ಭ್ರಷ್ಟಾಚಾರ ಆರೋಪ ಹೊತ್ತಿರುವ ಪಿಡಿಒಗಳ ವಿರುದ್ಧ ತನಿಖೆ ತೀವ್ರಗೊಳಿಸಿ: ಸಚಿವ ಪ್ರಿಯಾಂಕ್ ಖರ್ಗೆ

ಆಯಾ ಜಿಲ್ಲಾ ಕೇಂದ್ರಗಳಲ್ಲಿರುವ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಕ ಅಧಿಕಾರಿ(ಸಿಇಒ)ಗಳು ಗ್ರಾಮ ಮಟ್ಟದಲ್ಲಿ ಕಡ್ಡಾಯ ವೈಯಕ್ತಿಕ ಪರಿಶೀಲನೆ, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒಗಳ ಮೇಲಿನ ತನಿಖೆಯನ್ನು ತೀವ್ರಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತಿ ಸಿಇಒಗಳು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ […]

Continue Reading

ಚಿಕಿತ್ಸೆ ವೇಳೆ ನಿರ್ಲಕ್ಷ್ಯ ತೋರಬಾರದು. ಇದು ಅಕ್ಷಮ್ಯ. ಅಂತಹ ಪ್ರಕರಣಗಳು ಕಂಡು ಬಂದರೆ ನಿರ್ಧಾಕ್ಷಿಣ್ಯ ಕ್ರಮ: ದಿನೇಶ್ ಗುಂಡೂರಾವ್

ರಾಜ್ಯ ಸರಕಾರದ ಯಾವುದೇ ಆಸ್ಪತ್ರೆಗಳಲ್ಲಿ ವೈದ್ಯರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷತನದಿಂದ ರೋಗಿಗಳ ಸಾವು – ನೋವು ಸಂಭವಿಸಿದರೆ ತಾವು ಸಹಿಸುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಆರೋಗ್ಯ ಸೌಧದಲ್ಲಿಂದ ಜಿಲ್ಲಾ ಆರೋಗ್ಯಾಧಿಕಾರಿಗಳು ಮತ್ತು ಹಿರಿಯ ಆರೋಗ್ಯ ಅಧಿಕಾರಿಗಳ ಸಭೆ ನಡೆಸಿ ಸರಕಾರಿ ಆಸ್ಪತ್ರೆಗೆ ಬರುವ ರೋಗಿಗಳ ಚಿಕಿತ್ಸೆ ಬಗ್ಗೆ ತಮ್ಮ ಸರಕಾರದ ಆದ್ಯತೆಗಳನ್ನು ತಿಳಿಸಿಕೊಟ್ಟರು.ಎಲ್ಲ ರೋಗಿಗಳಿಗೆ ಮಾನವೀಯ ದೃಷ್ಠಿಕೋನದಿಂದ ಚಿಕಿತ್ಸೆ ನೀಡಬೇಕು.ಕರ್ತವ್ಯದ […]

Continue Reading

ವಿಜೃಂಭಿಸುತ್ತಿದೆ ಕರ್ನಾಟಕ ಮಾಡೆಲ್. ಯುಪಿ, ದೆಹಲಿ, ಗುಜರಾತ್ ಮಾಡೆಲ್ ಗಳು ಠುಸ್..

ದೇಶದೆಲ್ಲೆಡೆ ಗುಜರಾತ್ ಮಾಡೆಲ್ ಸದ್ದು ಮಾಡುತ್ತಿದ್ದ ದಿನಗಳಿದ್ದವು. ಬಿಜೆಪಿ ಗುಜರಾತ್ ಮಾಡೆಲ್ ತೋರಿಸುತ್ತಾ ವಿವಿಧ ರಾಜ್ಯಗಳಲ್ಲಿ ಅಧಿಕಾರದ ಗದ್ದುಗೆ ಪಡೆದಿತ್ತು. ಎಲ್ಲಿ ನೋಡಿದರೂ ಗುಜರಾತ್ ಮಾಡೆಲ್ ನದ್ದೆ ಸದ್ದು. ಆದರೆ ಗುಜರಾತ್ ಮಾಡೆಲ್ ಕೇವಲ ಠುಸ್ ಪಟಾಕಿ ಅನ್ನುವುದು ಜಗಜ್ಜಾಹೀರು ಆಗುವಾಗ ಬಿಜೆಪಿ ಚುನಾವಣೆಗಳಲ್ಲಿ ಭಾರೀ ಲಾಭವೇ ತಂದುಕೊಟ್ಟಿದ್ದವು. ಆನಂತರ ಯುಪಿ ಮಾಡೆಲ್ ಎಂದು ತೋರಿಸುತ್ತಾ ಬಿಜೆಪಿ ಹಲವು ರಾಜ್ಯಗಳಲ್ಲಿ ಪ್ರಚಾರವನ್ನೇ ಮಾಡಿತ್ತು. ಆದರೆ ಇತ್ತ ದೆಹಲಿ ಮಾಡೆಲ್ ಅಭಿವೃದ್ಧಿಯಲ್ಲಿ ಹೊಸ ಶಕೆ ಬರೆದರೂ ಗಮನಾರ್ಹ ರೀತಿಯಲ್ಲಿ […]

