಂಬರ್ ಪ್ಲೇಟ್ಸ್ ತಯಾರಕರು ಮತ್ತು ಮಾರಾಟಗಾರರ ಸಂಘವು ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಸುಮಾರು 25 ಸಾವಿರ ಜನರು ವಾಹನಗಳಿಗೆ ಎಚ್ ಎಸ್ ಆರ್ ಪಿ ಅಳವಡಿಸುವ ಕೆಲಸ ಮಾಡುತ್ತಿದ್ದಾರೆ. ವಾಹನ ತಯಾರಕರ ಡೀಲರ್ಸ್ ಶಿಪ್ ನೆಟ್ವರ್ಕ್ ಮೂಲಕ ಮಾತ್ರ ಎಚ್ ಎಸ್ ಆರ್ ಪಿ ಅಳವಡಿಸಿಕೊಳ್ಳಬೇಕೆಂದು ಸರಕಾರ ಸೂಚಿಸಿದೆ. ಸರಕಾರ, ಬೆರೆಳೆಣಿಕೆ […]

Continue Reading

2019-2021ರ ಅವಧಿಯಲ್ಲಿ 13 ಲಕ್ಷಕ್ಕೂ ಹೆಚ್ಚು ಮಹಿಳೆಯರು, ಬಾಲಕಿಯರು ನಾಪತ್ತೆ.!

ಕರ್ನಾಟಕ ರಾಜ್ಯದಿಂದ 40 ಸಾವಿರಕ್ಕೂ ಮಿಕ್ಕ ಮಹಿಳೆಯರು, ಯುವತಿಯರು ಕಣ್ಮರೆ.! ಇಡೀ ದೇಶವನ್ನೇ ಬೆಚ್ಚಿ ಬೀಳಿಸುವ ಅಘಾತಕಾರಿ ವರದಿಯೊಂದನ್ನು ಕೇಂದ್ರ ಸರಕಾರದ ಗೃಹ ಇಲಾಖೆ ಬಿಡುಗಡೆಗೊಳಿಸಿದೆ. ಸರಿ-ಸುಮಾರು 3 ವರ್ಷಗಳ ಅವಧಿಯಲ್ಲಿ 13 ಲಕ್ಷಕ್ಕೂ ಹೆಚ್ಚು ಮಹಿಳೆಯರು, ಬಾಲಕಿಯರು ನಾಪತ್ತೆಯಾಗಿದ್ದಾರೆ. ​ಕರ್ನಾಟಕ ರಾಜ್ಯವೊಂದರಲ್ಲಿಯೇ 40 ಸಾವಿರಕ್ಕೂ ಮಿಕ್ಕ ಮಹಿಳೆಯರು, ಯುವತಿಯರು ಕಣ್ಮರೆಯಾಗಿದ್ದಾರೆ. ದೇಶದಲ್ಲಿಯೇ ಅತೀ ಹೆಚ್ಚು ಮಹಿಳೆಯರ, ಬಾಲಕಿಯರ, ಯುವತಿಯರ ಕಣ್ಮರೆ ಪ್ರಕರಣ ಮಧ್ಯಪ್ರದೇಶದಲ್ಲಿ ದಾಖಲಾಗಿ ಒಂದನೇ ಸ್ಥಾನದಲ್ಲಿದೆ. ಮಹಿಳೆಯರ, ಯುವತಿಯ ನಾಪತ್ತೆ ಪ್ರಕರಣದಲ್ಲಿ ಪಶ್ಚಿಮ ಬಂಗಾಲ […]

Continue Reading

ಪ್ರಜ್ವಲ್ ಬಳಿಕ ಈಗ ರೇವಣ್ಣ ಮೇಲೂ ಅನರ್ಹತೆ ತೂಗುಗತ್ತಿ: ಸಮನ್ಸ್ ಜಾರಿಗೆ ಹೈಕೋರ್ಟ್ ಆದೇಶ

ಚುನಾವಣೆ ವೇಳೆ ಅಕ್ರಮ ಎಸಗಿರುವ ಆರೋಪದ ಮೇಲೆ ಹೊಳೆನರಸೀಪುರ ಕ್ಷೇತ್ರದ ಹೆಚ್ ಡಿ ರೇವಣ್ಣ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸುವಂತೆ ಕೋರಿರುವ ಅರ್ಜಿ ಸಂಬಂಧ, ವಿಧಾನಸಭೆ ಕಾರ್ಯದರ್ಶಿ ಮೂಲಕ ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಈ ಮೂಲಕ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಬಳಿಕ, ಈಗ ಹೆಚ್ ಡಿ ರೇವಣ್ಣ ಮೇಲೂ ಅನರ್ಹತೆ ತೂಗುಗತ್ತಿ ನೇತಾಡುವಂತೆ ಆಗಿದೆ. ಹೆಚ್ ಡಿ ರೇವಣ್ಣ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದ ದೇವರಾಜೇಗೌಡ ಅವರು ಸಲ್ಲಿಸಿದಂತಹ ಚುನಾವಣಾ ತಕರಾರು ಅರ್ಜಿಯ […]

Continue Reading

ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಪೊಲೀಸರ ಯಶಸ್ವಿ ಸಾಧನೆ; ಸಾವುಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ!

