ತನ್ನ ಹೆಂಡತಿಯನ್ನು ಬಲವಂತ ಮಾಡಿ ಲೈಂಗಿಕ ಕ್ರಿಯೆ ನಡೆಸಿದರೆ ಅದೂ ಕೂಡಾ ಅತ್ಯಾಚಾರ ಎಂದೇ ಪರಿಗಣಿಸಲಾಗುತ್ತದೆ: ಗುಜರಾತ್ ಹೈ ಕೋರ್ಟ್

ಗುಜರಾತ್: ಅತ್ಯಾಚಾರ ಎಂದರೆ ಬಲವಂತಾಗಿ ಲೈಂಗಿಕ ಕ್ರಿಯೆ ನಡೆಸುವಂತಹದ್ದು. ಅದನ್ನು ಯಾರು ಮಾಡಿದರೂ ಅತ್ಯಾಚಾರವೇ. ತನ್ನ ಹೆಂಡತಿಯನ್ನು ಬಲವಂತ ಮಾಡಿ ಲೈಂಗಿಕ ಕ್ರಿಯೆ ನಡೆಸಿದರೆ ಅದೂ ಕೂಡಾ ಅತ್ಯಾಚಾರ ಎಂದೇ ಪರಿಗಣಿಸಲಾಗುತ್ತದೆ ಎಂದು ಗುಜರಾತ್‌ ಹೈಕೋರ್ಟ್‌ ಹೇಳಿದೆ. ಆಸ್ಟ್ರೇಲಿಯಾ, ಅಮೆರಿಕ, ನ್ಯೂಜಿಲೆಂಡ್‌, ಕೆನಡಾ ಮುಂತಾದ ದೇಶಗಳಲ್ಲಿ ಬಲವಂತದಿಂದ ಗಂಡನೇ ಲೈಂಗಿಕ ಕ್ರಿಯೆ ನಡೆಸೋದೂ ಕಾನೂನು ಬಾಹಿರವಾಗಿದೆ. ಹೀಗಾಗಿ ಪತ್ನಿಗೆ ಇಷ್ಟವಿಲ್ಲದಿದ್ದರೂ ಬಲವಂತ ಮಾಡಿ ಲೈಂಗಿಕ ಕ್ರಿಯೆ ನಡೆಸಿದರೆ ಅದನ್ನು ನಾನು ಅಪರಾಧ ಎಂದು ಒಪ್ಪಿಕೊಳ್ಳುವೆ ಎಂದು ಗುಜರಾತ್​​​​ […]

Continue Reading

ಕೇರಳ,ತಮಿಳುನಾಡು ರಾಜ್ಯಗಳಲ್ಲಿ ಮತ್ತೆ ಕೊರೋನಾ ಉಲ್ಬಣವಾಗಿದ್ದು, ಲಾಕ್ ಡೌನ್ ವಿಧಿಸುವ ಸಾಧ್ಯತೆ ಇದೆ

ದೇಶವನ್ನೇ ಕಾಡಿ ಬೆಚ್ಚಿ ಬೀಳಿಸಿದ ಸಂಕ್ರಾಮಿಕ ರೋಗ ಕೊರೋನಾ ಮತ್ತೆ ಕೇರಳದಲ್ಲಿ ಉಲ್ಬಣವಾಗಿದ್ದು, ಜನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.ಭಾರತದಲ್ಲಿ ಮೊದಲ ಪ್ರಕರಣ ಕೇರಳದಲ್ಲೇ ಕಂಡು ಬಂದಿತ್ತು. ಈಗ ಮತ್ತೆ ಅದೇ ರಾಜ್ಯದಲ್ಲಿ ಸಂಕ್ರಾಮಿಕ ರೋಗದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ನಿರಂತರ ಮುಂಜಾಗ್ರತೆ ವಹಿಸುವಂತೆ ಸೂಚನೆಗಳನ್ನು ನೀಡಲಾಗಿದೆ. ಸಿಂಗಾಪುರ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ಹಲವಾರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಕೊರೋನಾ ಪ್ರಕರಣಗಳು ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಈ […]

