ಸಂವಿದಾನ ಬದ್ಧ ರಾಜಕೀಯ ವ್ಯವಸ್ಥೆಯಲ್ಲಿ ಕುಟುಂಬ ರಾಜಕಾರಣವೆಂಬ ಕಳಂಕ

“ವಂಶಪಾರಂಪರ್ಯ ಜಾಗೀರು”ಗಳಂತಾಗಿರುವ ಕ್ಷೇತ್ರಗಳು ಮುಕ್ತವಾಗಿ, ಸಾಮಾನ್ಯ ನಾಗರಿಕನೂ ದೇಶದ ಉನ್ನತ ಪೀಠವನ್ನೇರಲು ಸಾಧ್ಯವಾಗಬೇಕು ✍️. ಇಸ್ಮಾಯಿಲ್ ಎಸ್. ನ್ಯಾಯವಾದಿಗಳು, ಮಂಗಳೂರು. ಮೊದಲ ಪುಲಕೇಶಿ, ಎರಡನೇ ಪುಲಕೇಶಿ… ಒಂದನೇ ಕೃಷ್ಣದೇವರಾಜ, ಎರಡನೇ ಕೃಷ್ಣದೇವರಾಜ, ಮೂರನೇ …. ಹೀಗೆಯೇ ಈ ಪಟ್ಟಿ ಮುಂದುವರಿಯುತ್ತದೆ. ಇತಿಹಾಸದ ಪುಟಗಳನ್ನು ತಿರುವುತ್ತಾ ಸಾಗಿದಲ್ಲಿ ಇಂತಹ ಸಾವಿರಾರು ಉದಾಹರಣೆಗಳು ಸಿಗುತ್ತವೆ. ಜಗತ್ತಿನ ವಿವಿಧ ಭಾಗಗಳಲ್ಲಿ ಆಳಿದ ರಾಜ ವಂಶಗಳು ಹಾಗೂ ಸದ್ರಿ ರಾಜವಂಶಗಳಿಂದ ಬಂದಿರುವ ಹಿರಿ-ಕಿರಿಯ ರಾಜರುಗಳ ಬಹುದೊಡ್ಡ ಉದಾಹರಣೆಗಳಿವೆ. ಆದರೆ ಆಧುನಿಕ ಜನಗತ್ತಿನಲ್ಲಿ ರಾಜರುಗಳಿಗೆ […]

Continue Reading

ವಿವಾಹಿತ ಪುರುಷ ವಯಸ್ಕ ಮಹಿಳೆಯೊಂದಿಗೆ ಸಮ್ಮತಿಯ ಲಿವ್-ಇನ್ ಸಂಬಂಧ ಅಪರಾಧವಲ್ಲ: ಅಲಹಬಾದ್ ಹೈಕೋರ್ಟ್

ವಿವಾಹಿತ ಪುರುಷ ವಯಸ್ಕ ಮಹಿಳೆಯೊಂದಿಗೆ ಸಮ್ಮತಿಯ ಲಿವ್-ಇನ್ ಸಂಬಂಧದಲ್ಲಿ ತೊಡಗಿರುವುದು ಅಪರಾಧವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಉತ್ತರ ಪ್ರದೇಶದ ಶಹಜಹಾನ್‌ಪುರದ ದಂಪತಿಗಳು ಸಲ್ಲಿಸಿದ್ದ ಕ್ರಿಮಿನಲ್ ರಿಟ್ ಅರ್ಜಿಯ ವಿಚಾರಣೆಯಲ್ಲಿ ಅಲಹಾಬಾದ್ ಹೈಕೋರ್ಟ್ ಈ ಮಹತ್ವದ ಹೇಳಿಕೆ ನೀಡಿದೆ. ವಯಸ್ಕ ಮಹಿಳೆಯೊಂದಿಗೆ ಸಮ್ಮತಿಯ ಲಿವ್-ಇನ್ ಸಂಬಂಧದಲ್ಲಿ ಭಾಗವಹಿಸಿದ್ದಕ್ಕಾಗಿ ವಿವಾಹಿತ ಪುರುಷನ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಮಾತ್ರವಲ್ಲದೇ ಬಂಧನದ ಭಯವನ್ನು ರದ್ದುಗೊಳಿಸಿ ಬೆದರಿಕೆಗಳನ್ನು ಎದುರಿಸುತ್ತಿರುವ ದಂಪತಿಗಳಿಗೆ ಪೊಲೀಸ್ ರಕ್ಷಣೆಯನ್ನು ಆದೇಶಿಸಿರುವುದರಿಂದ ಕಾನೂನನ್ನು ನೈತಿಕತೆಯಿಂದ […]

