25 ವರ್ಷಗಳಲ್ಲಿ ಏನೇನು ಅಕ್ರಮಗಳಾಗಿವೆ ಎಂಬ ಬಗ್ಗೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಸಮಗ್ರ ತನಿಖೆ ಆಗಬೇಕು: ಬಿ.ಕೆ. ಹರಿಪ್ರಸಾದ್‌

ದ್ವೇಷ ರಾಜಕಾರಣ ಸಾಂಕ್ರಾಮಿಕ ರೋಗದಂತೆ, ಇವೆಲ್ಲಾ ಬಂದಿರುವುದು ನರೇಂದ್ರ ಮೋದಿ ಅವರಿಂದ ಅರ್ಕಾವತಿ ಡಿನೋಟಿಫಿಕೇಶನ್‌ ಕುರಿತು ಯಾರೋ ವಿಚಾರಣೆ ಮಾಡಿದರೆ ಸಾಲದು. 25 ವರ್ಷಗಳಲ್ಲಿ ಏನೇನು ಅಕ್ರಮಗಳಾಗಿವೆ ಎಂಬ ಬಗ್ಗೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಸಮಗ್ರ ತನಿಖೆ ಆಗಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯವರಿಂದ ಸಂಪೂರ್ಣ ತನಿಖೆ ನಡೆದರೆ ಯಾವುದೇ ಪಕ್ಷದವರಿರಲಿ, ಎಲ್ಲವೂ ಹೊರಗೆ ಬರಲಿದೆ. ಯಾರೆಲ್ಲ ಎಷ್ಟು ಶುದ್ದ ಹಸ್ತರು ಎಂಬುದು […]

Continue Reading

ರಾಹುಲ್ ಗೆ ‘ವಿಲನ್’ ಪಟ್ಟ ಕಟ್ಟಲು ಬಿಜೆಪಿ, ಕೆಲಮಾಧ್ಯಮಗಳ ಹರ ಸಾಹಸ.! ಸತ್ಯವನ್ನು ಸುಳ್ಳು ಎಂದು ನಂಬಿಸಲು ದೇಶದ ಜನ ಮೂರ್ಖರಲ್ಲ

ಲೋಕಸಭೆ ವಿರೋಧ ಪಕ್ಷದ ನಾಯಕರಾದ ನಂತರ ಇದೇ ಮೊದಲ ಬಾರಿಗೆ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ ರಾಹುಲ್ ಗಾಂಧಿ. ರಾಹುಲ್ ಅಮೆರಿಕಾ ಭೇಟಿ ರಾಜಕೀಯ ವಲಯಗಳಲ್ಲಿ ಭಾರೀ ಸಂಚಲನವನ್ನು ಸೃಷ್ಟಿಸಿದೆ. ಅಮೆರಿಕಾ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ರವರನ್ನು ರಾಹುಲ್ ಗಾಂಧಿ ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಮೇರಿಕಾದಲ್ಲಿ ರಾಹುಲ್ ಗಾಂಧಿ ಅನೇಕ ವಿಶ್ವವಿದ್ಯಾಲಯಗಳು, ಅನಿವಾಸಿ ಭಾರತೀಯರ ಸಭೆಯಲ್ಲಿ ಭಾಗವಹಿಸಿ ಸಂವಾದದಲ್ಲಿ ಮೋದಿಯನ್ನು, ಬಿಜೆಪಿಯನ್ನು, ಆರ್ ಎಸ್ ಎಸ್ ಅನ್ನು ಕೆಣಕುತ್ತಿದ್ದಾರೆ. ರಾಹುಲ್ ಗಾಂಧಿ ಭಾಷಣ […]

Continue Reading

ಹೆಲ್ಮೆಟ್‌, ದಾಖಲೆ ಇಲ್ಲದಿದ್ದರೆ ಪೊಲೀಸರು ದಂಡ ವಿಧಿಸುತ್ತಾರೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳದ ಅಧಿಕಾರಿಗಳಿಗೆ ದಂಡ ವಿಧಿಸುವವರು ಯಾರು.?