Continue Reading

ಸ್ನೇಹಿತರಿಂದಲೇ ಯುವತಿಯ ಅತ್ಯಾಚಾರ, ಇಬ್ಬರ ಬಂಧನ

ಸ್ನೇಹಿತರಿಂದಲೇ ಯುವತಿಯ ಅತ್ಯಾಚಾರ ನಡೆದಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.ಯುವತಿಯ ಪ್ರಿಯಕರ ಹಾಗೂ ಆತನ ಸ್ನೇಹಿತ ಸೇರಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 6ರಂದು ಈ ಘಟನೆ ನಡೆದಿದ್ದು, ಗಿರಿನಗರ ಪೊಲೀಸರು ಸದ್ಯ ಪುರುಷೋತ್ತಮ್ ಹಾಗೂ ಚೇತನ್ ಎನ್ನುವ ಆರೋಪಿಗಳನ್ನು ಬಂಧಿಸಿದ್ದಾರೆ.ಮೊಬೈಲ್ ಕೊಡಿಸುವುದಾಗಿ ಪುಸಲಾಯಿಸಿ ಪುರುಷೋತ್ತಮ್, ತನ್ನ ಪ್ರೇಯಸಿಯನ್ನು ರೂಮ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ. ಪುರುಷೋತ್ತಮ್ ಹಾಗೂ ಯುವತಿ ತುಮಕೂರು ಜಿಲ್ಲೆ ಕೊರಟಗೆರೆ ಮೂಲದವರು. ಒಂದು ವರ್ಷದಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ […]

Continue Reading

ಲೋಕಸಭೆ ಚುನಾವಣೆಗೆ ‘BJP-JDS’ ಮೈತ್ರಿ..? ತೀವ್ರ ಕುತೂಹಲ ಮೂಡಿಸಿದ ಎಚ್.ಡಿ ಕುಮಾರಸ್ವಾಮಿ ನಡೆ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಹೀನಾಯ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅನ್ನು ಕಟ್ಟಿಹಾಕಲು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಭಾರೀ ಚರ್ಚೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಮತಗಳ ಕ್ರೂಢೀಕರಣಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದು, ಈಗಾಗಲೇ ಈ ಬಗ್ಗೆ ಹಲವು ಮಾತುಕತೆಗಳೂ ಸಹ ನಡೆದಿದ್ದು, ಮೈತ್ರಿ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆದಿದೆ. 20-22 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ದಿಸಿದರೆ 6-8 ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷ ಸ್ಪರ್ಧೆಗೆ ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ. […]

Continue Reading

ಒಂದಕ್ಕಿಂತ ಹೆಚ್ಚು ಮೀಟರ್ ಇದ್ದರೆ ಒಂದಕ್ಕೆ ಮಾತ್ರ ಉಚಿತ; ಬಾಡಿಗೆ ಮನೆಯವರಿಗೆ ಶಾಕ್.!

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹ ಜ್ಯೋತಿ’ ಯೋಜನೆಯ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ. ಈ ಯೋಜನೆಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹೊಸ ನಿಬಂಧನೆ ಹಾಕಿದ್ದು, ಯೋಜನೆಯ ಲಾಭ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.ಅಲ್ಲದೇ ಗೃಹ ವಿದ್ಯುತ್ ಬಳಕೆದಾರರಲ್ಲಿ ಒಂದಕ್ಕಿಂತ ಹೆಚ್ಚಿನ ಮೀಟರ್ ಇದ್ದಲ್ಲಿ ಒಂದು ಮೀಟರ್ ಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಈ ಮೂಲಕ ಬಾಡಿಗೆ ಮನೆಯವರಿಗೆ ಶಾಕ್ ನೀಡಲಾಗಿದೆ. ಇದರಿಂದಾಗಿ 200 ಯೂನಿಟ್ ವಿದ್ಯುತ್ ಬಳಸಬಹುದು ಎಂದುಕೊಂಡಿದ್ದ ಬಾಡಿಗೆದಾರರು […]

Continue Reading

ಭ್ರಷ್ಟ ಅಧಿಕಾರಿಗಳ ಅಮಾನತಿಗೆ ಡಿಸಿಎಂ, ಡಿ.ಕೆ.ಶಿವಕುಮಾರ್ ಆದೇಶ

ಬೆಂಗಳೂರು:ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿ,ಅನುಷ್ಠಾನಕ್ಕೆ ತಂದ ಎಲ್ಲಾ ಅಧಿಕಾರಿಗಳನ್ನು,ಇಂಜಿನಿಯರ್ ಗಳನ್ನು ಇವತ್ತು ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದ್ದಾರೆ.. ಈ ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು.? ಯಾತಕ್ಕಾಕಗಿ ಇದನ್ನು ಮಾಡಿದಿರಿ.? ಯಾರಿಗೆ ಅನುಕೂಲ ಮಾಡಿಕೊಡಲು […]

Continue Reading

200 ಯುನಿಟ್ ಉಚಿತ ಕರೆಂಟ್. ಲೆಕ್ಕಾಚಾರ ತಪ್ಪಿದರೆ ಶಾಕ್ ಗ್ಯಾರಂಟಿ.!

ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಇದೀಗ ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ನೀಡಿದ್ದ ‘ಗ್ಯಾರಂಟಿ’ ಆಶ್ವಾಸನೆಗಳನ್ನು ಹಂತ ಹಂತವಾಗಿ ಜಾರಿಗೊಳಿಸುವ ನಿರ್ಧಾರವನ್ನು ಮಾಡುತ್ತಿದೆ.ಚುನಾವಣಾ ಪ್ರನಾಳಿಕೆಯಲ್ಲಿ ನೀಡಿರುವ ಐದು ಗ್ಯಾರಂಟಿಗಳ ಪೈಕಿ ಇದೀಗ ಅತೀ ಹೆಚ್ಚು ಚರ್ಚೆಗೆ ಒಳಗಾಗಿರುವುದು 200 ಯುನಿಟ್ ಉಚಿತ ಕರೆಂಟ್. ಇದರ ಲೆಕ್ಕಾಚಾರ ಇನ್ನೂ ಸ್ಪಷ್ಟವಾಗಿಲ್ಲದ ಕಾರಣ ಈ ವಿಚಾರದಲ್ಲಿ ಜನಸಾಮಾನ್ಯರಲ್ಲಿ ಸ್ವಲ್ಪ ಗೊಂದಲ ಮುಂದುವರೆದಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದ ಸುದ್ದಿಗೋಷ್ಠಿಯಲ್ಲಿ ಹೇಳಿರುವ ಪ್ರಕಾರ, ಪ್ರತೀ ತಿಂಗಳು ವಿದ್ಯುತ್ […]

Continue Reading

ರಾಜೀವ್ ಗಾಂಧಿ ಆರೋಗ್ಯ ವಿವಿ ಹಗರಣ; ಅಕ್ರಮಗಳ ಸರದಾರ ಡಾ.ರಾಮಕೃಷ್ಣ ರೆಡ್ಡಿ ವಿರುದ್ಧ ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯದ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ಇದೀಗ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ಕುಲಸಚಿವರಾಗಿರುವ ಪ್ರೊ.ಡಾ.ರಾಮಕೃಷ್ಣ ರೆಡ್ಡಿ ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಅಧಿಕಾರ ದುರುಪಯೋಗದ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರುಗಳು ದಾಖಲಾಗಿದ್ದರೂ ಹಿಂದಿನ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ. ರಾಮಕೃಷ್ಣ ರೆಡ್ಡಿ ಅವರು ನಡೆಸಿರುವ ಅಕ್ರಮದ ಬಗ್ಗೆ ಸ್ವತಃ ಸರ್ಕಾರದ ಒಂದು ಇಲಾಖೆಯೇ ವರದಿ ನೀಡಿದ್ದರೂ ಅತ್ಯಂತ ಪ್ರಭಾವಿ ಸ್ಥಾನದಲ್ಲಿರುವ ಈ […]

Continue Reading

ಶವ ಸಂಭೋಗ ಅತ್ಯಾಚಾರವಲ್ಲ, ಶಿಕ್ಷಾರ್ಹ ಅಪರಾಧವಲ್ಲ: ಕರ್ನಾಟಕ ಹೈಕೋರ್ಟ್

ಮೃತ ಮಹಿಳೆಯ ಮೇಲಿನ ಅತ್ಯಾಚಾರವು ಐಪಿಸಿ ಸೆಕ್ಷನ್ 376 ರ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗುವುದಿಲ್ಲ ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ‘ಡೆಡ್ ಬಾಡಿ’ ಎಂಬ ಪದವನ್ನು ಪರಿಚಯಿಸಲು ಈ ಸೆಕ್ಷನ್ ಗೆ ತಿದ್ದುಪಡಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮೃತದೇಹಗಳ ಜೊತೆ ಸಂಭೋಗ ನಡೆಸುವವರಿಗೆ ಅತ್ಯಾಚಾರ ಅ‍ಪರಾಧದ ಅಡಿಯಲ್ಲಿ ಶಿಕ್ಷೆ ವಿಧಿಸುವ ಅವಕಾಶ ಇಲ್ಲದಿರುವ ಕಾರಣ, ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 377ಕ್ಕೆ (ಅಸ್ವಾಭಾವಿಕ ಲೈಂಗಿಕ ಅಪರಾಧಗಳು) ತಿದ್ದುಪಡಿ ತರಬೇಕು ಅಥವಾ ಈ […]

Continue Reading