Continue Reading

ಗುರ್ಪತ್‌ವಂತ್ ಸಿಂಗ್ ಪನ್ನುನ್ ಹತ್ಯೆ ಆರೋಪ; ಭಾರತೀಯ ಪ್ರಜೆ ನಿಖಿಲ್ ಗುಪ್ತಾ ಹಸ್ತಾಂತರಕ್ಕೆ ಅಮೇರಿಕ ಕೋರಿಕೆ

ಖಲಿಸ್ತಾನ್​ ಉಗ್ರ ಗುರ್ಪತ್‌ವಂತ್ ಸಿಂಗ್ ಪನ್ನುನ್​ನನ್ನು ಹತ್ಯೆಗೈದ ಸಂಚಿನಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಭಾರತೀಯ ಪ್ರಜೆ ನಿಖಿಲ್ ಗುಪ್ತಾರನ್ನು ಹಸ್ತಾಂತರಿಸುವಂತೆ ಅಮೆರಿಕಾ ಕೋರಿದೆ, ಜೆಕ್ ರಿಪಬ್ಲಿಕ್‌ ನಲ್ಲಿ ಈ ವರ್ಷದ ಆರಂಭದಲ್ಲಿ ಅವರನ್ನು ಬಂಧಿಸಲಾಗಿದೆ. ಚೆಕ್ ಗಣರಾಜ್ಯದ ನ್ಯಾಯ ಸಚಿವಾಲಯವು ನಿಖಿಲ್ ಗುಪ್ತಾ ಬಂಧನವನ್ನು ದೃಢಪಡಿಸಿದೆ. ಪನ್ನುನ್‌ನನ್ನು ಗುರಿಯಾಗಿಸಿಕೊಂಡು ‘ಬಾಡಿಗೆಗಾಗಿ ಕೊಲೆ’ ಸಂಚಿನಲ್ಲಿ ಭಾರತೀಯ ಪ್ರಜೆ ಗುಪ್ತಾ ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಯುನೈಟೆಡ್ ಸ್ಟೇಟ್ಸ್‌ನ ಆದೇಶದ ಮೇರೆಗೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಭಾರತೀಯ ಸರ್ಕಾರಿ ನೌಕರನ ನಿರ್ದೇಶನದ […]

Continue Reading

ಹದಿಹರೆಯದ ಯುವತಿಯನ್ನು ಮನೆಯ ವರಾಂಡದಿಂದಲೇ ಎಳೆದೊಯ್ದು ನಾಲ್ಕು ಮಂದಿ ಯುವಕರಿಂದ ಅತ್ಯಾಚಾರ.!

ಗುರಗಾಂವ್: ಖಾಸಗಿ ಶಾಲೆಯಲ್ಲಿ ಪಿಯುಸಿ ಓದುತ್ತಿರುವ ಹದಿಹರೆಯದ ಯುವತಿಯನ್ನು ಅಪಾಟ್ಮೆಂಟ್ ಒಂದಕ್ಕೆ ಎಳೆದೊಯ್ದ ನಾಲ್ಕು ಮಂದಿ ಯುವಕರ ತಂಡ ಆಕೆಯ ಮೇಲೆ ಅಮಾನುಷವಾಗಿ ಅತ್ಯಾಚಾರ ನಡೆಸಿ, ಮಾರನೆಯ ದಿನ ಬೆಳಿಗ್ಗೆ ಆಕೆಯ ಮನೆ ಬಳಿ ಬಿಟ್ಟು ಹೋದ ಘಟನೆ ನಡೆದಿರುತ್ತದೆ. ರವಿವಾರ ರಾತ್ರಿ ವಿಧ್ಯಾರ್ಥಿನಿಯನ್ನು ಅಪಹರಿಸಿದ್ದ ಆರೋಪಿಗಳು ಸೋಮವಾರ ಬೆಳಿಗ್ಗೆ ಆಕೆಯನ್ನು ಮರಳಿ ಕರೆ ತಂದು, ಆಕೆಯ ಮನೆಯ ಹೊರಗೆ ತಂದು ಬಿಟ್ಟು ಹೋಗಿದ್ದು, ಘಟನೆಯ ಬಗ್ಗೆ ಪೊಲೀಸರಿಗೆ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದಾರೆ. ಮಾಹಿತಿ ಪಡೆದ […]