Continue Reading

‘ಮೋದಿ ಭಾರತ’ದಲ್ಲಿ ಬೀಫ್ ಮಾಂಸ ರಫ್ತಿನಲ್ಲಿ ಸಾರ್ವಕಾಲಿಕ ದಾಖಲೆ.!

ಐದು ವರ್ಷಗಳಲ್ಲಿ 3.22 ಶತಕೋಟಿ ಡಾಲರ್ ನಿಂದ 4.16 ಶತಕೋಟಿ ಡಾಲರ್ ಗೆ ಜಂಪ್: ಸಂಸತ್ತಿನಲ್ಲಿ ಅಧಿಕೃತ ಹೇಳಿಕೆ ಕಳೆದ ಐದು ವರ್ಷಗಳಲ್ಲಿ ಭಾರತದ ಮಾಂಸ ರಫ್ತಿನ ಪ್ರಮಾಣ 3.22 ಶತಕೋಟಿ ಡಾಲರ್ ನಿಂದ 4.16 ಶತಕೋಟಿ ಡಾಲರ್ ಗೆ ಏರಿದೆ ಎಂದು ಕೇಂದ್ರ ಸರಕಾರ ಸಂಸತ್ ನಲ್ಲಿ ಹೇಳಿದೆ. ಮಾಂಸ ರಫ್ತಿನ ಪ್ರಮಾಣದ ಕುರಿತು ಸಿಪಿಐಎಂ ಪಕ್ಷ ಸಂಸದ ಜಾನ್ ಬ್ರಿಟ್ಟಾಸ್ ಕೇಳಿದ ಪ್ರಶ್ನೆಗೆ ವಾಣಿಜ್ಯ ಮತ್ತು ಕೈಗಾರಿಕಾ ಖಾತೆಯ ಸಹಾಯಕ ಸಚಿವ ಜಿತಿನ್ ಪ್ರಸಾದ್ […]

Continue Reading

ದುಡ್ಡು ಕೊಟ್ಟರೆ ಸಿಗುತ್ತೆ ಶುದ್ಧ ಗಾಳಿ.!, ಟ್ರೆಂಡ್ ಆಗುತ್ತಿದೆ ಶುದ್ಧವಾದ ಗಾಳಿ ನೀಡುವ ಚಿಕಿತ್ಸಾಲಯಗಳು

ದುಡ್ಡು.. ದುಡ್ಡು ಪ್ರಪಂಚದಲ್ಲಿ ದುಡ್ಡು ಇಲ್ಲದೆ ಏನೂ ನಡೆಯಲ್ಲ. ಕೊನೆಗೆ ದುಡ್ಡು ಇಲ್ಲದಿದ್ದರೆ ಒಳ್ಳೆಯ ಗಾಳಿ ಕೂಡ ಸಿಗಲ್ಲ ಎಂಬ ಸ್ಥಿತಿ ನಿರ್ಮಾಣವಾಗುತ್ತಿದೆ. ಅದರಲ್ಲೂ ದೇಶದ ಕೆಲವು ರಾಜಧಾನಿಗಳಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಾ ಇದ್ದು, ವಾತಾವರಣ ಮಾಲಿನ್ಯದಿಂದ ಆತಂಕ ಮೂಡಿಸುತ್ತಿದೆ. ಕೆಲವೇ ವರ್ಷಗಳ ಹಿಂದೆ ಮೆಟ್ರೋ ಪೊಲಿಟಿ ಸಿಟಿಗಳಲ್ಲಿ ಅತ್ಯಂತ ಶುದ್ಧ ಗಾಳಿಯನ್ನು ಉಸಿರಾಡುತ್ತಿದ್ದ ಜನರಿಗೆ ಇದೀಗ ವಾಯು ಮಾಲಿನ್ಯದ ಪರಿಣಾಮ ದೊಡ್ಡ, ದೊಡ್ಡ ಆರೋಗ್ಯದ ಸಮಸ್ಯೆಗಳು ಎದುರಾಗುತ್ತಿವೆ. ಇಂತಹ ಸಂದರ್ಭದಲ್ಲೇ 4,000 ರೂಪಾಯಿ ಕೊಟ್ಟರೆ […]

