ಹಿಟ್‌ ರನ್‌ ಪ್ರಕರಣದ ನೂತನ ಕಾಯ್ದೆಯನ್ನು ವಿರೋಧಿಸಿ ವಿವಿಧೆಡೆ ಲಾರಿ ಚಾಲಕರ ಪ್ರತಿಭಟನೆ

ಹಿಟ್‌ & ರನ್‌ ಪ್ರಕರಣಕ್ಕೆ ಸಂಬಂಧಿಸಿದ ನೂತನ ಕಾನೂನು ವಿರೋಧಿಸಿ ವಿವಿಧ ರಾಜ್ಯಗಳಲ್ಲಿ ಲಾರಿ ಚಾಲಕರು ಮಂಗಳವಾರದಿಂದ ಮುಷ್ಕರ ನಡೆಸುತ್ತಿದ್ದು, ಮುಂಬರುವ ದಿನಗಳಲ್ಲಿ ಈ ಪ್ರತಿಭಟನೆ ತೀವ್ರಗೊಂಡರೆ ಇಂಧನ ಸರಬರಾಜು ಮೇಲೆ ಪರಿಣಾಮ ಬೀರಬಹುದೆಂಬ ಭೀತಿಯಿಂದಾಗಿ ಮಹಾರಾಷ್ಟ್ರ, ಛತ್ತೀಸ್‌ ಗಢ, ಮಧ್ಯಪ್ರದೇಶದಲ್ಲಿ ನೂರಾರು ಜನರು ಪೆಟ್ರೋಲ್‌ ಬಂಕ್‌ ಬಳಿ ಜಮಾಯಿಸಿರುವುದಾಗಿ ವರದಿಯಾಗಿದೆ. ಬ್ರಿಟಿಷ್‌ ಕಾಲದ ಇಂಡಿಯನ್‌ ಪೀನಲ್‌ ಕೋಡ್‌(IPC) ಅನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ್ದು, ನೂತನ ಕಾಯ್ದೆಯ ಪ್ರಕಾರ, ಹಿಟ್‌ ಆಂಡ್‌ ರನ್‌ ಕೇಸ್‌ ನಲ್ಲಿ ಆರೋಪಿ […]

Continue Reading

ಯುವಕರಿಗೆ ಲಕ್ಷ ಲಕ್ಷದ ಆಸೆ ತೋರಿಸಿ, ಮಹಿಳೆಯರನ್ನು ಗರ್ಭವತಿ ಮಾಡುವ ಕೆಲಸ ಕೊಡುತ್ತಿದ್ದ ಜಾಬ್ ಲಿಂಕ್ಸ್.!

ಬಿಹಾರ ರಾಜ್ಯದಲ್ಲಿ ವಿಲಕ್ಷಣ ಕೆಲಸ ನೀಡುವ ಏಜೆನ್ಸಿಯೊಂದು ಬೆಳಕಿಗೆ ಬಂದಿದೆ. ಯುವಕರಿಗೆ ಲಕ್ಷ ಲಕ್ಷ ರೂಪಾಯಿಗಳ ಆಸೆ ತೋರಿಸಿ ಮಹಿಳೆಯರನ್ನು ಗರ್ಭವತಿ ಮಾಡುವ ಕೆಲಸ ಕೊಡುತ್ತಿದೆ ಎಂದು ಮೋಸ ಮಾಡುವ ಜಾಬ್ ಲಿಂಕ್ಸ್ ಕಾರ್ಯಾಚರಿಯಿತ್ತಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಿಹಾರದ ನವಾಡದಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲಸದ ಅನಿವಾರ್ಯತೆಯಲ್ಲಿರುವ ಯುವಕರನ್ನು ಸಂಪರ್ಕಿಸಿ ಅವರಿಗೆ 13 ಲಕ್ಷ ನೀಡುವುದಾಗಿ ಆಸೆ ತೋರಿಸಿ, ಮಹಿಳೆಯರನ್ನು ಗರ್ಭವತಿ ಮಾಡುವ ಕೆಲಸ ಮಾಡಿಸುತ್ತಿತ್ತು ಈ ಗ್ಯಾಂಗ್. ‘ಆಲ್‌ ಇಂಡಿಯಾ ಪ್ರೆಗ್ನೆಂಟ್‌ ಜಾಬ್‌ ಸರ್ವೀಸ್‌’ […]

Continue Reading

ಬನರಾಸ್: ಐಐಟಿ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ: ಬಿಜೆಪಿ ಐಟಿ ಸೆಲ್‌ನ ಮೂವರ ಬಂಧನ