Continue Reading

ಮಾಜಿ ಯೋಧನಿಗೆ ಮದುವೆ ಮಾಡಿಸಿ, ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

ಕೇರಳ ಮೂಲದ ಮಾಜಿ ಯೋಧರೊಬ್ಬರಿಗೆ ಮದುವೆ ಮಾಡಿಸುವುದಾಗಿ ನಂಬಿಸಿ 8 ಲಕ್ಷ ರೂಪಾಯಿ ನಗದು ಹಾಗು 2 ಲಕ್ಷ ರೂಪಾಯಿ ಮೌಲ್ಯದ ಚೆಕ್ ಪಡೆದು ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಸಮೀಪದ ನಿವಾಸಿ ಅಬ್ದುಲ್ ಬಶೀರ್, ಕಡಬದ ನಿವಾಸಿ ಸಾಧಿಕ್,ಮತ್ತೊಬ್ಬ ಆರೋಪಿ ಫೈಝಲ್, ಇವರುಗಳು ಈಗಾಗಲೇ ಬೇರೊಂದು ಪ್ರಕರಣದಲ್ಲಿ ಮೈಸೂರಿನಲ್ಲಿ ಬಂಧನವಾಗಿದ್ದಾರೆ. ಬಂಧಿತ ಆರೋಪಿಗಳಿಂದ ಮೊಬೈಲ್, ನಗದು ಹಾಗೂ ಚೆಕ್​ನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೋರ್ವ ಆರೋಪಿ ಅಮೀರ್ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಎರ್ನಾಕುಳಂ ಜಿಲ್ಲೆಯ ನಿವಾಸಿ, […]

Continue Reading

ಕಾನೂನಿಗಿಂತ ಯಾರೂ ದೊಡ್ಡವರಲ್ಲ; ಕರ್ತವ್ಯಕ್ಕೆ ಚ್ಯುತಿ ಬಂದರೆ ಸೂಕ್ತ ಪರಿಣಾಮ ಎದುರಿಸಲೇಬೇಕು: ಕೇರಳ ಹೈಕೋರ್ಟ್‌

ನ್ಯಾಯಾಧೀಶರೂ ಸೇರಿದಂತೆ ನ್ಯಾಯಾಂಗದ ಉನ್ನತ ಅಧಿಕಾರಿಗಳು ಕಾನೂನಿಗಿಂತ ದೊಡ್ಡವರಲ್ಲ. ಕರ್ತವ್ಯದಲ್ಲಿ ಲೋಪ ಮಾಡಿದರೆ, ಅಥವಾ ಬದ್ಧತೆಗೆ ಚ್ಯುತಿ ಬಂದರೆ ಅವರೂ ಕಾನೂನು ಪ್ರಕಾರ ಸೂಕ್ತ ಪರಿಣಾಮವನ್ನು ಎದುರಿಸಬೇಕು ಎಂದು ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಲಕ್ಷದ್ವೀಪದ ಮಾಜಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಕೆ. ಚೆರಿಯ ಕೋಯಾ ಅವರನ್ನು ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಿದ ಕೇರಳ ಹೈಕೋರ್ಟ್ ನ್ಯಾಯಪೀಠ, ಈ ಮಹತ್ವದ ಆದೇಶ ನೀಡಿದೆ. ಇಂತಹ ತೀರ್ಪುಗಳು ಎಲ್ಲರಿಗೂ ಪಾಠವಾಗಬೇಕು. ತಪ್ಪು ಎಸಗಿದ್ದರೆ ನ್ಯಾಯಾಧೀಶರೂ […]

Continue Reading

ರಾಜಸ್ಥಾನ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ.. ವಸುಂಧರಾ ರಾಜೇ ಬಣದ ಬಿಜೆಪಿಯ 30 ಶಾಸಕರು ಕಾಂಗ್ರೆಸ್ ನತ್ತ.??