Continue Reading

ಏಪ್ರಿಲ್ ಒಂದರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ (NHIA) ಟೋಲ್ ದರ ಏರಿಕೆಯ ಬಿಸಿ.!

ವಾಹನ ಸವಾರರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವ್ಯಾಪ್ತಿಗೆ ಬರುವ ಕರ್ನಾಟಕದ ಒಟ್ಟು 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು ಹೆಚ್ಚಿಸಲಾಗಿದ್ದು, ಈ ಹೊಸ ದರಗಳು ಏಪ್ರಿಲ್ ಒಂದರಿಂದ ಜಾರಿಗೆ ಬರಲಿವೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸಂಚರಿಸುವವರಿಗೆ ಈ ದರ ಏರಿಕೆ ದೊಡ್ಡ ಹೊರೆಯಾಗಲಿದೆ. ಪ್ರತಿ ವರ್ಷ ಹಣದುಬ್ಬರ ಮತ್ತು ಸಗಟು ಬೆಲೆ ಸೂಚ್ಯಂಕವನ್ನು ಆಧರಿಸಿ ಟೋಲ್ ದರಗಳನ್ನು ಪರಿಷ್ಕರಿಸಲಾಗುತ್ತದೆ. ರಸ್ತೆಗಳ ನಿರ್ವಹಣೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ಈ ಹೆಚ್ಚಳ ಅನಿವಾರ್ಯ ಎಂದು NHAI […]

Continue Reading

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಭಾರೀ ಶಾಕ್ ನೀಡಲಿದೆ ಟಿಸಿಎಂ; ಬಿಗಿಯಾದ ಸ್ಪರ್ಧೆಯ ಭವಿಷ್ಯ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. 294 ಸ್ಥಾನಗಳ ಹೋರಾಟದಲ್ಲಿ ಟಿಎಂಸಿ ಮುನ್ನಡೆ ಸಾಧಿಸಿದೆ ಮತ್ತು ಬಿಜೆಪಿ ಹಿಂದಿದೆ ಎಂದು ಸಮೀಕ್ಷೆಯು ಭವಿಷ್ಯ ನುಡಿದಿದೆ. ಮ್ಯಾಟ್ರಿಜ್-ಐಎಎನ್‌ಎಸ್ ನಡೆಸಿದ ಅಭಿಪ್ರಾಯ ಸಮೀಕ್ಷೆಯು ಪಶ್ಚಿಮ ಬಂಗಾಳದಲ್ಲಿ ಬಿಗಿಯಾದ ಸ್ಪರ್ಧೆಯ ಭವಿಷ್ಯ ನುಡಿದಿದೆ. 294 ಸ್ಥಾನಗಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕಿಂತ ಹೆಚ್ಚಿನ ಮುನ್ನಡೆಯನ್ನು ಕಾಯ್ದುಕೊಳ್ಳಲಿದೆ ಎಂದು ಅಂದಾಜಿಸಲಾಗಿದೆ. ಸಮೀಕ್ಷೆಯ ಪ್ರಕಾರ, ಆಡಳಿತ ಪಕ್ಷವು ಮತ ​​ಹಂಚಿಕೆ ಮತ್ತು ಸ್ಥಾನಗಳಲ್ಲಿ ಸ್ಪಷ್ಟ ಮುನ್ನಡೆ ಸಾಧಿಸುವ ನಿರೀಕ್ಷೆಯಿದೆ, […]

