ನೂತನವಾಗಿ ಆಯ್ಕೆಯಾದ ಲೋಕಸಭಾ ಸದಸ್ಯರ ಪೈಕಿ 251 ಮಂದಿ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಾಗಿವೆ

ಇವರಲ್ಲಿ 27 ಮಂದಿ ಶಿಕ್ಷೆಗೆ ಒಳಗಾದರು ಸೇರಿದ್ದಾರೆ ನೂತನವಾಗಿ ಆಯ್ಕೆಯಾದ ಲೋಕಸಭಾ ಸದಸ್ಯರ ಪೈಕಿ 251 ಮಂದಿ ವಿರುದ್ದ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಅವರಲ್ಲಿ 27 ಮಂದಿ ಶಿಕ್ಷೆಗೆ ಒಳಗಾದರು ಸೇರಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಮಾಡಿದೆ. 2019 ರಲ್ಲಿ 233 (43%), 2014 ರಲ್ಲಿ 185 (34%), 2009 ರಲ್ಲಿ 162 (30%) ಮತ್ತು 2004 ರಲ್ಲಿ 125 (23%) ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಈ ಬಾರಿಯ ಚುನಾವಣೆಯಲ್ಲಿ […]

Continue Reading

ಷೇರು ಮಾರುಕಟ್ಟೆಯಿಂದ ಒಂದೇ ದಿನ 30 ಲಕ್ಷ ಕೋಟಿ ರೂಪಾಯಿ ಹಗರಣ; ರಾಹುಲ್ ಗಾಂಧಿ ಗಂಭೀರ ಆರೋಪ

ಬಿಜೆಪಿಯವರು ಯಾವ ಆಧಾರದಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆಗೆ ಸಲಹೆ ನೀಡಿದರು.? ಷೇರು ಮಾರುಕಟ್ಟೆಯಿಂದ ಒಂದೇ ದಿನ 30 ಲಕ್ಷ ಕೋಟಿ ರೂಪಾಯಿ ಹಗರಣವಾಗಿದ್ದು, ಇದರಿಂದ ಸಾಮಾನ್ಯ ಜನರು ಬಹುದೊಡ್ಡ ನಷ್ಟ ಅನುಭವಿಸಿದ್ದಾರೆ ಎಂದು ನೂತನ ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮೀತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿಯವರು ಸ್ಟಾಕ್ ಮಾರ್ಕೆಟ್ […]

Continue Reading

ಸ್ಪೀಕರ್ ಹುದ್ದೆಯೂ ಸೇರಿದಂತೆ ಮಹತ್ವದ 5 ಸಂಪುಟ ಖಾತೆಗಳಿಗಾಗಿ ಬೇಡಿಕೆ ಇಟ್ಟ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶ: ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಲ್ಲೇ ಉಳಿಯುವುದಾಗಿ ಪುನರುಚ್ಚರಿಸಿದ್ದಾರೆ. ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸುವುದಾಗಿ ಹೇಳಿರುವ ಟಿಡಿಪಿ ಇದಕ್ಕೆ ಪ್ರತಿಯಾಗಿ ಬಿಜೆಪಿಯಿಂದ ಸ್ಪೀಕರ್ ಹುದ್ದೆಯೂ ಸೇರಿದಂತೆ ಮಹತ್ವದ 5 ಸಂಪುಟ ಖಾತೆಗಳಿಗಾಗಿ ಬೇಡಿಕೆ ಇರಿಸುವ ಬಹುತೇಕ ಸಾಧ್ಯತೆಗಳಿವೆ. 16 ಸಂಸದರನ್ನು ಹೊಂದಿರುವ ಟಿಡಿಪಿ ಎನ್‌ಡಿಎಯಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿದೆ. ಮೂರನೇ ಅವಧಿಯ ಮೋದಿ ಸರ್ಕಾರದಲ್ಲಿ ಪ್ರಮುಖ ಪಾತ್ರ ವಹಿಸಲು ದೃಢವಾದ ನಿಲುವನ್ನು ತೆಗೆದುಕೊಂಡಿರುವ ನಾಯ್ಡು, […]