ರಸ್ತೆ ಗುಂಡಿಯಿಂದಾಗಿ ಅಪಘಾತ ಸಂಭವಿಸಿದರೆ, ಆ ರಸ್ತೆಯ ನಿರ್ವಹಣೆಯ ಹೊಣೆ ಹೊತ್ತ ಇಲಾಖೆಯೇ ಸಂತ್ರಸ್ತರಿಗೆ ಪರಿಹಾರ ನೀಡಬೇಕು: ಹೈಕೋರ್ಟ್‌ ರಸ್ತೆಯ ಗುಂಡಿ- ಹೊಂಡಗಳಿಗೆ ಬಿದ್ದು ಸತ್ತರೂ ಪೊಲೀಸರು ಮಾತ್ರ ಅಜಾಗರೂಕತೆಯ ಚಾಲನೆ ಎಂದು ಷರಾ ಬರೆಯುತ್ತಾರೆ. ಮಳೆಗಾಲ ಆರಂಭವಾಗುತ್ತಿದ್ದಂತೆ ಹಲವು ಕಡೆ ರಸ್ತೆಗಳಲ್ಲಿ ದೊಡ್ಡ ದೊಡ್ಡ ಗುಂಡಿಗಳು ಎದ್ದು ಅಪಘಾತಕ್ಕೆ ಕಾರಣವಾಗುತ್ತಿದೆ. ಮಳೆ ಬರುವ ಮುಂಚೆ ರಸ್ತೆಗಳ ಪ್ಯಾಚ್‌ ವರ್ಕ್ ಕೆಲಸ ಮಾಡದ ಹಿನ್ನೆಲೆಯಲ್ಲಿ ಆಗ ಸಣ್ಣ ಪ್ರಮಾಣದಲ್ಲಿದ್ದ ಗುಂಡಿಗಳು ಮಳೆಯ ಕಾರಣದಿಂದ ಇದೀಗ ಬೃಹತ್‌ ಹೊಂಡಗಳಾಗಿದೆ. […]

Continue Reading

ಕಮ್ಯೂನಿಸ್ಟ್ ಪಕ್ಷದ ಹಿರಿಯ ನಾಯಕ ಸೀತಾರಾಂ ಯೆಚೂರಿ ವಿಧಿವಶ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ, ಹಿರಿಯ ನಾಯಕ ಸೀತಾರಾಮ್ ಯೆಚೂರಿ ಅವರು ಗುರುವಾರ ನಿಧನರಾಗಿದ್ದಾರೆ. 72 ವರ್ಷ ಪ್ರಾಯದ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದಾಗಿ ಏಮ್ಸ್ ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಸದಸ್ಯರಾದ ಒಂದು ವರ್ಷದ ನಂತರ 1975 ರಲ್ಲಿ ಸೀತಾರಾಮ್ ಯೆಚೂರಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಗೆ ಸೇರಿದರು. ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ […]

Continue Reading

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಎನ್.ಡಿ.ಎ ಗೆ ಆಘಾತ.!

ಏಕನಾಥ್ ಶಿಂಧೆ ಸರ್ಕಾರ ಮಹಾರಾಷ್ಟ್ರದ ಜನರ ಮನಸ್ಸು ಗೆಲ್ಲುವಲ್ಲಿ ವಿಫಲ: ಲೋಕ್ ಪೋಲ್ ಸಮೀಕ್ಷೆ ಡಿಸೆಂಬರ್ ತಿಂಗಳಿನಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲಾ ಪ್ರಮುಖ ಪಕ್ಷಗಳು ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿವೆ. ಅಧಿಕಾರದಲ್ಲಿರುವ ಎನ್‌ಡಿಎ ಮತ್ತೊಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯಲು ಭಗೀರಥ ಪ್ರಯತ್ನ ನಡೆಸುತ್ತಿದೆ. ಈ ಬಾರಿ ಎನ್ ಡಿ ಎ ಗೆ ಆಘಾತ ಎದುರಾಗುವ ಸೂಚನೆ ಸಿಕ್ಕಿದೆ. ಲೋಕ್‌ಪೋಲ್ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟವಾಗಿದ್ದು, ಎನ್‌ಡಿಎಗೆ ಹಿನ್ನಡೆಯಾಗಲಿದೆ ಎಂದು ವರದಿಯಾಗಿದೆ. ಹಲವು ರಾಜ್ಯಗಳ ವಿಧಾನಸಭಾ […]