Continue Reading

ಇತಿಹಾಸದ ಅತ್ಯಂತ ಮಹತ್ವದ ತೀರ್ಪು; ಮನುಷ್ಯನಿಗೆ ಬದುಕುವ ಹಕ್ಕು ಇರುವಂತೆ, ಘನತೆಯಿಂದ ಸಾಯುವುದು ಮೂಲಭೂತ ಹಕ್ಕು”: ಸುಪ್ರೀಂ ಕೋರ್ಟ್

ಭಾರತದ ನ್ಯಾಯಾಂಗ ಇತಿಹಾಸದಲ್ಲಿ ಅತ್ಯಂತ ಮಹತ್ವದ ತೀರ್ಪು. ಕಳೆದ ಹನ್ನೆರಡು ವರ್ಷಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಉತ್ತರ ಪ್ರದೇಶದ 32 ವರ್ಷದ ಯುವಕನಿಗೆ ‘ದಯಾಮರಣ’ ನೀಡಲು ಸುಪ್ರೀಂ ಕೋರ್ಟ್ ಬುಧವಾರದಂದು ಐತಿಹಾಸಿಕ ಆದೇಶ ಹೊರಡಿಸಿದೆ. ಇದು ಭಾರತದಲ್ಲಿ ಅಧಿಕೃತವಾಗಿ ದಯಾಮರಣಕ್ಕೆ ಅನುಮತಿ ನೀಡಿದ ಮೊದಲ ಪ್ರಕರಣವಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದ ಈ ಯುವಕ, 12 ವರ್ಷಗಳ ಹಿಂದೆ ಕಟ್ಟಡವೊಂದರಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದನು. ಅಂದಿನಿಂದ ಆತ ಸಂಪೂರ್ಣವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಕೇವಲ ಯಂತ್ರೋಪಕರಣಗಳ ಸಹಾಯದಿಂದ ಜೀವ ಹಿಡಿದಿದ್ದನು. […]

Continue Reading

ರಿಸರ್ವ್ ಬ್ಯಾಂಕ್ 2026 ರ ಕರಡು ತಿದ್ದುಪಡಿ; ಸೈಬರ್ ವಂಚಕರಿಗೆ ಇನ್ನು ಸುಲಭವಲ್ಲ. RBI ಹೊಸ ರೂಲ್ಸ್

ರಿಸರ್ವ್ ಬ್ಯಾಂಕ್ 2026 ರ ಕರಡು ಮೂರನೇ ಹೊಸ ತಿದ್ದುಪಡಿ ನಿರ್ದೇಶನಗಳನ್ನು ಬಿಡುಗಡೆ ಮಾಡಿದೆ, ಇದು ಎಲೆಕ್ಟ್ರಾನಿಕ್ ಬ್ಯಾಂಕಿಂಗ್ ವಹಿವಾಟುಗಳಲ್ಲಿ ವಂಚನೆಯನ್ನು ಎದುರಿಸುತ್ತಿರುವ ಗ್ರಾಹಕರಿಗೆ ಬಲವಾದ ಸುರಕ್ಷತಾ ಕ್ರಮಗಳನ್ನು ಪ್ರಸ್ತಾಪಿಸುತ್ತದೆ. ಇದು ಪ್ರಾಥಮಿಕವಾಗಿ ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್, ಡೆಬಿಟ್, ಕ್ರೆಡಿಟ್ ಕಾರ್ಡ್ ವಹಿವಾಟುಗಳು ಮತ್ತು ATM ವಹಿವಾಟುಗಳು ಸೇರಿದಂತೆ ಡಿಜಿಟಲ್ ಬ್ಯಾಂಕಿಂಗ್ ವಹಿವಾಟುಗಳಲ್ಲಿನ ವಂಚನೆಯಿಂದ ಬ್ಯಾಂಕ್ ಗ್ರಾಹಕರನ್ನು ರಕ್ಷಿಸುತ್ತದೆ. ಕರಡು ನಿರ್ದೇಶನಗಳು ಜುಲೈ ಒಂದು 2026 ಅಥವಾ ನಂತರ ನಡೆಸಿದ ವಹಿವಾಟುಗಳಿಗೆ ಅನ್ವಯಿಸುತ್ತವೆ. ಸಣ್ಣ ಮಟ್ಟದ […]

Continue Reading

ನರೇಂದ್ರ ಮೋದಿಯವರು ಕಟ್ಟಿರುವ ಬಿಜೆಪಿ ಕೋಟೆಗೆ ಮುಂದಿನ ಅಧಿಪತಿ ಯಾರು.? ನಮೋ ಸಾಮ್ರಾಜ್ಯದ ಉತ್ತರಾಧಿಕಾರಿ ಪಟ್ಟ ಯಾರಿಗೆ.?