ದೇಶಾದ್ಯಂತ ಸುದ್ದಿಯಾಗಿದ್ದ ಬನಾರಸ್ ಹಿಂದೂ ವಿವಿ ಅವರಣದಲ್ಲಿ ಐಐಟಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಐಟಿ ಸೆಲ್‌ನಲ್ಲಿ ಗುರುತಿಸಿಕೊಂಡಿದ್ದ ಮೂವರು ಆರೋಪಿಗಳನ್ನು ಎರಡು ತಿಂಗಳ ಬಳಿಕ ಬಂಧಿಸಲಾಗಿದೆ. ಬಿಎಚ್‌ಯು ಕ್ಯಾಂಪಸ್‌ನಲ್ಲಿ ಐಐಟಿಯ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರನ್ನು ಕುನಾಲ್ ಪಾಂಡೆ, ಆನಂದ್ ಅಲಿಯಾಸ್ ಅಭಿಷೇಕ್ ಚೌಹಾಣ್ ಹಾಗೂ ಸಕ್ಷಮ್ ಪಟೇಲ್ ಎಂದು ಗುರುತಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಆರೋಪಿಗಳನ್ನು ಎರಡು ತಿಂಗಳು ನಂತರ ಪತ್ತೆ […]

Continue Reading

ರಸ್ತೆ ಬದಿಯಲ್ಲಿ ಪಕೋಡ ಮಾರುತ್ತಿದ್ದ ತಂದೆಯ ಮಗಳು ದೀಪೇಶ್ ಇಂದು IAS ಅಧಿಕಾರಿ.

ಪೋಷಕರ ತಾವು ಎಷ್ಟೇ ಕಷ್ಟಪಟ್ಟರೂ ತಮ್ಮ ಮಕ್ಕಳನ್ನು ಉನ್ನತ ಮಟ್ಟಕ್ಕೆ ತರಬೇಕು ಎನ್ನುವ ಆಸೆ ಇರುತ್ತದೆ. ಹೀಗೆ ಇಲ್ಲೊಬ್ಬಳು ಯುವತಿ ಕಷ್ಟಪಟ್ಟು ಓದಿ ಹೆತ್ತವರ ಆಸೆಯನ್ನು ಈಡೇರಿಸಿಕೊಂಡು ಯಶಸ್ಸು ಕಂಡಿದ್ದಾರೆ. ರಾಜಸ್ಥಾನದ ಭರತ್‌ಪುರದ ದೀಪೇಶ್ ಕುಮಾರಿ UPSC ಯಲ್ಲಿ ತನ್ನ ಎರಡನೇ ಪ್ರಯತ್ನದಲ್ಲಿ ಹಿಂಜರಿಯದೆ ಸಂದರ್ಶನದ ಸುತ್ತಿಗೆ ಬಂದಿದ್ದಾರೆ. ಪ್ರಭಾವಶಾಲಿ ಅಖಿಲ ಭಾರತ 93 ಶ್ರೇಣಿಯನ್ನು ಸಾಧಿಸಿದಳು. ಅವರ ತಂದೆ ಬೀದಿ ಬದಿ ವ್ಯಾಪಾರಿ. ಶಿಕ್ಷಣಕ್ಕೆ ಬಡತನ ಅಡ್ಡಿಯಲ್ಲ ಎಂಬುದನ್ನು ಸಾಬೀತು ಮಾಡಿದೆ. ಮೊದಲಿನಿಂದಲೂ ಸ್ಪಷ್ಟ ಯೋಜನೆಯೊಂದಿಗೆ […]

Continue Reading

ಉತ್ತರ ಪ್ರದೇಶ: ಹತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ

ಹೊಟೇಲ್ ಒಂದರಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಮೇಲೆ 4 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಪ್ರಕರಣ ಸಂಬಂಧ ಹೋಟೆಲ್ ಮಾಲೀಕ ಹಾಗೂ ಆತನ ಸಂಬಂಧಿಯನ್ನು ಬಂಧಿಸಲಾಗಿದೆ. ಸ್ಥಳೀಯಾಡಳಿತ ಹೋಟೆಲ್‌ಗೆ ಬೀಗ ಜಡಿದಿದೆ. ’15 ವರ್ಷದ ಬಾಲಕಿಯೊಬ್ಬಳು ಬುಧವಾರ ಕಾಣೆಯಾಗಿದ್ದಳು. ಬಳಿಕ ಆಕೆ ಪಕ್ಕದ ಹೋಟೆಲ್ ಒಂದರ ಕೋಣೆಯಲ್ಲಿ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಅಪರಿಚಿತ ವ್ಯಕ್ತಿಯೊಬ್ಬ ಆಕೆಯನ್ನು ಪ್ರಲೋಭಿಸಿ ಹೋಟೆಲ್‌ ಕೊಠಡಿಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಸಂಬಂಧಿಕರು ನೀಡಿದ ದೂರಿನನ್ವಯ […]