ಮೈಸೂರು ಪ್ರವೇಶ ನಿಯಂತ್ರಿತ ಹೆದ್ದಾರಿಯಲ್ಲಿ ಹಲವಾರು ಕ್ರಮಗಳನ್ನು ಅಳವಡಿಸಿಕೊಂಡ ನಂತರ, ಸಾವಿನ ಸಂಖ್ಯೆ ಕಡಿಮೆಯಾಗಿದೆ. ಮೇ ತಿಂಗಳಲ್ಲಿ ಸಾವಿನ ಸಂಖ್ಯೆ 29 ಆಗಿತ್ತು, ಇದು ಆಗಸ್ಟ್‌ನಲ್ಲಿ 6ಕ್ಕೆ ಇಳಿದಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸುತ್ತಿದ್ದ ಸಾವು-ನೋವುಗಳನ್ನು ಕಡಿಮೆ ಮಾಡಲು ನಮ್ಮ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ. ಸಾವಿನ ಸಂಖ್ಯೆ ಮೇ ತಿಂಗಳಲ್ಲಿ 29, ಜೂನ್‌ನಲ್ಲಿ 28, ಜುಲೈನಲ್ಲಿ 8 ಮತ್ತು ಆಗಸ್ಟ್‌ನಲ್ಲಿ 6ಕ್ಕೆ ಇಳಿದಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. […]

Continue Reading

ಕಾಂಗ್ರೆಸ್ ಪಕ್ಷ ಮುಸ್ಲಿಮರನ್ನು ರಬ್ಬರ್ ಸ್ಟ್ಯಾಂಪ್ ತರ ಬಳಸುತ್ತಿದೆಯೇ.?

ಕಾಂಗ್ರೆಸ್ ‘ಕೈ’ ಹಿಡಿದ ಮುಸ್ಲಿಂ ಸಮುದಾಯಕ್ಕೆ ನಿಗಮ ಮಂಡಳಿ, ರಾಜ್ಯ,ಜಿಲ್ಲಾ,ಬ್ಲಾಕ್ ಮಟ್ಟದಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒಕ್ಕೊರಲ ಕೂಗು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರಲು ಮುಸ್ಲಿಂ ಸಮುದಾಯ ಕಾರಣವಾಗಿದ್ದು, ಶೇಕಡ 90% ರಷ್ಟು ಮುಸ್ಲಿಂ ಸಮುದಾಯದ ಮತಗಳು ಒಗ್ಗಟ್ಟಾಗಿ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಚಲಾವಣೆಯಾಗಿರುವುದು ಎಲ್ಲಾ ಅಂಕಿ ಅಂಶಗಳು ಸ್ಪಷ್ಟವಾಗಿದೆ. ಅಧಿಕಾರದಲ್ಲಿದ್ದ ಬಿಜೆಪಿಯ ಕೋಮು ಧ್ರುವೀಕರಣದಿಂದ ಬೇಸತ್ತು ಪ್ರತಿ ವಿಧಾನಸಭಾ ವ್ಯಾಪ್ತಿಯಲ್ಲಿ ಬಿಜೆಪಿ ಯನ್ನು ಸೋಲಿಸುವ ಏಕೈಕ ಅಜೆಂಡಾವನ್ನು ಇಟ್ಟು ಈ ಬಾರಿ ಮುಸ್ಲಿಂ […]

Continue Reading

ಸುರತ್ಕಲ್ ಟೋಲ್ ಗೇಟ್ ಗೆ ಹೋರಾಟ ಸಮಿತಿ ನಿಯೋಗ ಭೇಟಿ, ನಿರುಪಯೋಗಿ ಟೋಲ್ ಬೂತ್ ತೆರವಿಗೆ ಆಗ್ರಹ

ಏಳು ವರ್ಷಗಳ ಸತತ ಹೋರಾಟದ ತರುವಾಯ 9 ತಿಂಗಳ ಹಿಂದೆ ಮುಚ್ಚಲ್ಪಟ್ಟ ಸುರತ್ಕಲ್ ಟೋಲ್ ಕೇಂದ್ರದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ನಿರುಪಯೋಗಿ ಟೋಲ್ ಬೂತ್ ತೆರವುಗೊಳಿಸದೆ, ಟೋಲ್ ಕೇಂದ್ರವನ್ನು ಕಾಂಕ್ರಿಟೀಕರಣ ಗೊಳಿಸಿ ಅಭಿವೃದ್ದಿಗೊಳಿಸುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಅಸಮಾಧಾನ, ಟೋಲ್ ಸಂಗ್ರಹ ಮತ್ತೆ ಶುರುವಾಗುವ ವದಂತಿ, ಆತಂಕ ವ್ಯಕ್ತವಾಗಿತ್ತು. ಹೋರಾಟ ಸಮಿತಿಗೂ ಈ ಕುರಿತು ಹಲವು ದೂರುಗಳು ಬಂದಿತ್ತು. ಶಿಥಿಲಾವಸ್ಥೆಗೆ ತಲುಪಿರುವ ನಿರುಪಯೋಗಿ ಟೋಲ್ ಬೂತ್ ತೆರವುಗೊಳಿಸುವಂತೆ ಹೋರಾಟ ಸಮಿತಿಯು ಹಲವು ಬಾರಿ ಒತ್ತಾಯಮಾಡಿತ್ತು. ಆದರೆ ನಾಗರಿಕರ […]

Continue Reading