ನರೇಂದ್ರ ಮೋದಿಯವರು ಕಟ್ಟಿರುವ ಬಿಜೆಪಿ ಕೋಟೆಗೆ ಮುಂದಿನ ಅಧಿಪತಿ ಯಾರು.? ನಮೋ ಸಾಮ್ರಾಜ್ಯದ ಉತ್ತರಾಧಿಕಾರಿ ಪಟ್ಟ ಯಾರಿಗೆ ಸಿಗಲಿದೆ.? ಎಂಬ ಚರ್ಚೆ ಈಗ ರಾಜಕೀಯ ವಲಯದಲ್ಲಿ ಪ್ರಾರಂಭವಾಗಿದೆ‌. ಮೋದಿ ಉತ್ತರಾಧಿಕಾರಿಯ ರೇಸ್‌ನಲ್ಲಿ ಅತೀ ಹೆಚ್ಚು ಕೇಳಿ ಬರುತ್ತಿರುವ ಹೆಸರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರದ್ದು. ನಂತರ ಬಿಜೆಪಿಯ ಸಾರಥ್ಯ ವಹಿಸುವ ಸಾಮರ್ಥ್ಯವಿರುವ ಮತ್ತೊಬ್ಬ ಪ್ರಭಾವಿ ನಾಯಕ ಅಮಿತ್ ಶಾ. ಮೋದಿಯವರ ‘ಬಲಗೈ ಬಂಟ’ ಎಂದೇ ಕರೆಸಿಕೊಳ್ಳುವ ಅಮಿತ್ ಶಾ ಕೂಡ ರೇಸ್ ನಲ್ಲಿ ಇದ್ದಾರೆ. […]

Continue Reading

ನ್ಯಾಯಾಧೀಶರಿಗೂ ಬಂತು ಆಯೋಗದ ನೋಟಿಸ್; ಆರ್‌ಟಿಐ ಮುಂದೆ ಇನ್ನು ಯಾರೂ ಅತೀತರಲ್ಲ!

​ನ್ಯಾಯಾಧೀಶರೇ ಆಗಿರಲಿ, ಇಲ್ಲವೇ ಜಿಲ್ಲಾಧಿಕಾರಿಗಳೇ ಆಗಿರಲಿ, ಮಾಹಿತಿ ಹಕ್ಕು ಕಾಯಿದೆ ಮುಂದೆ ಯಾರೂ ದೊಡ್ಡವರಲ್ಲ. ಇದನ್ನು ಗುಜರಾತ್ ಮಾಹಿತಿ ಆಯೋಗವು (GIC) ಮತ್ತೊಮ್ಮೆ ಸಾಬೀತುಪಡಿಸಿದೆ. ಮೆಹಸಾನಾ ಜಿಲ್ಲೆಯ ಮುಖ್ಯ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮಾಹಿತಿ ನೀಡಲು ವಿಳಂಬ ಮಾಡಿದ್ದಕ್ಕಾಗಿ, ಗುಜರಾತ್ ಮಾಹಿತಿ ಆಯೋಗವು ಅವರಿಗೆ ಕಟ್ಟುನಿಟ್ಟಿನ ನೋಟಿಸ್ ಜಾರಿ ಮಾಡಿದೆ. ​ನಿಗದಿತ ಹೊತ್ತಿನಲ್ಲಿ ಮಾಹಿತಿ ನೀಡದಿದ್ದರೆ, ಸೆಕ್ಷನ್ 20 ರ ಅಡಿಯಲ್ಲಿ ನಿಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಜರುಗಿಸಬಾರದು […]

Continue Reading