Continue Reading

ಏಳು ಪೊಲೀಸ್ ಅಧಿಕಾರಿಗಳ ವಿರುದ್ಧ ಐಪಿಸಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಹೈಕೋರ್ಟ್ ಆದೇಶ

ಖಾಸಗಿ ವ್ಯಕ್ತಿಗಳ ವಿರುದ್ಧ ಅನ್ಯಕಾರಣಗಳಿಗಾಗಿ ಕಾನೂನುಬಾಹಿರ ಕ್ರಮಕ್ಕೆ ಸಂಬಂಧಿಸಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿದಂತೆ ಏಳು ಪೊಲೀಸ್ ಅಧಿಕಾರಿಗಳ ವಿರುದ್ಧ ಐಪಿಸಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿದೆ. ಅಂದಿನ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಎಂ ಕೆ ತಮ್ಮಯ್ಯ, ಇನ್ಸ್‌ಪೆಕ್ಟರ್ ಎಸ್‌ಆರ್ ವೀರೇಂದ್ರ ಪ್ರಸಾದ್, ಡಿವೈಎಸ್‌ಪಿ ಪ್ರಕಾಶ್ ರೆಡ್ಡಿ, ಇನ್‌ಸ್ಪೆಕ್ಟರ್ ಮಂಜುನಾಥ್ ಹೂಗಾರ್, ಡಿವೈಎಸ್‌ಪಿಗಳಾದ ವಿಜಯ್ ಹಡಗಲಿ ಮತ್ತು ಉಮಾ ಪ್ರಶಾಂತ್, ಎಡಿಜಿಪಿ ಸೀಮಂತಕುಮಾರ್ ಸಿಂಗ್. ಆ ಸಮಯದಲ್ಲಿ ಅವರು ಭ್ರಷ್ಟಾಚಾರ […]

Continue Reading

ಎನ್ ಡಿಎ ಕೂಟ ಅಧಿಕಾರಕ್ಕೇರಿದರೆ ಮೋದಿ ಪ್ರದಾನಿ ಅಭ್ಯರ್ಥಿಯಲ್ಲ; ನಿತಿನ್ ಗಡ್ಕರಿ.

ಎನ್ ಡಿಎ ಕೂಟಕ್ಕೆ ಈ ಬಾರಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಬದಲು ಹೊಸ ಹೆಸರು ಕೇಳಿಬರುತ್ತಿದೆ. ಮೋದಿ ನೇತೃತ್ವದಲ್ಲಿ ಈ ಬಾರಿ ಚುನಾವಣೆ ಎದುರಿಸಿದ್ದು ಬಿಜೆಪಿ ಏಕಾಂಗಿಯಾಗಿ ಬಹಮತ ಸಾಧಿಸಿರಲಿಲ್ಲ. ಬದಲಾಗಿ ಎನ್ ಡಿಎ ಮೈತ್ರಿ ಕೂಟವೂ ಸರಳ ಬಹುಮತ ಸಾಧಿಸಲಷ್ಟೇ ಯಶಸ್ವಿಯಾಗಿದೆ. ಇದೀಗ ಬಿಜೆಪಿಗೆ ಸರ್ಕಾರ ರಚಿಸಲು ಮಿತ್ರ ಪಕ್ಷಗಳ ನೆರವು ಬೇಕು. ಹೀಗಾದಲ್ಲಿ ಕೆಲವೊಂದು ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲೇಬೇಕಾಗುತ್ತದೆ. ನಿತೀಶ್ ಕುಮಾರ್ ಈ ಮೊದಲು ಮೋದಿ ಜೊತೆ ಮುನಿಸಿಕೊಂಡು ಯುಪಿಎ ಸೇರಿಕೊಂಡಿದ್ದರು. ತೀರಾ […]

Continue Reading

ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ರವರ ಅಂತಿಮ ತೀರ್ಮಾನದಿಂದ ಎನ್​ಡಿಎ ಭವಿಷ್ಯ ನಿರ್ಧಾರ.!