Continue Reading

ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಸುಳ್ಳು ಸಾಕ್ಷಿಯ ಅಪರಾಧಕ್ಕಾಗಿ ಅಪ್ರಾಪ್ತರನ್ನು ಶಿಕ್ಷಿಸಲಾಗುವುದಿಲ್ಲ: ಲಡಾಖ್ ಹೈಕೋರ್ಟ್

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ ಕಾಯಿದೆ) ಅಡಿಯಲ್ಲಿ ಸುಳ್ಳು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯದ ಸುಳ್ಳು ಹೇಳಿಕೆ ನೀಡಿದ್ದಕ್ಕಾಗಿ ಅಪ್ರಾಪ್ತ ವಯಸ್ಕ ವ್ಯಕ್ತಿಯನ್ನು (18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು) ಸುಳ್ಳುಸಾಕ್ಷಿಯ ಅಪರಾಧಕ್ಕಾಗಿ ಶಿಕ್ಷಿಸಲಾಗುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ಈಚೆಗೆ ಹೇಳಿದೆ. ಪೋಕ್ಸೊ ಕಾಯಿದೆಯ ಸೆಕ್ಷನ್ 22 (2) ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಸುಳ್ಳು ಮಾಹಿತಿ ನೀಡುವ ಅಪ್ರಾಪ್ತರಿಗೆ ಶಿಕ್ಷೆ ವಿಧಿಸುವುದನ್ನು ನಿಷೇಧಿಸುತ್ತದೆ ಎಂದು ನ್ಯಾಯಮೂರ್ತಿ […]

Continue Reading

ಪಿಯುಸಿ ವಿದ್ಯಾರ್ಥಿಯನ್ನು ಪುಸಲಾಯಿಸಿ ಆತನೊಂದಿಗೆ ಎಸ್ಕೇಪ್​ ಆದ ಶಿಕ್ಷಕಿ; ಪೋಕ್ಸೊ ಪ್ರಕರಣ ದಾಖಲು

ಶಿಕ್ಷಕಿಯೊಬ್ಬಳು ಪ್ರಥಮ ಪಿಯುಸಿ ತರಗತಿಯ ವಿದ್ಯಾರ್ಥಿಯನ್ನು ಪುಸಲಾಯಿಸಿ ಆತನೊಂದಿಗೆ ಎಸ್ಕೇಪ್​ ಆಗಿ ಕೊನೆಗೆ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಆರೋಪಿ ಶಿಕ್ಷಕಿಯ ವಿರುದ್ಧ ಪೊಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಿಕ್ಷಕಿ ಮತ್ತು ವಿದ್ಯಾರ್ಥಿ ಇಬ್ಬರು ಚೆನ್ನೈನ ಶೋಲಿಂಗನಲ್ಲೂರಿನಲ್ಲಿರುವ ಖಾಸಗಿ ಶಾಲೆಯವರು. ಇಬ್ಬರು ಕೊಯಮತ್ತೂರಿಗೆ ಎಸ್ಕೇಪ್​ ಆಗಿದ್ದರು. ಸದ್ಯ ಇಬ್ಬರನ್ನೂ ವಶಕ್ಕೆ ಪಡೆದು ಚೆನ್ನೈಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಶಿಕ್ಷಕಿ ಇಂಗ್ಲಿಷ್​ ಭಾಷೆ ಬೋಧನೆಯ ಟೀಚರ್ ಆಗಿದ್ದರು ಕೆಲವು ವರ್ಷಗಳ ಹಿಂದೆ ಗಂಡನಿಂದ […]