Continue Reading

ನಾಳೆ ಸಂಜೆಯೊಳಗೆ ತಮ್ಮ ಕರ್ತವ್ಯಕ್ಕೆ ಹಾಜರಾಗುವಂತೆ ವೈದ್ಯರಿಗೆ ಆದೇಶ

ಆದೇಶ ಪಾಲಿಸದಿದ್ದರೆ ರಾಜ್ಯ ಸರ್ಕಾರ ವೈದ್ಯರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬಹುದು: ಸುಪ್ರೀಂ ಕೋರ್ಟ್ ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರಿಗೆ ಸುಪ್ರೀಂ ಕೋರ್ಟ್ ನಾಳೆ ಮಂಗಳವಾರ ಸಂಜೆ 5 ಗಂಟೆಯೊಳಗೆ ತಮ್ಮ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ನೀಡಿದೆ. ವೈದ್ಯರು ಆದೇಶ ಪಾಲಿಸದಿದ್ದರೆ ರಾಜ್ಯ ಸರ್ಕಾರ ಅವರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬಹುದು […]

Continue Reading

ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಐದು ಮಂದಿ ಸಾವು; 24 ಜನರಿಗೆ ಗಾಯ

ಲಖನೌ: ನಗರದಲ್ಲಿ ಶನಿವಾರ ಸಂಜೆ ಮೂರು ಅಂತಸ್ತಿನ ಕಟ್ಟಡ ಕುಸಿದು ಐದು ಮಂದಿ ಮೃತಪಟ್ಟಿದ್ದಾರೆ. ಸುಮಾರು 24 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಐದು ಮಂದಿ ಮೃತಪಟ್ಟಿದ್ದು, 24 ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತುಗಳು ಇನ್ನಷ್ಟೇ ಪತ್ತೆಯಾಗಬೇಕಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ. ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಟ್ಟಡವನ್ನು ಉಗ್ರಾಣವಾಗಿ ಬಳಸಲಾಗುತ್ತಿತ್ತು. ಮೂರು ಅಂತಸ್ತಿನ ಕಟ್ಟಡದಲ್ಲಿ ಕೆಲವು ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದವು. […]

Continue Reading

ಒಂದು ಪಕ್ಷದಿಂದ ಗೆದ್ದು, ಮತ್ತೊಂದು ಪಕ್ಷಕ್ಕೆ ಜಿಗಿಯುವ ಶಾಸಕರು ಇನ್ನು ಮುಂದೆ ಪಿಂಚಣಿಯನ್ನು ಪಡೆಯುವುದಿಲ್ಲ.

ಹಿಮಾಚಲ ಪ್ರದೇಶದ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ಮಾದರಿ ಮಸೂದೆಯೊಂದನ್ನು ಅಲ್ಲಿನ ವಿಧಾನಸಭೆಯಲ್ಲಿ ಅಂಗೀಕರಿಸಿದೆ. ಒಂದು ಪಕ್ಷದಿಂದ ಗೆದ್ದು ಮತ್ತೊಂದು ಪಕ್ಷಕ್ಕೆ ಜಿಗಿಯುವ ಶಾಸಕರು ಇನ್ನು ಮುಂದೆ ಪಿಂಚಣಿಯನ್ನು ಪಡೆಯುವುದಿಲ್ಲ. ಹೀಗಾಗಿ ಪಕ್ಷಗಳಿಗೆ ಪಕ್ಷಾಂತರ ಮಾಡುವ ಹಿಮಾಚಲ ಪ್ರದೇಶದ ಶಾಸಕರಿಗೆ ಪಿಂಚಣಿ ಸಿಗುವುದಿಲ್ಲ. ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಂಡ ಶಾಸಕರಿಗೆ ಇದು ಅನ್ವಯಿಸುತ್ತದೆ ಎಂದು ಹೊಸ ಕಾನೂನು ಹೇಳುತ್ತದೆ. ಕಾಂಗ್ರೆಸ್‌ ಪಕ್ಷದಿಂದ ಬಿಜೆಪಿಗೆ ಹೋದವರು ಹಾಗೂ ಇನ್ನು ಮುಂದೆ ಹೋಗುವವರಿಗೆ ಪಾಠ ಕಲಿಸಲೆಂದೇ ಅಲ್ಲಿನ ಕಾಂಗ್ರೆಸ್‌ ಹೊಸ ಮಸೂದೆಯನ್ನು […]