ನಿತೀಶ್ ಮತ್ತು ನಾಯ್ಡು ಕೈಯಲ್ಲಿ ಮುಂದಿನ ಸರ್ಕಾರ ಕೀಲಿಕೈ 18ನೇ ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಬಂದರೂ, ಕೇಂದ್ರದಲ್ಲಿ ಅಧಿಕಾರ ನಡೆಸಲು ಸದ್ಯದ ಮಟ್ಟಿಗೆ ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷ ಮತ್ತು ಬಿಹಾರದ ಜೆಡಿಯು ಪಕ್ಷಗಳು ಎನ್​ಡಿಎ ಜತೆಗಿದ್ದರೂ, ಎದುರಾಳಿ ಇಂಡಿಯಾ ಮೈತ್ರಿಕೂಟದ ವಿವಿಧ ನಾಯಕರು ಈಗಾಗಲೇ ಎನ್​ಡಿಎ ಮಿತ್ರಪಕ್ಷಗಳನ್ನು ಸೆಳೆಯುವ ಯತ್ನ ಮಾಡಿದ್ದಾರೆ. ಮೋದಿ ಅವರೇ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡುಗೆ ಕರೆ ಮಾಡಿ, ಎನ್​ಡಿಎ ಮೈತ್ರಿಕೂಟದಲ್ಲಿ ಉಳಿದುಕೊಳ್ಳುವಂತೆ ವಿನಂತಿಸಿಕೊಂಡಿದ್ದಾರೆ. ಫಲಿತಾಂಶದ ಹಿಂದಿನ […]

Continue Reading

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣ; ತೆಲಂಗಾಣದ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಬಂಧನ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣದ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ,ಹೈದರಾಬಾದ್ ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಸೊಸೈಟಿಯ ಸತ್ಯನಾರಾಯಣ ಇಟಕಾರಿ ಬಂಧಿತ ಆರೋಪಿ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಸಹಕಾರ ಬ್ಯಾಂಕ್‌ ಅಧ್ಯಕ್ಷರನ್ನು ಸಿಐಡಿ ಎಸ್‌ಐಟಿ ಮಂಗಳವಾರ ಬಂಧಿಸಿದೆ. ವಾಲ್ಮೀಕಿ ನಿಗಮದ 94.73 ಕೋಟಿ ರೂ. ದೋಚುವಲ್ಲಿ ಸತ್ಯನಾರಾಯಣ ಪ್ರಧಾನ ಸೂತ್ರಧಾರ. ಯೂನಿಯನ್‌ ಬ್ಯಾಂಕ್‌ನಲ್ಲಿರುವ ನಿಗಮದ ಖಾತೆಯಿಂದ […]

Continue Reading

CRZ ವ್ಯಾಪ್ತಿಯ ನೇತ್ರಾವತಿ ನದಿಯ ಮುಂಭಾಗದ ಕಾಮಗಾರಿಯನ್ನು ಮುಂದಿನ ವಿಚಾರಣೆಯ ತನಕ ಸ್ಥಗಿತಗೊಳಿಸಿದ ರಾಷ್ಟ್ರೀಯ ಹಸಿರು ಪೀಠ

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ನಡೆಯುತ್ತಿರುವ ನೇತ್ರಾವತಿ ನದಿಯ ಮುಂಭಾಗದ ಕಾಮಗಾರಿಯನ್ನು ಮುಂದಿನ ವಿಚಾರಣೆಯ ದಿನಾಂಕವಾದ ಜುಲೈ 2 ರವರೆಗೆ ಸ್ಥಗಿತಗೊಳಿಸುವಂತೆ ಮಧ್ಯಂತರ ಆದೇಶ ಹೊರಡಿಸಿದೆ. ಚೆನ್ನೈಯ ದಕ್ಷಿಣ ವಲಯದ ಎನ್‌ಜಿಟಿಯು ಮೇ 31 ರಂದು ಜಲಾಭಿಮುಖ ವಾಯುವಿಹಾರ ಯೋಜನೆ ನಿರ್ಮಾಣವನ್ನು ತಡೆಯಲು ಮಧ್ಯಂತರ ಆದೇಶ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯ ವೇಳೆ ಈ ಆದೇಶವನ್ನು ಹೊರಡಿಸಿತು. ಆದೇಶದಲ್ಲಿ, ಎನ್‌ಒಸಿ ಷರತ್ತುಗಳನ್ನು ಉಲ್ಲಂಘಿಸಿ ಕೆಲವು ಕಾಮಗಾರಿಗಳನ್ನು ನಡೆಸುತ್ತಿದ್ದಾರೆ ಎಂದು ಕರ್ನಾಟಕ ಎಸ್‌ಸಿಜೆಡ್‌ಎಂಎ […]