Continue Reading

2024ರ ಮಾರ್ಚ್ ಒಳಗಾಗಿ ಜಿಪಿಎಸ್ ಆಧಾರಿತ ಹೆದ್ದಾರಿ ಟೋಲ್ ಸಂಗ್ರಹ ವ್ಯವಸ್ಥೆ ಜಾರಿ: ನಿತೀನ್ ಗಡ್ಕರಿ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶುಲ್ಕ ಪಾವತಿಗಾಗಿ ಪ್ರಸ್ತುತ ಜಾರಿಯಲ್ಲಿರುವ ಫಾಸ್ಟ್‌ಟ್ಯಾಗ್ ಬದಲಾಗಿ ಜಿಪಿಎಸ್ ಆಧರಿತ ಟೋಲ್ ಸಂಗ್ರಹ ಸೌಲಭ್ಯವನ್ನು ಜಾರಿಗೆ ತರಲಾಗುತ್ತಿದ್ದು, ಹೊಸ ಶುಲ್ಕ ಪಾವತಿ ಸೌಲಭ್ಯವು ಸರಳ ಮತ್ತು ತ್ವರಿತ ಪ್ರಕ್ರಿಯೊಂದಿಗೆ ವಾಹನ ಮಾಲೀಕರಿಗೆ ತಡೆರಹಿತ ಪ್ರಯಾಣಕ್ಕೆ ಸಹಕಾರಿಯಾಗುವ ನೀರಿಕ್ಷೆಗಳಿವೆ. 2024ರ ಮಾರ್ಚ್ ಒಳಗಾಗಿ ಜಿಪಿಎಸ್ ಆಧಾರಿತ ಹೆದ್ದಾರಿ ಟೋಲ್ ಸಂಗ್ರಹ ವ್ಯವಸ್ಥೆಯು ಜಾರಿಯಾಗುವುದು ಬಹುತೇಕ ಖಚಿತವಾಗಿದ್ದು, ಇದು ಪ್ರಸ್ತುತ ಜಾರಿಯಲ್ಲಿರುವ ಶುಲ್ಕ ಸಂಗ್ರಹ ವಿಧಾನವನ್ನು ಮತ್ತಷ್ಟು ಸರಳಗೊಳಿಸುವುದಾಗಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ […]

Continue Reading

ತಾಯಿಯ ವಶದಲ್ಲಿದ್ದ ಮಗುವನ್ನು ತಂದೆ ಕರೆದೊಯ್ದರೆ ಅದು ಕಿಡ್ನಾಪ್ ಅಲ್ಲ: ಬಾಂಬೆ ಹೈಕೋರ್ಟ್

ತಾಯಿಯ ವಶದಲ್ಲಿದ್ದ ಮಗುವನ್ನು ಮಗುವಿನ ತಂದೆ ಕರೆದುಕೊಂಡು ಹೋದರೆ ಅದನ್ನು ಅಪಹರಣ ಎಂದು ಪರಿಗಣಿಸಲಾಗದು ಎಂದು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ಮಹತ್ವದ ತೀರ್ಪು ನೀಡಿದೆ. ಪರಿತ್ಯಕ್ತ ಪತ್ನಿಯ ಆರೈಕೆ ಮತ್ತು ಪೋಷಣೆಯಲ್ಲಿ ಇದ್ದ ಮೂರು ವರ್ಷದ ಮಗುವನ್ನು ಕರೆದೊಯ್ದ ಆರೋಪದ ಮೇಲೆ ಪತಿಯ ವಿರುದ್ಧ ಪತ್ನಿ ಅಪಹರಣ ಪ್ರಕರಣದ ದೂರನ್ನು ನೀಡಿದ್ದರು. ಈ ದೂರನ್ನು ದಾಖಲಿಸಿಕೊಂಡ ಪೊಲೀಸರು ಐಪಿಸಿ ಸೆಕ್ಷನ್ 363 ರ ಅಡಿಯಲ್ಲಿ ಅಪಹರಣ ಪ್ರಕರಣ ಕೇಸು ದಾಖಲಿಸಿದ್ದರು. ಈ ಪ್ರಕರಣವನ್ನು ವಜಾಗೊಳಿಸಬೇಕು ಎಂದು […]

Continue Reading

ರೆಸ್ಟೋರೆಂಟಿನಲ್ಲಿ ವೇಶ್ಯಾವಟಿಕೆ; 12 ಮಂದಿ ಬಾಲಕಿಯರೊಂದಿಗೆ 18 ಮಂದಿ ಬಾಲಕರ ಬಂಧನ

ರೆಸ್ಟೋರೆಂಟ್ ಒಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 12 ಮಂದಿ ಬಾಲಕಿಯರೊಂದಿಗೆ 18 ಮಂದಿ ಬಾಲಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. DYSP ನೇತೃತ್ವದಲ್ಲಿ ಹೋಟೆಲ್ ಮೇಲೆ ದಾಳಿ ನಡೆಸಿ ಇವರನ್ನು ಬಂದಿಸಲಾಗಿದೆ. ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿದ ಪೊಲೀಸರು ಆರ್ರಾ ಜಿಲ್ಲೆಯಲ್ಲಿರುವ ಹೋಟೆಲ್ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಯುವತಿಯರು ಸೇರಿದಂತೆ 30 ಜನರನ್ನು ಬಂಧಿಸಿದ್ದಾರೆ. ಹೋಟೆಲ್‌ ಮಾಲೀಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು […]

Continue Reading