ಪಂಚರಾಜ್ಯ ಚುನಾವಣೆಯಲ್ಲಿ ಉತ್ತರ ಭಾರತದಲ್ಲಿ ನಮ್ಮದೇ ಹವಾ ಎಂಬುದನ್ನು ಮೋದಿ ನೇತೃತ್ವದ ಬಿಜೆಪಿ ಇದೀಗ ಸಾಬೀತುಪಡಿಸಿದೆ. ದಕ್ಷಿಣ ಭಾರತದ ರಾಜ್ಯಗಳು ಬಿಜೆಪಿಗೆ ಬಾಗಿಲು ಬಂದ್ ಮಾಡಿದರೂ ಉತ್ತರ ಭಾರತದ ಮತದಾರ ಈಗಲೂ ಬಿಜೆಪಿ, ಮೋದಿಗೆ ಜೈ ಅನ್ನುತ್ತಿದ್ದಾರೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಡದಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದೆ. ಕಾಂಗ್ರೆಸ್ ಪಕ್ಷ ತೆಲಂಗಾಣ ಗೆದ್ದು ಅಲ್ಲಿ ಸರ್ಕಾರ ಪ್ರತಿಷ್ಠಾಪಿಸಿದೆ. ಆದರೆ ಬಿಜೆಪಿ ಮೂರು ರಾಜ್ಯಗಳನ್ನು ಗೆದ್ದರೂ ಹೊಸ ಸರಕಾರ ಅಸ್ತಿತ್ವಕ್ಕೆ ತರಲು ಹೆಣಗಾಡುತ್ತಿದೆ. ಇದರಲ್ಲಿ ರಾಜಸ್ಥಾನ ಇದೀಗ ಬಿಜೆಪಿ […]

Continue Reading

ಮುಖಂಡರ ದುರಂಹಕಾರ, ಸಂವಹನ ಕೊರತೆ, ಗುಂಪುಗಾರಿಕೆ. ಅಡ್ಜಸ್ಟ್ ಮೆಂಟ್ ರಾಜಕೀಯ, ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣ

ಕಾಂಗ್ರೆಸ್ ಸೋಲಿಸಬೇಕಾಗಿರುವುದು ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳನ್ನು ಪಂಚರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ದಯನೀಯವಾಗಿ ಸೋಲುವುದರೊಂದಿಗೆ ಕಾಂಗ್ರೆಸ್ INDIA ಮೈತ್ರಿ ಕೂಟವನ್ನು ಸೋಲಿಸುವುದರೊಂದಿಗೆ ಬಿಜೆಪಿ ವಿರುದ್ಧದ ಪ್ರತಿಪಕ್ಷಗಳ ಹೋರಾಟಕ್ಕೆ ಬಹುದೊಡ್ಡ ಕಂಟಕವಾಗಿ ಪರಿಣಮಿಸಿದೆ. ಬಿಜೆಪಿಯೇತರ ಪಕ್ಷಗಳನ್ನು ಸೋಲಿಸುವಲ್ಲಿ ಕಾಂಗ್ರೆಸ್ಸಿಗಿರುವ ಉತ್ಸಾಹ ಬಿಜೆಪಿಯನ್ನು ಸೋಲಿಸುವಲ್ಲಿ ಇಲ್ಲ. ಕಾಂಗ್ರೆಸ್ ನೇತೃತ್ವದ ಯುಪಿಎ2 ರ ವೈಫಲ್ಯಗಳೇ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರಕಾರ ಅಧಿಕಾರಕ್ಕೆ ಬರಲು ಕಾರಣವಾಯಿತು. ಬಿಜೆಪಿ ಸರಕಾರ ಬಂದ ನಂತರ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತು. ಜನರು […]