Continue Reading

ಅರೆಸೇನಾ ಪಡೆಯ ಮಹಿಳಾ ಸಿಬ್ಬಂದಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ; ಸಿಆರ್‌ಪಿಎಫ್‌ ಡಿಐಜಿ ಸೇವೆಯಿಂದ ವಜಾ

ದೇಶದ ಅತಿ ದೊಡ್ಡ ಅರೆಸೇನಾ ಪಡೆಯ ಕೆಲವು ಮಹಿಳಾ ಸಿಬ್ಬಂದಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಮೇಲೆ ಸಿಆರ್‌ಪಿಎಫ್‌ ಡಿಐಜಿಯೊಬ್ಬರನ್ನು ಕೇಂದ್ರ ಸರಕಾರ ಸೇವೆಯಿಂದ ವಜಾಗೊಳಿಸಿದೆ.ರಾಷ್ಟ್ರಪತಿ ಆದೇಶದ ಮೇರೆಗೆ ಡೆಪ್ಯುಟಿ ಇನ್ಸ್ ಪೆಕ್ಟರ್‌ ಜನರಲ್‌ (ಡಿಐಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಮಾಜಿ ಕ್ರೀಡಾ ಅಧಿಕಾರಿ ಖಾಜನ್‌ ಸಿಂಗ್‌ ವಿರುದ್ಧ ಸೇವೆಯಿಂದ ವಜಾ ಆದೇಶವನ್ನು ಹೊರಡಿಸಲಾಗಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಸಿಆರ್‌ಪಿಎಫ್‌ ಅಧಿಕಾರಿಗೆ ಗೃಹ ಸಚಿವಾಲಯ ಮತ್ತು ಕೇಂದ್ರ ಲೋಕಸೇವಾ ಆಯೋಗ ಎರಡು ಶೋಕಾಸ್ […]

Continue Reading

ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಬೆದರಿಸಿ ಹಣ ಸುಲಿಗೆ ಪ್ರಕರಣ; ಕೇರಳ ಮೂಲದ ಆರೋಪಿಗಳ ಬಂಧನ

ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಗಾಂಜಾ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಹಣ ಸುಲಿಗೆ ಮಾಡಿದ್ದ ಕೇರಳ ಗ್ಯಾಂಗ್ ವೊಂದನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.ಪ್ರಕರಣ ದಾಖಲಿಸಿಕೊಂಡ ಪೊಲೀಸರು 12 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ್ದಾರೆ. ತಿರುವನಂತಪುರದ ಹೊಟೇಲ್ ಉದ್ಯಮಿ ಎಎಸ್ ಪ್ರಮೋದ್ ಬೆಂಗಳೂರಿನಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿಗಳಾದ ಅನಂತಕೃಷ್ಣ ಮತ್ತು ಆದರ್ಶ್ ಮತ್ತು ದೀಪಕ್ ಆರ್ ಚಂದ್ರ ಬಂಧಿತ ಆರೋಪಿಗಳು। ಪೊಲೀಸರು ಆರೋಪಿಗಳಿಂದ ಎರಡು ಪೋರ್ ವೀಲ್ ವಾಹನಗಳು, ಒಂದು ಏರ್ ಪಿಸ್ತೂಲ್, ಕೈಕೋಳಗಳು, […]

Continue Reading