Continue Reading

ಜಮ್ಮು ಮತ್ತು ಕಾಶ್ಮೀರದ ವಿಧಾಸಭೆ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಲಿದೆ. ಇಂಡಿಯಾ ಮೈತ್ರಿಕೂಟ ಭರ್ಜರಿ ಗೆಲುವು ಸಾದಿಸಲಿದೆ. ಸಮೀಕ್ಷೆಯಲ್ಲಿ ಬಹಿರಂಗ

90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದ ವಿಧಾಸಭೆಗೆ ಒಟ್ಟು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಸೆಪ್ಟೆಂಬರ್ 18ರಂದು ಮೊದಲ ಹಂತ, 25ರಂದು ಎರಡನೇ ಹಂತ ಮತ್ತು Oct ಒಂದರಂದು ಮೂರನೇ ಹಂತದ ಮತದಾನ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳಲ್ಲಿ ಚುನಾವಣಾ ಆಯೋಗವು ಕೆಲವು ಬದಲಾವಣೆಗಳನ್ನು ಮಾಡಿದೆ. ಚುನಾವಣಾ ಫಲಿತಾಂಶವನ್ನು ಅಕ್ಟೋಬರ್ 4 ರ ಬದಲು ಅಕ್ಟೋಬರ್ 8 ರಂದು ಪ್ರಕಟಿಸಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ […]

Continue Reading

ಬೆಂಗಳೂರು: ಬಾಂಗ್ಲಾ ಮೂಲದ ಅಪ್ರಾಪ್ತ ಬಾಲಕಿಯರನ್ನು ಕರೆತಂದು ಹೊಂಗಸಂದ್ರದ ಮನೆಯಲ್ಲಿಟ್ಟು ವೇಶ್ಯಾವಾಟಿಕೆ ದಂಧೆ

ಸಾಫ್ಟ್‌ವೇರ್‌ ಎಂಜಿನಿಯರ್‌ ಸುಬ್ರಹ್ಮಣ್ಯ ಶಾಸ್ತ್ರಿ ಅಪ್ರಾಪ್ತ ಹುಡುಗಿಯರನ್ನೇ ಬುಕ್‌ ಮಾಡುತ್ತಿದ್ದನಂತೆ. ಬಾಂಗ್ಲಾದೇಶದಿಂದ ಹುಡುಗಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬೆಂಗಳೂರಿನ ಹೊಂಗಸಂದ್ರ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದಾಗ ಬಾಂಗ್ಲಾದೇಶದ ಇಬ್ಬರು ಅಪ್ರಾಪ್ತ ಬಾಲಕಿಯರು ವೇಶ್ಯಾವಾಟಿಕೆಗೆ ಬಳಕೆಯಾಗುತ್ತಿರುವುದು ತಿಳಿದುಬಂದಿದೆ. ಕೂಡಲೇ ಸಿಸಿಬಿ ಪೊಲೀಸರು ಇಬ್ಬರೂ ಬಾಲಕಿಯರನ್ನು ರಕ್ಷಣೆ ಮಾಡಿದ್ದಾರೆ. ಪ್ರಕರಣ ಸಂಬಂಧ ಮೂವರು ವ್ಯಕ್ತಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಸಿಬ್ಬಂದಿ ಈ ದಾಳಿ ನಡೆಸಿದೆ. ಬಂಧಿತರಲ್ಲಿ […]

Continue Reading