Continue Reading

ಮ್ಯೂಸಿಕ್ ಕಂಪನಿ ಮಾಲೀಕನ ವಿರುದ್ಧ ವಿದೇಶಿ ಮಹಿಳೆಯನ್ನು ಅತ್ಯಾಚಾರ ಹಾಗೂ ಲೈಂಗಿಕ ಶೋಷಣೆ ಮಾಡಿದ ಆರೋಪ, ಕೇಸು ದಾಖಲು

ಮುಂಬೈನ ಮ್ಯೂಸಿಕ್ ಕಂಪನಿ ಮಾಲೀಕನೊಬ್ಬನ ವಿರುದ್ಧ ವಿದೇಶಿ ಮಹಿಳೆಯೊಬ್ಬರು ಅತ್ಯಾಚಾರ ಹಾಗೂ ಲೈಂಗಿಕ ಶೋಷಣೆ ಆರೋಪ ಮಾಡಿದ್ಧಾರೆ. ಸಂಗೀತ ಕಾರ್ಯಕ್ರಮಕ್ಕೆ ಬಂದಿದ್ದ ವಿದೇಶಿ ಮಹಿಳಾ ಡಿಜೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮ್ಯೂಸಿಕ್ ಕಂಪನಿ ಮಾಲೀಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮ್ಯೂಸಿಕ್ ಈವೆಂಟ್ ಕಂಪನಿಯಾದ ಸ್ಲಿಕ್ ಎಂಟರ್‌ಟೈನ್‌ಮೆಂಟ್ ಮಾಲೀಕ ಪ್ರತೀಕ್ ಪಾಂಡೆ ಎಂಬಾತನೇ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ವಿವಾಹಿತನಾಗಿದ್ದು, 2020ರಲ್ಲಿ ಮದುವೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಇದೀಗ ವಿದೇಶಿ ಮಹಿಳೆ ನೀಡಿದ ದೂರಿನಡಿ […]

Continue Reading

ಕೊರಿಯರ್ ಪಾರ್ಸಲ್ ಹೆಸರಿನಲ್ಲಿ ವಂಚನೆ; ಆರೋಪಿಗಳ ಬಂಧನ

ಫೆಡೆಕ್ಸ್ ಕೊರಿಯರ್ ಪಾರ್ಸಲ್ ಹೆಸರಿನಲ್ಲಿ ಸೈಬರ್ ವಂಚನೆ ಮಾಡುತ್ತಿದ್ದ 8 ಮಂದಿ ಆರೋಪಿಗಳನ್ನು ಉತ್ತರ ವಿಭಾಗದ ಸಿಇಎನ್ ಸೈಬರ್ ಕ್ರೈಮ್ ಠಾಣೆ ಪೊಲೀಸರು ಬಂಧಿಸಿ 13.17 ಲಕ್ಷ ಹಣ ಹಾಗೂ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ 19 ಲಕ್ಷ ಹಣ ಪ್ರೀಜ್ ಮಾಡಿದ್ದಾರೆ. ಅಲ್ಲದೆ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ 11 ಮೊಬೈಲ್, ವಿವಿಧ ಬ್ಯಾಂಕ್‍ನ 148 ಖಾತೆಗಳ ಪ್ರೀಜ್, ಚೆಕ್‍ಬುಕ್, ಪಾಸ್‍ಬುಕ್ ಮತ್ತು ಎಟಿಎಂ ಕಾರ್ಡ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ.10ರಂದು ವಾಟ್ಸ್‍ಫ್ ಆಡಿಯೋ ಕಾಲ್‍ನಿಂದ ವ್ಯಕ್ತಿಯೊಬ್ಬರನ್ನು […]

Continue Reading